ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಪ್ರತಾಪ್ ಸಿಂಹಗೆ ನೆಟ್ಟಿಗರ ಕ್ಲಾಸ್!

Date:

ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಎಕ್ಸ್‌, ಫೇಸ್‌ಬುಕ್ ಮೊದಲಾದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅದಾದ ಬೆನ್ನಲ್ಲೇ ಪ್ರತಾಪ್ ಸಿಂಹ ಅವರಿಗೆ ನೆಟ್ಟಿಗರು ಪಾಠ ಮಾಡಿದ್ದಾರೆ.

“ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೊದಲಿಗೆ ಆರೋಪಿ ನಂ-1 ಆಗಿ, ನಂತರ A-17 ಆಗಿ, ಆರೂವರೆ ವರ್ಷ ಜೈಲಿನಲ್ಲಿದ್ದು ಇತ್ತೀಚೆಗೆ ಜಾಮೀನಿನ ಹೊರಬಂದಿರುವ ಸ್ನೇಹಿತ ಮದ್ದೂರು ನವೀನ್ ರನ್ನು ಭೇಟಿಯಾಗಿ ಅರೋಗ್ಯ ವಿಚಾರಿಸಿದೆ” ಎಂದು ಪ್ರತಾಪ್ ಸಿಂಹ ಎಕ್ಸ್‌ನಲ್ಲಿ ಪೊಸ್ಟ್ ಮಾಡಿದ್ದಾರೆ.

ಈ ಬೆನ್ನಲ್ಲೇ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ನಿಮ್ಮ ಸ್ನೇಹಿತನೇ ಎಂದು ಪ್ರಶ್ನಿಸಿದ್ದಾರೆ. ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನಿರುದ್ಯೋಗಿ ಪ್ರತಾಪ್ ಸಿಂಹ ಮತ್ತು ರಾಜ್ಯ ನಾಯಕರ ಮಕ್ಕಳ ಪ್ರೇಮ! Prathap Simha | Nepotism | BJP | JDS

ಹೈಕೋರ್ಟ್ ಏಕಸದಸ್ಯ ಪೀಠವು ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ನವೀನ್ ಕುಮಾರ್, ಅಮಿತ್, ಎಚ್ಎಲ್ ಸುರೇಶ್ ಅವರಿಗೆ ಜುಲೈ 16ರಂದು ಜಾಮೀನು ನೀಡಿದೆ. ನಿನ್ನೆ ಪ್ರತಾಪ್ ಸಿಂಹ ಕೊಲೆ‌ ಆರೋಪಿ ನವೀನ್ ಕುಮಾರ್ ಅವರನ್ನು ಭೇಟಿಯಾಗಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

“ಸಮಾಜದಲ್ಲಿ ಅಶಾಂತಿ ಹುಟ್ಟಿಸುವವರು. ಸಮಾಜದ ಸಾಮರಸ್ಯವನ್ನು ಹಾಳು ಮಾಡುವವರು. ತತ್ವ ವಿಚಾರಗಳನ್ನು ಮುಚ್ಚು ಹಾಕಲು ಪ್ರಯತ್ನಿಸುತ್ತಿರುವಂತವರನ್ನು ತಾವು ಹೋಗಿ ಭೇಟಿಯಾಗೋದು ಎಷ್ಟರ ಮಟ್ಟಿಗೆ ನ್ಯಾಯ ಮತ್ತು ನಿಮ್ಮ ಮನಸಾಕ್ಷಿ ಒಪ್ಪುತ್ತಾ” ಎಂದು ನೆಟ್ಟಿಗರೊಬ್ಬರು ಪ್ರಶ್ನಿಸಿದ್ದಾರೆ.

“ಹಿಂದುತ್ವ ಎಂದರೆ ಕೊಲೆಗಾರರ ಜೊತೆ ಇರುವುದೇ..? ಇಂತಹ ಕೊಲೆಗಡುಕರೆಲ್ಲ ನಿಮ್ಮ ಸ್ನೇಹಿತರು” ಎಂದು ಮತ್ತೋರ್ವ ನೆಟ್ಟಿಗರು ಟೀಕಿಸಿದ್ದಾರೆ.

“ಒಬ್ಬ ದಿಟ್ಟ ಲಿಂಗಾಯತ ಪ್ರತಿಭಾವಂತೆ, ಸಾಮಾಜಿಕ ಕಾರ್ಯಕರ್ತೆ, ಜನಪರ ಪತ್ರಕರ್ತೆಯ ಕೊಲೆ ಪ್ರಕರಣದ ಆರೋಪಿಯನ್ನು ಮೆರೆಸೋದು ಯಾರನ್ನು ಮೆಚ್ಚಿಸೋಕೆ ಪ್ರತಾಪ್ ಸರ್..? ಆರ್‌ಎಸ್‌ಎಸ್‌ ನಾಯಕರನ್ನು ಮೆಚ್ಚಿಸಬೇಕು ಅಂದರೆ ಬಸವಣ್ಣನ ಲಿಂಗಾಯತವನ್ನು ದ್ವೇಷಿಸಲೇಬೇಕು ಅಲ್ವಾ..? ನಿಮ್ಮ ಈ ನಡೆ ಇತ್ತೀಚಿನ ನಿಮ್ಮ ಲಿಂಗಾಯತ ವಿರೋಧಿ ಹೇಳಿಕೆಗಳಿಗೆ ತಾಳೆಯಾಗುವಂತಿದೆ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬರ್ತಾ ಬರ್ತಾ ರಾಯರ ಕುದುರೆ ಕತ್ತೆ ಆಯಿತು ಅಂದ ಹಾಗೆ, ಯಾಕೆ ಈ ಒಕ್ಕಲಿಗ ಲಿಂಗಾಯತರ ಮೋಸದ ಆಟ? ಈಗ ಕೊಲೆ ಆರೋಪಿಗಳ ಜೊತೆ .. ನಾವು ನಿಮ್ಮನ್ನ ಜಾತಿ ಮೀರಿ ಜನನಾಯಕ ಅಂದುಕೊಂಡಿದ್ದೆವು. ಜಾಗ್ರತೆಯಿಂದ ಹೆಜ್ಜೆ ಇಡೀ … ನಿಮ್ಮ ಜೊತೆ ನಾವಿದ್ದೇವೆ” ಎಂದು ಪ್ರತಾಪ್ ಬೆಂಬಲಿಗರೊಬ್ಬರು ಎಚ್ಚರಿಕೆ ನೀಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...