ಕೆ ಎಸ್ ಈಶ್ವರಪ್ಪ ಸಹ ಕಾಂಗ್ರೆಸ್ ಸೇರಿದರೆ ಅಚ್ಚರಿಪಡಬೇಕಿಲ್ಲ:‌ ಎಂ ಬಿ ಪಾಟೀಲ

Date:

  • ‘ಎಂ ಬಿ ಪಾಟೀಲ ಮುಖ್ಯಮಂತ್ರಿ ಆಗಬೇಕು ಅಂದರೆ ಆಗಲ್ಲ’
  • ‘ಶರಣಪ್ರಕಾಶ್ ಪಾಟೀಲ್ ಒಬ್ಬ ಬದ್ಧತೆ, ಪರಿಶುದ್ಧತೆ ವ್ಯಕ್ತಿ’

ಎಂ ಬಿ ಪಾಟೀಲ ಮುಖ್ಯಮಂತ್ರಿ ಆಗಬೇಕು ಅಂದರೆ ಆಗಲ್ಲ, ಜನರು ಬಯಸಬೇಕು, ಪಕ್ಷ ಅಧಿಕಾರಕ್ಕೆ ಬರಬೇಕು, ಈಗ ಪಕ್ಷ ಅಧಿಕಾರಕ್ಕೆ ಬಂದಿದೆ. ನಮ್ಮ ಪಾರ್ಟಿಯಲ್ಲಿ ಯಾವುದೇ ನಿರ್ಧಾರ ಮಾಡಿದರೂ ಹೈಕಮಾಂಡ್ ಅಂತಿಮ ತೀರ್ಮಾನ ಮಾಡುತ್ತಾರೆ ಎಂದು ಸಚಿವ ಎಂ ಬಿ ಪಾಟೀಲ ಹೇಳಿದರು.

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “ನಮ್ಮಲ್ಲಿ ಪಕ್ಷದ ವರಿಷ್ಠರು ಮುಖ್ಯಮಂತ್ರಿ ಯಾರು ಆಗಬೇಕು ಎಂದು ನಿರ್ಧಾರ ಮಾಡುತ್ತಾರೋ ಅವರು ಆಗುತ್ತಾರೆ” ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಏನು ಮಾಡಬೇಕು, ಏನು ಮಾಡಬಾರದು ಎನ್ನುವುದು ಎಂ ಬಿ ಪಾಟೀಲ್ ಆಗಲಿ ಅಥವಾ ಅಶೋಕ ಪಟ್ಟಣ ಆಗಲಿ ನಿರ್ಧಾರ ಮಾಡುವುದಿಲ್ಲ. ಎಐಸಿಸಿ ಅಧ್ಯಕ್ಷ ಖರ್ಗೆಯವರು, ಸೋನಿಯಾಗಾಂಧಿ, ರಾಹುಲ್ ಗಾಂಧಿ ಎಲ್ಲರೂ ಸೇರಿ ನಿರ್ಧಾರ ಮಾಡುತ್ತಾರೆ. ಯಾವ ಕಾಲದಲ್ಲಿ ಏನು ಆಗಬೇಕು ಎಂಬುದು ಅವರ ವಿವೇಚನೆಗೆ ಬಿಟ್ಟಿದ್ದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನು ಮುಖ್ಯಮಂತ್ರಿ ಆಗುತ್ತೇನೆ ಅಂದರೆ ಮುಖ್ಯಮಂತ್ರಿ ‌ಆಗಿ ಬಿಡುತ್ತೇನಾ? ಹಂಗೆ ಅಂದುಕೊಂಡರೆ ಬಹಳ ಜನರು ಮುಖ್ಯಮಂತ್ರಿ ಆಗಿ ಹೋಗುತ್ತಿದ್ದರು. ಯಾರು ‌ಮುಖ್ಯಮಂತ್ರಿ ಆಗಬೇಕು, ಯಾರನ್ನು ಸಚಿವರನ್ನಾಗಿ ಮಾಡಬೇಕು ಎನ್ನುವುದು ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಸವ ಅಥವಾ ಗರ್ಭಪಾತ; ಮಹಿಳೆಯ ಆಯ್ಕೆಯೇ ಅಂತಿಮ

ಈಶ್ವರಪ್ಪ ಕಾಂಗ್ರೆಸ್ ಸೇರಿದರೆ ಅಚ್ಚರಿ ಇಲ್ಲ

ಲೋಕಸಭಾ ಚುನಾವಣೆ ಮುಂಚೆ ಸರ್ಕಾರ ಬಿದ್ದು ಹೋಗುತ್ತದೆ ಎನ್ನುವ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, “ಬಿಜೆಪಿ ‌ನಾಯಕರೇ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ, ಲೋಕಸಭಾ ಚುನಾವಣೆವರೆಗೂ ಈಶ್ವರಪ್ಪ ನೋಡಲಿ, ಈಶ್ವರಪ್ಪ ಸಹ ಕಾಂಗ್ರೆಸ್ ಸೇರಿದರೆ ಅಚ್ಚರಿಪಡಬೇಕಿಲ್ಲ” ಎಂದರು.

“ಕೆ ಎಸ್ ಈಶ್ವರಪ್ಪ ಅವರು ಬಹಳ ದೊಡ್ಡ ಮೇಧಾವಿಗಳು. ಡಿಕೆ ಶಿವಕುಮಾರ್‌ ಬಗ್ಗೆ ಹೇಳಿರುವ ಮಾತಿಗೆ ನಾನು ಉತ್ತರ ಕೊಡಲ್ಲ. ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಒಬ್ಬ ಬದ್ಧತೆ, ಪರಿಶುದ್ಧತೆ ಹೊಂದಿರುವ ರಾಜಕಾರಣಿಯಾಗಿದ್ದಾರೆ. ಅವರ ಮೇಲೆ ಆರೋಪದ ಪ್ರಕರಣದ ಕುರಿತು ತನಿಖೆಗೆ ಸಿಐಡಿಗೆ ನೀಡುವ ಅವಶ್ಯ ಇರಲಿಲ್ಲ. ಆದರೂ, ನಮ್ಮ ‌ಸರ್ಕಾರ ಸಿಐಡಿ ತನಿಖೆಗೆ ನೀಡಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...