ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Date:

  • ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಭರವಸೆ
  • ‘ಈ ವರ್ಗಗಳಿಗೆ 34 ಸಾವಿರ ಕೋಟಿ ರೂ. ಅನುದಾನ ಮೀಸಲು’ 

ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಾಲ್ಮೀಕಿ ಜಯಂತಿಯ ಅಂಗವಾಗಿ ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

“ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಬೆಳಗಾವಿಯ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡುವ ತೀರ್ಮಾನವನ್ನು ಕೈಗೊಳ್ಳಲಾಯಿತು. ಆದಕಾರಣ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಯೋಜನೆಯಡಿ ಹೆಚ್ಚು ಅನುದಾನ ಖರ್ಚು ಮಾಡಲು ಸಾಧ್ಯವಾಯಿತು. ಮೊದಲು ಈ ಯೋಜನೆಗಳಡಿ ಕೇವಲ 6 ಸಾವಿರ ಅನುದಾನ ಮೀಸಲಿಡಲಾಗುತ್ತಿತ್ತು. ಆದರೆ ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಈ ಮೊತ್ತವನ್ನು 6 ಸಾವಿರದಿಂದ 30 ಸಾವಿರಕ್ಕೆ ಹೆಚ್ಚಿಗೆ ಮಾಡಲಾಯಿತು. ಹಿಂದಿನ ಸರ್ಕಾರದವರು ಈ ಮೊತ್ತವನ್ನು ಹೆಚ್ಚಿಸಲಿಲ್ಲ. ನಮ್ಮ ಸರ್ಕಾರ ಈ ವರ್ಷದ ಆಯವ್ಯಯದಲ್ಲಿ ಈ ವರ್ಗಗಳಿಗೆ 34 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ ಸಿ ಎಸ್ ಟಿ ಜನರಿಗೆ ಅನುದಾನ ರಾಜ್ಯಾಂಗ ಬದ್ಧ 

“ರಾಜ್ಯದ ಒಟ್ಟು ಜನಸಂಖ್ಯೆಯ ಶೇ.17.1ರಷ್ಟು ಎಸ್ ಸಿ ಹಾಗೂ ಶೇ.7 ರಷ್ಟು ಎಸ್ ಟಿ ವರ್ಗಕ್ಕೆ ಸೇರಿದವರಿದ್ದಾರೆ. 2011ರ ಜನಗಣತಿ ಪ್ರಕಾರ, ಶೇ.24.1 ರಷ್ಟು ಎಸ್ ಸಿ ಹಾಗೂ ಎಸ್ ಟಿ ವರ್ಗದ ಜನಸಂಖ್ಯೆಯಿದೆ. ಈ ಜನಸಂಖ್ಯೆಗನುಗುಣವಾಗಿ ಎಸ್ ಸಿ ಎಸ್ ಟಿ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡುವ ಬಗ್ಗೆ ಕಾನೂನು ತಂದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ. ಯಾವುದೇ ಸರ್ಕಾರಗಳು ಬಂದರೂ ಈ ಕಾನೂನನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ಈ ಕಾನೂನು ನಂತರ 2013 ರಿಂದ 2018ರವರೆಗೆ ನಮ್ಮ ಸರ್ಕಾರ ಒಟ್ಟು 88 ಸಾವಿರ ಕೋಟಿ ರೂ.ಗಳನ್ನು ಎಸ್ ಸಿ ಎಸ್ಟಿ ಜನರಿಗೆ ಮೀಸಲಿಡಲಾಗಿತ್ತು. ಈ ಪ್ರಮಾಣದ ಜನಸಂಖ್ಯೆಗೆ ಈ ಅನುದಾನ ರಾಜ್ಯಾಂಗಬದ್ಧವಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ” ಎಂದು ತಿಳಿಸಿದರು.

ಪ್ರಶಸ್ತಿ ವಿಜೇತರ ಸಾಧನೆಗಳು ಸ್ಫೂರ್ತಿಯಾಗಲಿ

ನಾಡಿನ ಸಮಸ್ತ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಶುಭಾಶಯಗಳನ್ನು ಮುಖ್ಯಮಂತ್ರಿಯವರು ಕೋರಿದರು. ಈ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 8 ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದ್ದು, ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಪ್ರಶಸ್ತಿ ಪುರಸ್ಕೃತರ ಸಾಧನೆಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಅವರು ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...