ಚುನಾವಣಾ ಅಕ್ರಮ ಆರೋಪ | ಸಂಸದ ಸುಧಾಕರ್‌ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

Date:

ಕಳೆದ ಲೋಕಸಭಾ ಚುನಾವಣೆ ವೇಳೆ ಮಾದಾವರದ ಬಳಿ 4.8 ಕೋಟಿ ಹಣ ಪತ್ತೆಯಾದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್‌ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್‌ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಡಾ ಕೆ ಸುಧಾಕರ್‌ ಸಲ್ಲಿಸಿದ್ದ ತಕರಾರು ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ಮಾಡಿದೆ.

ಸುಧಾಕ‌ರ್ ಪರ ಪದಾಂಕಿತ ಹಿರಿಯ ವಕೀಲರುಗಳಾದದ ಬಿ.ವಿ.ಆಚಾರ್ಯ, ಬಿ.ಎಲ್.ಆಚಾರ್ಯ ಮತ್ತು ಗೋವಿಂದಪ್ಪ ಪರ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಜಪ್ತಿ ಮಾಡಲಾದ ಹಣ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ಹಂಚುವುದಕ್ಕಾಗಿ ಸಂಗ್ರಹಿಸಿದ್ದ ಮೊತ್ತ’ ಎಂದು ಹೇಳಲಾಗಿತ್ತು. ಈ ಪುಕಾರುಗಳ ಬೆನ್ನಲ್ಲೇ ಸುಧಾಕರ್ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯ ಜವಾಬ್ದಾರಿ ಹೊತ್ತಿದ್ದ ರಾಜ್ಯ ನೋಡಲ್ ಅಧಿಕಾರಿ ಮುನೀಶ್ ಮೌನ್ಸಿಲ್ ಅವರಿಗೆ ವಾಟ್ಸ್ ಆ್ಯಪ್ ಮೆಸೇಜ್ ಮಾಡಿ, ‘ತಾವು ನನಗೆ ಸಹಾಯ ಮಾಡಿದರೆ ಅಭಾರಿಯಾಗಿರುತ್ತೇನೆ’ ಎಂದು ಕೇಳಿಕೊಂಡಿದ್ದರು.

ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಗೆ ಚುನಾವಣಾ ಸರ್ವೇಲೆನ್ಸ್‌ ತಂಡದ ಸದಸ್ಯ ದಶರಥ್‌ ವಿ.ಕುಂಬಾರ್‌ ದೂರು ನೀಡಿ, 2024ರ ಸಂಸತ್‌ ಚುನಾವಣೆ ವೇಳೆ ಏ.25ರಂದು ಮಾದರಿ ನೀತಿ ಸಂಹಿತೆ (ಎಂಸಿಸಿ) ಅಧಿಕಾರಿ ಮುನೀಶ್‌ ಮೌದ್ಗಿಲ್‌ ಅವರ ಮೊಬೈಲ್‌ಗೆ ಒಂದು ಕಡೆ 10 ಕೋಟಿ ರೂ. ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಇಡಲಾಗಿದೆ ಎಂಬ ಮಾಹಿತಿ ಬಂದಿತ್ತು. ಅದರಂತೆ ಮಾದಾವರ ಗ್ರಾಮದ ಗೋವಿಂದಪ್ಪ ಎಂಬುವರ ಮನೆಯಲ್ಲಿ ಚುನಾವಣಾಧಿಕಾರಿಗಳು ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾಗ 4.8 ಕೋಟಿ ರೂ. ಜಪ್ತಿ ಮಾಡಲಾಯಿತು ಎಂದು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ತಂಡದ ಅಧಿಕಾರಿ ಮಾದನಾಯಕಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದ ಪೊಲೀಸರು, ನೆಲಮಂಗಲ ಜೆಎಂಎಫ್‌ಸಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನು ರದ್ದುಪಡಿಸುವಂತೆ ಕೋರಿ ಸುಧಾಕರ್ ಹಾಗೂ ಗೋವಿಂದಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...