ಮಾಧ್ಯಮದವರು ಪದೇ ಪದೆ ನಾಯಕತ್ವ ಬದಲಾವಣೆ ಬಗ್ಗೆ ನನ್ನ ಕೇಳಬೇಡಿ:‌ ಡಿಸಿಎಂ ಡಿ ಕೆ ಶಿವಕುಮಾರ್

Date:

ಸಿಎಂ ಬದಲಾವಣೆ ವಿಚಾರವಾಗಿ ನಿಮ್ಮ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳೇ ಉತ್ತರ ನೀಡಿದ್ದಾರೆ. ಅವರು ಉತ್ತರ ನೀಡಿದ ಮೇಲೆ ನಾವು ಮತ್ತೆ ಆ ವಿಚಾರ ಚರ್ಚೆ ಮಾಡುವುದು ಸೂಕ್ತವಲ್ಲ. ನೀವುಗಳು ಸಹ ಮತ್ತೆ ಆ ವಿಚಾರವಾಗಿ ಪ್ರಶ್ನೆ ಮಾಡುವುದು ಸೂಕ್ತವಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿ, “ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದರು.

ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಹೇಳುವ ಮುನ್ನ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿರುವುದು ಎಷ್ಟು ಸರಿ ಎಂದು ಕೇಳಿದಾಗ, “ನೀವು ನನಗೆ ಹೇಗೆ ತಿರುಗಿಸಿ ಕೇಳಿದರೂ ನಾನಂತೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಿಮಗೆ ಬಲಿಯಾಗುವುದಿಲ್ಲ. ನಿಮ್ಮ ಪ್ರಶ್ನೆಗಳಲ್ಲೇ ಉತ್ತರವಿದೆ. ಪಕ್ಷ ಕೊಟ್ಟಿರುವ ಜವಾಬ್ದಾರಿ ಮುಂದುವರಿಸಿಕೊಂಡು ಹೋಗುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಧೀಕ್ಷೆ ನೀಡಿದ್ದು, ನಾವೆಲ್ಲರೂ ಅದನ್ನು ಸಂತೋಷವಾಗಿ ಸ್ವೀಕರಿಸಿದ್ದೇವೆ. ಇದರ ಹೊರತಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈಕಮಾಂಡ್ ಭೇಟಿಯಾಗಿ ಯಾವೆಲ್ಲಾ ರಾಜಕೀಯ ಚರ್ಚೆ ನಡೆಯಿತು ಎಂದು ಕೇಳಿದಾಗ, “ನಾವು ಸುರ್ಜೆವಾಲಾ ಅವರ ಹೊರತಾಗಿ ಬೇರೆ ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿಯಾಗಿಲ್ಲ. ರಾಜ್ಯ ಉಸ್ತುವಾರಿಗಳ ಜೊತೆ ನಮ್ಮ ಕಾರ್ಯಕರ್ತರಿಗೆ ಕೆಲವು ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲಾ ಶಾಸಕರು ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ. ಸಚಿವರ ಅಭಿಪ್ರಾಯ ಸಂಗ್ರಹಿಸಬೇಕಿದೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಶ್ರಮಿಸಿರುವವರಿಗೆ ಹಾಗೂ ಕೆಲವರಿಗೆ ನಾವು ಕೊಟ್ಟಿರುವ ಮಾತಿಗೆ ಬದ್ಧವಾಗಿ ಸ್ಥಾನಮಾನ ನೀಡಬೇಕಿದೆ. ಈ ಪ್ರಕ್ರಿಯೆ ಈಗಾಗಲೇ ತಡವಾಗಿದೆ. ಇದು ಅಂತಿಮ ಹಂತಕ್ಕೆ ಬಂದಿದೆ. ಅಧ್ಯಕ್ಷನಾಗಿ ನಾನು ಪಕ್ಷದ ಸಂಘಟನೆಗೆ ಶ್ರಮಿಸಿದವರ ಹೆಸರನ್ನು ಸೇರಿಸಿ ಇದರ ಪ್ರಸ್ತಾವನೆಯನ್ನು ಮತ್ತೊಮ್ಮೆ ದೆಹಲಿಗೆ ಕಳುಹಿಸಿ ಅನುಮತಿ ಪಡೆಯಲಾಗುವುದು” ಎಂದರು.

ಡಿ.ಕೆ. ಶಿವಕುಮಾರ್ ಅವರಿಗೆ ಕೆಲವು ಶಾಸಕರ ಬೆಂಬಲ ಮಾತ್ರವಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಪಕ್ಷದ ರಾಜ್ಯ ಅಧ್ಯಕ್ಷ. ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ. ನಾನು ನಿನ್ನೆ ಬ್ಯುಸಿ ಇದ್ದೆ. ಅದರ ಮಧ್ಯೆ ಮುಖ್ಯಮಂತ್ರಿಗಳ ಹೇಳಿಕೆ ನೋಡಿದೆ” ಎಂದು ಹೇಳಿದರು.

ಈ ಹಿಂದೆ ನನ್ನ ಬಳಿ ಆಯ್ಕೆ ಇಲ್ಲ ಎಂದು ಹೇಳಿದ್ದಿರಿ, ಈಗಲೂ ನೀವು ಅದೇ ಸ್ಥಿತಿಯಲ್ಲಿದ್ದೀರಾ ಎಂದು ಕೇಳಿದಾಗ, “ನಿಮಗೆ ನಮ್ಮ ವಿಚಾರದಲ್ಲಿ ಯಾಕೆ ಗಾಬರಿ? ಈ ವಿಚಾರದಲ್ಲಿ ನಮಗೆ ಗಾಬರಿಯಿಲ್ಲ” ಎಂದರು.

2028ರ ಚುನಾವಣೆಗೂ ನನ್ನದೇ ನಾಯಕತ್ವ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ವೈಯಕ್ತಿಕ ಹೇಳಿಕೆ. ಅದನ್ನು ಹೇಳುವ ಸಂಪೂರ್ಣ ಅಧಿಕಾರ ಅವರಿಗಿದೆ.ಪಕ್ಷದ ಅಧ್ಯಕ್ಷನಾಗಿ ಪಕ್ಷ ಸಂಘಟನೆ ಮಾಡುವುದು ನನ್ನ ಜವಾಬ್ದಾರಿ. ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಯುವುದು ನನ್ನ ಗುರಿ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...