ಈದಿನ ಯೂಟ್ಯೂಬ್‌ ಚಾನೆಲ್ ನಿರ್ಬಂಧ ಸಂಪೂರ್ಣ ತೆರವು; ಮತ್ತೆ ಸಕ್ರಿಯ

Date:

ಹೈಕೋರ್ಟ್ ಮಧ್ಯಂತರ ಆದೇಶದ ಅನ್ವಯ ಕೆಲದಿನಗಳಿಂದ ನಿರ್ಬಂಧಕ್ಕೆ ಒಳಗಾಗಿದ್ದ ಈದಿನ (eedina) ಯೂಟ್ಯೂಬ್ ಚಾನೆಲ್‌, ಮತ್ತೆ ಸಕ್ರಿಯವಾಗಿದೆ. ಮಧ್ಯಂತರ ಆದೇಶ ತೆರವು ಮಾಡಿದ ಬಳಿಕ ಗೂಗಲ್ ಮತ್ತು ಯೂಟ್ಯೂಬ್ ಸಂಸ್ಥೆಗಳಿಗೆ ಕೋರ್ಟ್ ಸೂಚನೆಯನ್ನು ನೀಡಿತ್ತು. ಅದರಂತೆ ಇಂದಿನಿಂದ ಚಾನೆಲ್ unblock ಆಗಿದೆ.

ಸತ್ಯ, ನ್ಯಾಯ, ಪ್ರೀತಿಯ ಸಂಕೇತವಾಗಿರುವ ನಿಮ್ಮ ಈದಿನ ಯೂಟ್ಯೂಬ್‌, ಜನಪರ ವಿಚಾರಗಳ ದಿಟ್ಟ ದನಿ. ಇನ್ನು ಮುಂದೆ ಎಂದಿನಂತೆ ಈದಿನ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೊಗಳನ್ನು ನೋಡಿ, ಶೇರ್ ಮಾಡಿರಿ. ಜೊತೆಗೆ ಈದಿನ ಟಿವಿ (Eedina TV) ಚಾನೆಲ್ ಕೂಡ ಚಾಲ್ತಿಯಲ್ಲಿರುತ್ತದೆ. ಈದಿನಕ್ಕೆ ನಿಮ್ಮೆಲ್ಲರ ಬೆಂಬಲ ಸದಾ ಹೀಗೇ ಇರಲಿ.

ಈ ದಿನ ಸೇರಿದಂತೆ ಎಲ್ಲ ಜನಪರ ಡಿಜಿಟಲ್ ಮಾಧ್ಯಮಗಳು ನ್ಯಾಯಾಲಯದ ಆದೇಶಕ್ಕೆ ಬದ್ಧವಾಗಿ ಸುದ್ದಿಗಳನ್ನು ಪ್ರಕಟಿಸಲು ನಿರ್ಧರಿಸಿವೆ. “ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಹಾಗೂ ಧರ್ಮಸ್ಥಳದ ಸುತ್ತಮುತ್ತ ನಡೆಯಿತೆನ್ನಲಾದ ಸರಣಿ ಕೊಲೆಗಳನ್ನು ವರದಿ ಮಾಡುವ ವಿಚಾರದಲ್ಲಿ ನ್ಯಾಯಾಲಯಗಳ ಆದೇಶ ಎಂದಿಗೂ ಉಲ್ಲಂಘಿಸುವುದಿಲ್ಲ. ಸದರಿ ಆದೇಶಗಳನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುವ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತಾ, ಈ ಸದ್ಯ ಕೆಳಹಂತದ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ಆದೇಶಗಳನ್ನು ನಾವು ಪಾಲಿಸಲು ಬದ್ಧರಿದ್ದೇವೆ” ಎಂದು ನಿರ್ಣಯಿಸಿರುವ ಡಿಜಿಟಲ್ ಮಾಧ್ಯಮಗಳ ಪೈಕಿ ಈದಿನವೂ ಒಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿರಿ: ಈದಿನ ಯೂಟ್ಯೂಬ್‌ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ

“ಆದೇಶದಲ್ಲೇ ಸೂಚಿಸಿರುವ ಹಾಗೆ ಮತ್ತು ನಮ್ಮ ಪತ್ರಿಕಾಧರ್ಮಕ್ಕೆ ಬದ್ಧರಾಗಿದ್ದುಕೊಂಡು, ಯಾರದ್ದೇ ಮೇಲೆ ಆಧಾರರಹಿತವಾದ, ಮಾನನಷ್ಟಕ್ಕೆ ಕಾರಣವಾಗುವ ಸುದ್ದಿ ಅಥವಾ ವಿಶ್ಲೇಷಣೆಗಳನ್ನು ನಾವು ಪ್ರಕಟಿಸುವುದಿಲ್ಲ; ಅದೇ ಸಂದರ್ಭದಲ್ಲಿ ನಡೆಯುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಯಥಾವತ್ ಸುದ್ದಿಗಳನ್ನು ಪ್ರಕಟಿಸುವ ನಮ್ಮ ಹಕ್ಕನ್ನು ನ್ಯಾಯಾಲಯವು ನಿರ್ಬಂಧಿಸಿಲ್ಲದಿರುವುದನ್ನೂ ನಾವು ಅರಿತಿದ್ದೇವೆ. ಹೀಗಾಗಿ ಸುದ್ದಿಗಳನ್ನು ಪ್ರಕಟಿಸುವ ಮತ್ತು ಈ ಹೊತ್ತು ಎತ್ತಬೇಕಾದ ಪ್ರಶ್ನೆಗಳನ್ನು ಎತ್ತುವ ನಮ್ಮ ಹಕ್ಕನ್ನು ಚಲಾಯಿಸುತ್ತೇವೆ ಮತ್ತು ಆ ಮೂಲಕ ನಮ್ಮ ಕರ್ತವ್ಯವನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ” ಎಂದು ಮಾಧ್ಯಮಗಳು ನಿಲುವು ತಾಳಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...