4,618 ಕೆರೆಗಳ ಒತ್ತುವರಿ ತೆರವು, 8,697 ಎಕರೆ ಭೂಮಿ ವಶಕ್ಕೆ: ಸಚಿವ ಪ್ರಿಯಾಂಕ್ ಖರ್ಗೆ

Date:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದಾದ್ಯಂತ ಜಿಲ್ಲಾ ಪಂಚಾಯತಿಗಳ ಅಧೀನದಲ್ಲಿನ ಕೆರೆಗಳನ್ನು ಗುರುತಿಸುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಬರುವ ಕೆರೆಗಳ ಸಮೀಕ್ಷೆ ಕಾರ್ಯವನ್ನು ಎಲ್ಲ ಜಿಲ್ಲೆಗಳಲ್ಲಿ ಕೈಗೊಂಡಿದ್ದು ಒತ್ತುವರಿಯಾಗಿದ್ದ 9140 ಕೆರೆಗಳನ್ನು ಈಗಾಗಲೆ ಗುರುತಿಸಲಾಗಿದ್ದು, ಈ ಪೈಕಿ 4618 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ.

ರಾಜ್ಯದ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯಲ್ಲಿ 32648 ಕೆರೆಗಳಿದ್ದು, ಇಲಾಖೆ ಕೈಗೊಂಡಿರುವ ಸಮೀಕ್ಷೆಯಲ್ಲಿ 24497 ಕೆರೆಗಳನ್ನು ಗುರುತಿಸಲಾಗಿದೆ, ಇವುಗಳಲ್ಲಿ 9140 ಕೆರೆಗಳು ಒತ್ತುವರಿಗೊಂಡಿದ್ದವು ಎಂದು ತಿಳಿಸಿರುವ ಸಚಿವರು ಒತ್ತುವರಿಗೊಂಡ ಕೆರೆಗಳಲ್ಲಿ 4618 ಕೆರೆಗಳ ಒತ್ತುವರಿಯನ್ನು ತೆರೆವುಗೊಳಿಸಲಾಗಿದ್ದು, 8697 ಎಕರೆ ಭೂಮಿಯನ್ನು ಜಿಲ್ಲಾ ಪಂಚಾಯತಿಗಳ ವಶಕ್ಕೆ ಪಡೆದುಕೊಳ್ಳಲಾಗಿದೆ, ಒತ್ತುವರಿ ಗುರುತಿಸಲ್ಪಟ್ಟಿರುವ ಉಳಿದ 4522 ಕೆರೆಗಳನ್ನು ತೆರವುಗೊಳಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ಸಚಿವರು ವಿವರಗಳನ್ನು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಟ್ಟಾರೆ 32648 ಕೆರೆಗಳಲ್ಲಿ ಸಮೀಕ್ಷೆ ಬಾಕಿ ಇರುವ 8151 ಕೆರೆಗಳ ಸಮೀಕ್ಷೆಯನ್ನು ಮುಂದಿನ 30 ದಿನಗಳ ಒಳಗೆ ಮುಗಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ್ದು, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಸಮೀಕ್ಷೆ ಕಾರ್ಯವನ್ನು ಮುಗಿಸಲು ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಬರುವ 32648 ಕೆರೆಗಳು 3,08,213 ಎಕರೆ ಪ್ರದೇಶವನ್ನು ಹೊಂದಿದೆ, ಇವುಗಳಲ್ಲಿ 2,15,594 ಎಕರೆಗೆ ಸಂಬಂಧಿಸಿದಂತೆ 24497 ಕೆರೆಗಳ ಸರ್ವೆ ಕಾರ್ಯ ಸಂಪನ್ನಗೊಂಡಿದೆ. ರಾಜ್ಯದಲ್ಲಿ ಹಾಸನ ಜಿಲ್ಲೆ ಅತಿ ಹೆಚ್ಚು 6367 ಕೆರೆಗಳನ್ನು ಹೊಂದಿದ್ದು, ಬಳ್ಳಾರಿ ಜಿಲ್ಲೆ ಅತಿ ಕಡಿನೆ 21 ಕೆರೆಗಳನ್ನು ಹೊಂದಿದೆ, ಹೆಚ್ಚು ಕೆರೆಗಳನ್ನು ಹೊಂದಿದ ಜಿಲ್ಲೆಗಳಲ್ಲಿ ಶಿವಮೊಗ್ಗ (4354) ಹಾಗೂ ಮೈಸೂರು (2805) ಎರಡು ಹಾಗೂ ಮೂರನೆ ಸ್ಥಾನಗಳಲ್ಲಿವೆ, ಹಾಗೆಯೇ ಅತಿ ಕಡಿಮೆ ಕೆರೆಗಳ ಮುಂದಿನ ಸ್ಥಾನಗಳು ಕಲಬುರಗಿ (33) ಮತ್ತು ಕೊಪ್ಪಳ (39) ಜಿಲ್ಲೆಗಳದು ಎಂಬ ಸಂಗತಿ ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...