ಬಿ.ಇಡಿ ದಾಖಲಾತಿ ಪ್ರಕ್ರಿಯೆಗೆ ಅಂತಿಮ ಅವಕಾಶ; ನ. 15ರೊಳಗೆ ದಾಖಲೆ ಪರಿಶೀಲನೆ ಕಡ್ಡಾಯ

Date:

2025ನೇ ಸಾಲಿನ ಬಿ.ಇಡಿ ದಾಖಲಾತಿ ಸಂಬಂಧ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆ ಅಂತಿಮ ಅವಕಾಶ ನೀಡಿದೆ. ಅಕ್ಟೋಬರ್ 3ರಿಂದ ನವೆಂಬರ್ 3ರವರೆಗೆ ಅರ್ಜಿ ಸಲ್ಲಿಸುವ ಹಾಗೂ ದಾಖಲೆ ಪರಿಶೀಲನೆಗೆ ಅವಕಾಶ ನೀಡಲಾಗಿದ್ದರೂ, ಹಲವು ಅಭ್ಯರ್ಥಿಗಳು ನೋಡಲ್ ಕೇಂದ್ರಗಳಲ್ಲಿ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳದೆ ಉಳಿದಿದ್ದಾರೆ. ಹೀಗಾಗಿ ಅಂತಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಅವಕಾಶ ಮಾಡಿಕೊಡಲಾಗಿದೆ.

ಒಟ್ಟು 28,976 ಅರ್ಹ ಹಾಗೂ 6,793 ಆಕ್ಷೇಪಿತ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ (https://schooleducation.karnataka.gov.in/)ನಲ್ಲಿ ಪ್ರಕಟಿಸಲಾಗಿದೆ. ಇವರಲ್ಲಿ 6,174 ಮಂದಿ ಅಭ್ಯರ್ಥಿಗಳು ಪತ್ರಿಕಾ ಪ್ರಕಟಣೆ ಹಾಗೂ ಫೋನ್ ಮೂಲಕ ನೀಡಿದ ಸೂಚನೆಗಳ ಬಳಿಕವೂ ದಾಖಲೆ ಪರಿಶೀಲನೆ ಮಾಡಿಸಿಕೊಂಡಿಲ್ಲ ಎಂದು ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ, ಇಲಾಖೆ ಈ ಅಭ್ಯರ್ಥಿಗಳಿಗೆ ನವೆಂಬರ್ 15ರೊಳಗೆ ತಮ್ಮ ನೋಡಲ್ ಕೇಂದ್ರಕ್ಕೆ ಮೂಲ ದಾಖಲೆಗಳೊಂದಿಗೆ ಹಾಜರಾಗಿ ಪರಿಶೀಲನೆ ಮಾಡಿಸಿಕೊಳ್ಳುವಂತೆ ಅಂತಿಮ ಅವಕಾಶ ನೀಡಿದೆ. ದಿನಾಂಕದ ನಂತರ ಯಾವುದೇ ತಿದ್ದುಪಡಿ ಅಥವಾ ದಾಖಲೆ ಪರಿಶೀಲನೆ ಮಾಡಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅದೇ ರೀತಿ, ಈಗಾಗಲೇ ಕಾಲೇಜು ಆಯ್ಕೆ ಮಾಡಿದ ಅಭ್ಯರ್ಥಿಗಳು ಅದರಲ್ಲಿ ಬದಲಾವಣೆ ಬಯಸಿದರೆ, ಆನ್‌ಲೈನ್ ಮೂಲಕ ಲಾಗಿನ್ ಆಗಿ ನವೆಂಬರ್ 15ರೊಳಗೆ ಬದಲಾವಣೆ ಮಾಡಿಕೊಳ್ಳಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಈ ದಿನ ಸಂಪಾದಕೀಯ | ಮೋದಿಯಡಿ ದೇಶ ಸುರಕ್ಷಿತವೆಂಬ ಸುಳ್ಳುಗುಳ್ಳೆಯ ಒಡೆದ ಸ್ಫೋಟ

ಮೂಲ ದಾಖಲೆ ಪರಿಶೀಲನೆ ಮಾಡಿಸದ ಹಾಗೂ ತಿದ್ದುಪಡಿ ಮಾಡಿಸದ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಯಿಂದ ಕೈಬಿಟ್ಟು ಉಳಿದವರ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿ ತಯಾರಿಸಿ ಕಾಲೇಜು ಹಂಚಿಕೆ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...