ಚಿಕ್ಕೋಡಿ | ಬಿಜೆಪಿ ಟಿಕೆಟ್‌ ಪೈಪೋಟಿ, ಶಕ್ತಿಪ್ರದರ್ಶನಕ್ಕೆ ಅಣ್ಣಾಸಾಹೇಬ್ ಜೊಲ್ಲೆ ಸಜ್ಜು

Date:

ಲೋಕಸಭೆ ಚುನಾವಣೆ ಹತ್ತಿರದಲ್ಲಿರುವಾಗಲೇ, ಚಿಕ್ಕೋಡಿಯಲ್ಲಿ ಬಿಜೆಪಿ ಟಿಕೆಟ್‌ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ ಶಕ್ತಿ ಪ್ರದರ್ಶನ ಜೋರಾಗಿದೆ. ಮಾಜಿ ಸಂಸದ ರಮೇಶ್ ಕತ್ತಿ, ಮಾಜಿ ಎಂಎಲ್​ಸಿ ಮಹಾಂತೇಶ ಕವಟಗಿಮಠ ಬಹಿರಂಗವಾಗಿಯೇ ಟಿಕೆಟ್ ಬೇಡಿಕೆ ಇಟ್ಟಿದ್ದಾರೆ. ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಇರುವಾಗಲೇ ಟಿಕೆಟ್‌ಗಾಗಿ ಪೈಪೋಟಿ ಶುರುವಾಗಿದೆ.

ಬಿಜೆಪಿ ಟಿಕೆಟ್ ಸಿಗದಿದ್ರೆ ರಮೇಶ್ ಕತ್ತಿ, ಕಾಂಗ್ರೆಸ್ ಪಾಳಯಕ್ಕೆ ಸೇರುತ್ತಾರೆ ಎಂಬ ಮಾತುಗಳು ಸಹ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಮಾಜಿ ಸಂಸದ ರಮೇಶ್ ಕತ್ತಿ, ಕಳೆದ ಬಾರಿ ತಮಗೆ ಅನ್ಯಾಯವಾಗಿದೆ. ರಾಜ್ಯಸಭಾ ಸದಸ್ಯ ಸ್ಥಾನ, ಎಂಎಲ್​ಸಿ ಸ್ಥಾನದಿಂದಲೂ ವಂಚಿತನಾಗಿದ್ದೇನೆ. ಈ ಬಾರಿ ನನಗೆ ಬಿಜೆಪಿ ಟಿಕೆಟ್ ನೀಡುತ್ತೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ತಮಗೇ ಈ ಬಾರಿಯೂ ಟಿಕೆಟ್ ಸಿಗುವ ವಿಶ್ವಾಸದಲ್ಲಿ, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಲೋಕಸಭೆ ಬಿಜೆಪಿ ಟಿಕೆಟ್ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ರಮೇಶ್ ಕತ್ತಿ, “ರಾಜಕಾರಣ ನಿಂತ ನೀರಲ್ಲ, ಅದು ಹರಿಯುತ್ತಿರಬೇಕು. ಒಂದೇ ಕಡೆ ನಿಂತರೆ ದುರ್ವಾಸನೆ ಬರುತ್ತೆ,” ಎಂಬ ಹೇಳಿಕೆ ನೀಡಿದ್ದು, ಒಂದು ವೇಳೆ ಬಿಜೆಪಿ ಟಿಕೆಟ್‌ ನೀಡದಿದ್ದರೆ, ಕಾಂಗ್ರೆಸ್‌ ಸೇರುತ್ತಾರೆ ಎಂಬ ಅನುಮಾನವನ್ನು ದಟ್ಟವಾಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಮೇಶ್ ಕತ್ತಿ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಲಕ್ಷ್ಮಣ್ ಸವದಿ, “ಬಿಜೆಪಿ ಅಣ್ಣಾಸಾಹೇಬ್ ಜೊಲ್ಲೆಗೆ ಟಿಕೆಟ್ ಕೊಡುತ್ತೋ, ರಮೇಶ್ ಕತ್ತಿಗೆ ಟಿಕೆಟ್ ಕೊಡುತ್ತೋ ಗೊತ್ತಿಲ್ಲ. ರಮೇಶ್ ಕತ್ತಿ ಕಾಂಗ್ರೆಸ್​ ಸೇರೋದಾದ್ರೆ, ಆ ವಿಚಾರವನ್ನು ಕಾಂಗ್ರೆಸ್ ನಾಯಕರಿಗೆ ಕನ್ವೇ ಮಾಡುವ ಕೆಲಸ ಮಾಡ್ತೀನಿ,” ಎಂದಿದ್ದಾರೆ.

ಇತ್ತೀಚೆಗೆ ರಮೇಶ್ ಕತ್ತಿ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ನಿವಾಸಕ್ಕೆ ಭೇಟಿ ನೀಡಿ ನಂದಗಾಂವ ಗ್ರಾಮದಲ್ಲಿ ಪಿಕೆಪಿಎಸ್ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದರು.

ನಾಯಕರ ಈ ಎಲ್ಲ ಹೇಳಿಕೆಗಳ ಮಧ್ಯೆ, ಚಿಕ್ಕೋಡಿ ಬಿಜೆಪಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಅಕ್ಟೋಬರ್‌ 8ರಂದು ತಮ್ಮ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿ, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಈ ಟಿಕೆಟ್‌ ಪೈಪೋಟಿಗೆ ಪ್ರತಿಕ್ರಿಯಿಸಿರುವ ಸಂಸದ ಅಣ್ಣಾಸಾಹೇಬ್ ಜೊಲ್ಲೆ, “ಬಿಜೆಪಿ ಟಿಕೆಟ್​ಗಾಗಿ ಪೈಪೋಟಿ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ. ಕಾದು ನೋಡಬೇಕು, ಯಾರ ಬೇಕಾದರೂ ಟಿಕೆಟ್ ಕೇಳಬಹುದು, ಕಳೆದ ಬಾರಿ 20 ಜನ ಕೇಳಿದ್ರು. ಆಗ, ನನಗೇ ಟಿಕೆಟ್ ಸಿಕ್ಕಿತು. ಈ ಬಾರಿಯೂ ಟಿಕೆಟ್ ಕೇಳೋದು ಎಲ್ಲರಿಗೂ ಹಕ್ಕಿದೆ,” ಎಂದಿದ್ದಾರೆ.

ಕಾಂಗ್ರೆಸ್‌ ಸೇರಲು ರಮೇಶ್ ಕತ್ತಿ ಚಿಂತನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ವಿಚಾರ, ನಾನಂತೂ ಅವರೇನು ಹೇಳಿದ್ದಾರೆ ಕೇಳಿಲ್ಲ. ರಮೇಶ್ ಕತ್ತಿ ಬಿಜೆಪಿಯಲ್ಲೇ ಉಳಿತಾರೆ, ಬಿಜೆಪಿಯಲ್ಲೇ ಇರ್ತಾರೆ ಎಂಬ ಆತ್ಮವಿಶ್ವಾಸ ಇದೆ ಎಂದಿದ್ದಾರೆ.

ಒಟ್ಟಿನಲ್ಲಿ, ಚಿಕ್ಕೋಡಿ ಲೋಕಸಭಾ ಬಿಜೆಪಿ ಟಿಕೆಟ್ ಗೆ ಈಗಿಂದಲೇ ಪೈಪೋಟಿ, ಶಕ್ತಿ ಪ್ರದರ್ಶನಗಳು ಶುರುವಾಗಿದ್ದು, ಟಿಕೆಟ್‌ ಯಾರ ಪಾಲಾಗಲಿದೆ ಎಂಬ ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...