ಆರ್‌ಎಸ್‌ಎಸ್‌ ದೊಣ್ಣೆ ಹಿಡಿದು ಪಥಸಂಚಲನ ನಡೆಸಲು ಅನುಮತಿ ಕೂಡದು: ದಸಂಸ ಒಕ್ಕೂಟ

Date:

ದೊಣ್ಣೆ ಹಿಡಿದು ಪಥ ಸಂಚಲನ ನಡೆಸುವುದಕ್ಕೆ ಆರ್‌ಎಸ್‌ಎಸ್‌ಗೆ ಅನುಮತಿ ನೀಡಕೂಡದು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟವು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಪ್ರಿಯಾಂಕ್‌ ಖರ್ಗೆ ಅವರ ಸೈದ್ಧಾಂತಿಕ ಹೋರಟಕ್ಕೆ ಬೆಂಬಲ ಘೋಷಿಸಿದೆ.

ಆರ್‌ಎಸ್‌ಎಸ್‌ ಮೆರವಣಿಗೆ ಮಾಡಲು ಬಯಸಿದರೆ ಅದಕ್ಕೆ ನಮ್ಮ ಆಕ್ಷೇಪಣೆ-ತಕರಾರು ಇಲ್ಲ. ಆದರೆ, ಮಾರಕಾಸ್ತ್ರಗಳಲ್ಲಿ ಒಂದಾದ ದೊಣ್ಣೆ ಹಿಡಿದು ಮೆರವಣಿಗೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಆದ್ದರಿಂದ, ಈ ಸಂವಿಧಾನ ವಿರೋಧಿ ನಡೆಗೆ ನಮ್ಮ ತೀವ್ರ ವಿರೋಧ ಇದೆಯೆಂದು ಒಕ್ಕೂಟ ಹೇಳಿದೆ.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ರಾಜ್ಯ ಸಂಘಟನಾ ಸಂಚಾಲಕ ಇಂದೂಧರ ಹೊನ್ನಾಪುರ, ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಯೋಜಕ ವಿ.ನಾಗರಾಜು, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಎನ್.ಮುನಿಸ್ವಾಮಿ ಹಾಗೂ ಎನ್.ವೆಂಕಟೇಶ್ ಅವರು ಈ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಸ್ತವವಾಗಿ ಪಥಸಂಚಲನ ಮಾಡುವ ಅಧಿಕಾರ ಸಾಂವಿಧಾನಿಕವಾಗಿ ಇರುವುದು ಪೊಲೀಸ್ ಮತ್ತು ಇನ್ನಿತರ ರಕ್ಷಣಾ ಪಡೆಗಳಿಗೆ ಮಾತ್ರ. ಆರ್‌ಎಸ್‌ಎಸ್‌ ಸೇರಿದಂತೆ ಇತರ ಯಾವುದೇ ಸಂಘ ಸಂಸ್ಥೆಗಳು ಮೆರವಣಿಗೆ-ಪ್ರತಿಭಟನೆ ಮಾಡಬಹುದೇ ಹೊರತು ‘ಪಥಸಂಚಲನ’ವನ್ನಲ್ಲ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಹಾಗೂ ಜಾತ್ಯತೀತತೆಯನ್ನು ಒಪ್ಪದ ಆರ್‌ಎಸ್‌ಎಸ್‌ ಒಂದೇ ಧರ್ಮದ ಚೌಕಟ್ಟಿನೊಳಗೆ ದೇಶ ಕಟ್ಟುವ ಮಾತನಾಡುತ್ತಿದೆ. ಸಮತೆ ಮಮತೆ ಅಂತಃಕರಣ ಮಾನವೀಯತೆ ಮತ್ತು ಕೋಮು ಸಾಮರಸ್ಯದಂತಹ ಗುಣಗಳನ್ನು ಎಂದಿಗೂ ಮೈಗೂಡಿಸಿಕೊಳ್ಳದ ಆರ್.ಎಸ್.ಎಸ್. ಸ್ಪೃಶ್ಯ-ಅಸ್ಪೃಶ್ಯ, ಮಡಿ-ಮೈಲಿಗೆ, ಲಿಂಗತಾರತಮ್ಯದಂತಹ ಅಸಮಾನತೆಯನ್ನು ಬೆಂಬಲಿಸುತ್ತಿದೆ. ರಾಜ್ಯಾಂಗದ ಬದಲಿಗೆ ಪಂಚಾಂಗದ ಮೂಲಕ ಆಡಳಿತ ನಡೆಸಲು ಹವಣಿಸುತ್ತಿದೆ. ಈ ಅನಾಗರಿಕ ಪ್ರವೃತ್ತಿಯನ್ನು ನಾಗರಿಕ ಸಮಾಜವು ಖಂಡಿಸಬೇಕು ಮತ್ತು ಅದರ ವಿರುದ್ಧ  ದನಿ ಎತ್ತಬೇಕು” ಎಂದು ಒಕ್ಕೂಟ ಕರೆ ನೀಡಿದೆ.

ಈ ಲೇಖನ ಓದಿದ್ದೀರಾ?: ತೆರಿಗೆ ಹಂಚಿಕೆ | ಕರ್ನಾಟಕಕ್ಕೆ ಮತ್ತೆ ಕಾದಿದೆಯಾ ಭಾರೀ ಅನ್ಯಾಯ? ಕೇಂದ್ರದ ಸಮರ್ಥನೆಗೆ ರಾಜ್ಯ ಬಿಜೆಪಿ ಸಿದ್ದ

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಎಂದೂ ಭಾಗವಹಿಸದ, ತ್ರಿವರ್ಣ ಧ್ವಜ, ರಾಷ್ಟ್ರಗೀತೆ ಹಾಗೂ ಸಂವಿಧಾನವನ್ನು ಒಪ್ಪದ ಆರ್‌ಎಸ್‌ಎಸ್‌ ಹಿಂದುತ್ವದ ಹೆಸರಿನಲ್ಲಿ ಬ್ರಾಹ್ಮಣ್ಯದ ಪಾರಮ್ಯವನ್ನು ಜನಸಾಮಾನ್ಯರ ಮೇಲೆ ಹೇರುತ್ತಿದ್ದು, ಜನರ ಮನಸ್ಸಿನಲ್ಲಿ ಜಾತೀಯತೆ-ಮತೀಯತೆ, ಮೌಢ್ಯ, ಮೂಢನಂಬಿಕೆಗಳ ವಿಷಬೀಜ ಬಿತ್ತುತ್ತಿದೆ. ಆರ್‌ಎಸ್‌ಎಸ್‌ ವರಿಷ್ಠ ಮೋಹನ್ ಭಾಗವತ್ ಅವರಿಂದ ತಳಹಂತದ ಎಲ್ಲ ಪದಾಧಿಕಾರಿಗಳವರೆಗೂ ಬ್ರಾಹ್ಮಣರದ್ದೇ ಪಾರುಪತ್ಯ ಮಾಡಿಕೊಂಡು, ಬಜರಂಗದಳ, ಶ್ರೀರಾಮ ಸೇನೆ, ವಿಶ್ವಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಸೇರಿದಂತೆ ಹಿಂದುತ್ವದ ಹೆಸರಿನಲ್ಲಿ ಶೂದ್ರ ಸಮುದಾಯಗಳ ಯುವಕರಿಗೆ ದೊಣ್ಣೆ, ತಲವಾರ್, ತ್ರಿಶೂಲ ಸೇರಿದಂತೆ ಮಾರಕಾಸ್ತ್ರಗಳನ್ನು ನೀಡಿ ಕೋಮು ಹಿಂಸಾ ಕೃತ್ಯಗಳಿಗೆ ಪ್ರೇರೇಪಿಸುತ್ತ ಅವರನ್ನು ತನ್ನ ಕಾಲಾಳುಗಳನ್ನಾಗಿ ಮಾಡಿಕೊಳ್ಳುತ್ತಿದೆ.

ಪ್ರಿಯಾಂಕ ಖರ್ಗೆ ಹೋರಾಟಕ್ಕೆ ಬೆಂಬಲ

ದೇಶದ ಯಾವುದೇ ಕಾನೂನಿನ ಅನ್ವಯ ನೋಂದಣಿ ಆಗದೆ ಇರುವ ಆರ್‌ಎಸ್‌ಎಸ್‌ ಸರ್ಕಾರಿ-ಅನುದಾನಿತ ಶಾಲಾ-ಕಾಲೇಜು ಆವರಣದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರವಾದ ದೊಣ್ಣೆ ಹಿಡಿದು ಪಥಸಂಚಲನ ಸೇರಿದಂತೆ ಇನ್ನಿತರ ಜನವಿರೋಧಿ, ದೇಶವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಪ್ರತಿರೋಧ ವ್ಯಕ್ತಪಡಿಸಿ ಸಚಿವ ಪ್ರಿಯಾಂಕ ಖರ್ಗೆ ಅವರು ಆರಂಭಿಸಿರುವ ‘ಸೈದ್ಧಾಂತಿಕ ಹೋರಾಟ’ಕ್ಕೆ ಒಕ್ಕೂಟ ತನ್ನ ಬೆಂಬಲ ಸಾರಿದೆ.

ಪ್ರಿಯಾಂಕ ಖರ್ಗೆ ಅವರು ಎತ್ತಿರುವ ಸೈದ್ಧಾಂತಿಕ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಹತಾಶೆಯಲ್ಲಿರುವ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯು ಖರ್ಗೆ ಮತ್ತು ಅವರ ಕುಟುಂಬದ ಮೇಲೆ ವೈಯಕ್ತಿಕವಾಗಿ ಕ್ಷುಲ್ಲಕ ದಾಳಿ ನಡೆಸುತ್ತ, ದ್ವೇಷ ಕಾರುತ್ತಿರುವುದನ್ನು ಹಾಗೂ ‘ಪ್ರಿಯಾಂಕ ಖರ್ಗೆ ಅವರ ಮನೆಗೇ ನುಗ್ಗುತ್ತೇವೆ ‘ಎಂದು ಬೆದರಿಕೆ ಹಾಕಿರುವ ಬಿಜೆಪಿ ಮುಖಂಡ ಮಣಿಕಾಂತ ರಾಥೋಡ್ ಅವರ ಗೂಂಡಾಗಿರಿ ನಡೆಯನ್ನು ಒಕ್ಕೂಟವು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...