ಇ-ಆಡಳಿತ | ನಾಗರಿಕ ಕೇಂದ್ರಿತ ಸೇವೆ ಹೆಚ್ಚಿಸುವ ಪ್ರಯತ್ನಕ್ಕೆ ಮತ್ತಷ್ಟು ಬಲ: ಸಚಿವ ಪ್ರಿಯಾಂಕ್ ಖರ್ಗೆ

Date:

ಸರ್ಕಾರ ಎನ್ಐಎಸ್‌ಜಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸ್ಮಾರ್ಟ್ ಗೌರ್ನಮೆಂಟ್) ಜೊತೆ ಸಹಯೋಗಕ್ಕೆ ಮುಂದಾಗಿದ್ದು, ಇದರಿಂದ ಇ-ಆಡಳಿತದ ಮೂಲಕ ನಾಗರಿಕ ಕೇಂದ್ರಿತ ಸೇವೆಗಳನ್ನು ಹೆಚ್ಚಿಸುವ ನಮ್ಮ ಪ್ರಯತ್ನಗಳು ಮತ್ತಷ್ಟು ಬಲಪಡಿಸುವಂತಾಗುತ್ತದೆ ಎಂದು ಸಚಿವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ಇ-ಆಡಳಿತ ಪರಿಹಾರಗಳನ್ನು ಸುಗಮಗೊಳಿಸಲು ಎನ್ಐಎಸ್ಜಿ ಸಂಸ್ಥೆಯ ಡಿಜಿಟಲ್ ತಂತ್ರಜ್ಞಾನ ನೆರವಾಗಲಿದೆ ಹಾಗೂ ಸಾರ್ವಜನಿಕ ಮೂಲಸೌಕರ್ಯವನ್ನು ಹೆಚ್ಚಿಸಲು ಸಹಾಯಕವಾಗಲಿದೆ, ಸೇವಾ ವಿತರಣಾ ದಕ್ಷತೆಯನ್ನು ಸುಧಾರಿಸಿ, ನಾಗರಿಕರಿಗೆ ನೇರವಾಗಿ ಪ್ರಯೋಜನವನ್ನು ನೀಡುವ ಎಐ- ಚಾಲಿತ ಆಡಳಿತ ಮಾದರಿಗಳನ್ನು ಸಂಯೋಜಿಸುವಲ್ಲಿ ನೆರವಾಗಲಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಇನ್ನೋವೇಶನ್ ಹಬ್ ಎಂದು ಗುರುತಿಸಿಕೊಂಡಿದ್ದು, ಡಿಜಿಟಲ್ ಆಡಳಿತದಲ್ಲಿ ಮುಂಚೂಣಿಯಲ್ಲಿದೆ. ರಾಜ್ಯ ಸರ್ಕಾರಗಳು, ಸಾರ್ವಜನಿಕ ಮತ್ತು ಖಾಸಗಿ ಮಧ್ಯಸ್ಥಗಾರರ ಆಡಳಿತದಲ್ಲಿ ಜಾಗತಿಕ ಹಾಗೂ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದರಿಂದ ಇ-ಆಡಳಿತದಲ್ಲಿ ಮಹತ್ವದ ಬದಲಾವಣೆಯನ್ನು ತರಬಹುದಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪಾಠ ಕಲಿಯದ ‘ರೈಲ್ವೆ ಇಲಾಖೆ’

ಎನ್ಐಎಸ್‌ಜಿಯ ಡಿಜಿಟಲ್ ಪರಿಣತಿಯೊಂದಿಗೆ ರಾಜ್ಯದ ಇ-ಆಡಳಿತದಲ್ಲಿ ಮಹತ್ವದ ಬೆಳವಣಿಗೆ ರೂಪಿಸುವ ಸಲುವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಎನ್ಐಎಸ್ಜಿಯ ಹಿರಿಯ ಅಧಿಕಾರಿಗಳ ನಡುವೆ ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸಲು ಮತ್ತು ಕರ್ನಾಟಕದ ಡಿಜಿಟಲ್ ರೂಪಾಂತರವನ್ನು ವೇಗಗೊಳಿಸಲು ಬೆಂಗಳೂರಿನಲ್ಲಿ ಫೆ.16ರಂದು ಸಭೆಯನ್ನು ಆಯೋಜಿಸಲಾಗಿತ್ತು. ಆಡಳಿತದಲ್ಲಿ ಹೊಸ ಮಾನದಂಡಗಳನ್ನು ರೂಪಿಸಿ ಭವಿಷ್ಯದಲ್ಲಿ ಡಿಜಿಟಲ್ ಮೂಲಸೌಕರ್ಯವನ್ನು ನಿರ್ಮಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗುವುದರೊಂದಿಗೆ ಇತರ ರಾಜ್ಯಗಳಿಗೆ ಮಾದರಿಯಾಗಬಲ್ಲದು ಎಂದು ತಿಳಿಸಿದ್ದಾರೆ.

“ನವೀನ ಡಿಜಿಟಲ್ ತಂತ್ರಜ್ಞಾನಗಳನ್ನು ರೂಪಿಸುವ ಮೂಲಕ ಕರ್ನಾಟಕದ ಇ-ಆಡಳಿತದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ಎನ್ಐಎಸ್‌ಜಿ ಬದ್ಧವಾಗಿದೆ. ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವುದು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಬಲಪಡಿಸುವುದು ಮತ್ತು ವಾಯುಯಾನ ಕ್ಷೇತ್ರ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳನ್ನು ಅನ್ವೇಷಿಸುವುದು ಸಚಿವ ಪ್ರಿಯಾಂಕ್ ಖರ್ಗೆ ಅವರ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖಗೊಂಡು ಕರ್ನಾಟಕದ ಸುಧಾರಿತ ಇ-ಆಡಳಿತಕ್ಕೆ ಮಹತ್ವದ ಕೊಡುಗೆ ನೀಡುತ್ತೇವೆ” ಎನ್ಐಎಸ್‌ಜಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೀವ್ ಬನ್ಸಾಲ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...