ಪ್ರತ್ಯೇಕ ಧರ್ಮದ ಪ್ರಯತ್ನ ಮುಂದುವರಿಯಲಿದೆ, ವೀರಶೈವ-ಲಿಂಗಾಯತವೇ ನಮ್ಮ ನಿಲುವು: ಈಶ್ವರ ಖಂಡ್ರೆ

Date:

ವೀರಶೈವ-ಲಿಂಗಾಯತ ಬೇರೆ ಬೇರೆ ಅಲ್ಲ ಒಂದೇ ಎಂಬುದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿಲುವಾಗಿದ್ದು, ಪ್ರತ್ಯೇಕ ಧರ್ಮಕ್ಕಾಗಿ ಪ್ರಯತ್ನ ಮುಂದುವರಿಯಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಪುನರುಚ್ಚರಿಸಿದರು.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದಗಾಂಗಾ ಮಹಾಸಂಸ್ಥಾನದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರೂ ವೀರಶೈವ-ಲಿಂಗಾಯತ ಒಂದೇ ಎಂದು ಪ್ರತಿಪಾದಿಸಿದ್ದರು. ನಿನ್ನೆ ಹುಬ್ಬಳ್ಳಿಯಲ್ಲಿ ಮಠಾಧಿಪತಿಗಳ ಒಕ್ಕೂಟ ಆಯೋಜಿಸಿದ್ದ ಏಕತಾ ಸಮಾವೇಶ ಸಂಪೂರ್ಣ ಯಶಸ್ವಿಯಾಗಿದೆ. ದಿಂಗಾಲೇಶ್ವರ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ಪಂಚಪೀಠದ ಪೀಠಾಧಿಪತಿಗಳು, ಸಾವಿರಾರು ಹರಚರಗುರು ಮೂರ್ತಿಗಳು ಹಾಗೂ ಸಾವಿರಾರು ಸಮಾಜ ಬಾಂಧವರು ಪಾಲ್ಗೊಂಡಿದ್ದರು” ಎಂದರು.

ಎಲ್ಲರಿಗೂ ತೃಪ್ತಿಯಾಗುವಂತೆ ಸಮೀಕ್ಷೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೇ 22ರಿಂದ ಆರಂಭವಾಗಲಿರುವ ಸಮೀಕ್ಷೆ ಪೂರ್ಣಗೊಂಡ ಬಳಿಕ, ಹಿಂದುಳಿದಿರುವಿಕೆಯ ಗುರುತಿಸುವಿಕೆ, ಅಂಕ ನೀಡಿಕೆಯಲ್ಲಿ ಯಾರಿಗೂ ಅನ್ಯಾಯ ಆಗದ ರೀತಿಯಲ್ಲಿ, ಎಲ್ಲರ ಅಭಿಪ್ರಾಯ ಪಡೆದೇ ಸರ್ಕಾರ ಮುಂದಡಿ ಇಡಲಿದೆ. ಇದನ್ನು ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಎಲ್ಲ 7 ಕೋಟಿ ಜನರಿಗೂ ತೃಪ್ತಿಯಾಗುವ ರೀತಿಯಲ್ಲಿ ಸಮೀಕ್ಷೆ ನಡೆಯಲಿದೆ” ಎಂದು ಈಶ್ವರ ಖಂಡ್ರೆ ತಿಳಿಸಿದರು.

“ಎಲ್ಲ ಜಾತಿ, ಜನಾಂಗದಲ್ಲೂ ಬಡವರಿದ್ದಾರೆ, ನಿರ್ಗತಿಕರಿದ್ದಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು. ಸರ್ಕಾರದ ಯೋಜನೆಯ ಲಾಭ ದೊರಕಬೇಕು. ಈ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ. ಹಿಂದುಳಿದಿರುವಿಕೆಯನ್ನು ತಿಳಿಯಲು ಮತ್ತು ಅವರಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ಉದ್ದೇಶದಿಂದಲೇ ಈ ಸಮೀಕ್ಷೆ ನಡೆಯುತ್ತಿದೆ. ಹೀಗಾಗಿ ಸಮಾಜದ ಪ್ರತಿಯೊಬ್ಬರೂ ಇದರಲ್ಲಿ ಭಾಗಿಯಾಗಬೇಕು ಮತ್ತು ವಾಸ್ತವ ಮಾಹಿತಿಯನ್ನು ದಾಖಲೀಕರಿಸಬೇಕು” ಎಂದರು.

“ಲಿಂಗಾಯತ-ವೀರಶೈವ ಧರ್ಮ ಎಂದು ಧರ್ಮದ ಕಾಲಂನಲ್ಲಿ ಬರೆಸಬೇಕು ಎಂಬುದು ಮಹಾಸಭಾ ನಿಲುವಾಗಿದೆ. ಆದರೆ ಪ್ರತ್ಯೇಕ ಧರ್ಮ ಎಂದು ಇನ್ನೂ ಗುರುತಿಸಿಲ್ಲ. ಹೀಗಾಗಿ ಆತ್ಮಸಾಕ್ಷಿಯಂತೆ ಮತ್ತು ವಿವೇಚನೆಗೆ ತಕ್ಕಂತೆ ಬರೆಸುವಂತೆ ಮನವಿ ಮಾಡಲಾಗಿದೆ” ಎಂದು ಸ್ಪಷ್ಟಪಡಿಸಿದರು.

“ವೀರಶೈವ ಲಿಂಗಾಯತ ಮಹಾಸಭಾ ವಿಸರ್ಜನೆ ಮಾಡಬೇಕು ಎಂದು ಅಸಂಬದ್ಧ ಹೇಳಿಕೆ ನೀಡಿರುವವರಿಗೆ ತಾವು ಉತ್ತರ ನೀಡುವುದಿಲ್ಲ. ಅವರಿಗೆ ಯಾವುದೇ ಅಸ್ತಿತ್ವ ಇಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...