ಸ್ವಾತಂತ್ರ್ಯ ಬಂದು 79 ವರ್ಷವಾದರೂ ದೇಶದಲ್ಲಿ ಗುಲಾಮಗಿರಿ ವ್ಯವಸ್ಥೆ ಹೋಗಿಲ್ಲ: ಸಿದ್ದರಾಮಯ್ಯ

Date:

ಎಲ್ಲರಿಗೂ ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ಸಿಗದೇ ಹೋದರೆ ಅಸಮಾನತೆ ಹೋಗಲಾಡಿಸಲು, ಗುಲಾಮಗಿರಿ ವ್ಯವಸ್ಥೆ ಕಿತ್ತುಹಾಕಲು ಸಾಧ್ಯವಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳೂರಿನ ಕೊಣಾಜೆಯ ಮಂಗಳ ಗಂಗೋತ್ರಿ ಯಲ್ಲಿ ಶಿವಗಿರಿ ಮಠ ವರ್ಕಲಾ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವ ವಿದ್ಯಾಲಯ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಶತಮಾನದ ಪ್ರಸ್ತಾನ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ, ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಹಾಗೂ ಯತಿ ಪೂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಜಾತಿಯಿಂದ ಯಾರೂ ದೊಡ್ಡವರಾಗುವುದಿಲ್ಲ, ಯಾರೂ ಕೀಳಾಗುವುದಿಲ್ಲ. ಆದರೆ ವ್ಯಕ್ತಿತ್ವವನ್ನೂ ಜಾತಿ ನೋಡಿಯೇ ಅಳೆಯಲಾಗುತ್ತಿದೆ. ಸಮಾಜದಲ್ಲಿ ಜಾತಿ ಹೆಸರಿನಲ್ಲಿ ನಡೆಯುವ ತಾರತಮ್ಯಗಳು ದೂರವಾಗಬೇಕು. ಜಡತ್ವದ ಜಾತಿ ವ್ಯವಸ್ಥೆ ಬದಲಾಗಬೇಕು. ಅದಕ್ಕಾಗಿ ಮನುಷ್ಯತ್ವದಿಂದ ಕೂಡಿದ ಸಮಾಜ ಕಟ್ಟಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ, ಸಂವಿಧಾನ ಜಾರಿಯಾಗಿ 75 ವರ್ಷಗಳಾದರೂ ಇನ್ನೂ ಗುಲಾಮಗಿರಿ ವ್ಯವಸ್ಥೆ ಬದಲಾಗಿಲ್ಲ. ಪ್ರಬಲ ಸಮುದಾಯದ ವ್ಯಕ್ತಿ ಎದುರಾದಾಗ ಸ್ವಾಮಿ ಎನ್ನುವ, ದಲಿತ ಸಮುದಾಯದ ವ್ಯಕ್ತಿ ಎಷ್ಟೇ ಶ್ರೀಮಂತರಾದರೂ ಅವರನ್ನು ಏಕ ವಚನದಲ್ಲಿ ಮಾತನಾಡಿಸುವ ವ್ಯವಸ್ಥೆ ಈಗಲೂ ಇದೆ. ಈ ವ್ಯವಸ್ಥೆಯೇ ಗುಲಾಮಗಿರಿಯ ಸಂಕೇತ. ಇದನ್ನು ಕಿತ್ತೆಸೆಯಬೇಕು ಎಂದು ನಾರಾಯಣಗುರುಗಳು ಸಾರಿ ಹೇಳಿದ್ದಾರೆ’ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...