ಪೊಲೀಸರ ಕೊಲೆಗೆ ಸಂಚು ಆರೋಪ, 17 ರೈತ ಮುಖಂಡರು ಸೇರಿ 700 ರೈತರ ಮೇಲೆ ಎಫ್‌ಐಆರ್‌

Date:

ಬಾಗಲಕೋಟೆ ಜಿಲ್ಲೆಯ ಸೈದಾಪೂರದ ಸಮೀರವಾಡಿ ಸಕ್ಕರೆ ಕಾರ್ಖಾನೆಯಲ್ಲಿ ನ.13ರಂದು ಕಬ್ಬು ತುಂಬಿದ್ದ ಟ್ರಾಕ್ಟರ್ ಟ್ರೇಲರ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಸಂಚಿನ ಆರೋಪದ ಮೇಲೆ 17 ಜನ ರೈತ ಮುಖಂಡರು ಮತ್ತು 700 ರೈತರ ಮೇಲೆ ಎಫ್‌ಐಆರ್‌ ದಾಖಲಾಗಿದೆ

ಮಹಾಲಿಂಗಪುರ ಪೋಲಿಸ್ ಠಾಣೆಯ ಪಿಎಸ್‌ಐ ಶಿವಾನಂದ ಸಿಂಗನ್ನವರ್‌ ಅವರು ಸರ್ಕಾರದ ಪರವಾಗಿ ಎಫ್‌ಐಆರ್‌ ದಾಖಲಿಸಿದ್ದಾರೆ. (ಸಿ. ಆರ್ ನಂಬರ್ 75/2025)

ದಿ. 12.11.2025 ರಂದು ಗೋದಾವರಿ ಸಕ್ಕರೆ ಕಾರ್ಖಾನೆ ಸಮೀರವಾಡಿ ರವರು ಸರಕಾರ ನಿಗದಿ ಪಡಿಸಿದ ದರ ಪ್ರತಿ ಟನ್ ಗೆ ಕೊಡುವದಾಗಿ ಘೋಷಣೆ ಮಾಡಿ ಕಾರ್ಖಾನೆ ಪೂಜೆ ಕಾರ್ಯಕ್ರಮ ಮಾಡಿ ಕಬ್ಬು ಕಟಾವು ಮಾಡಲು ಆದೇಶ ಕೊಟ್ಟಿದ್ದರು. ಅದರಂತೆ ಕಬ್ಬು ತುಂಬಿದ ಸುಮಾರು 150 ಟ್ರ್ಯಾಕ್ಟರ್‌ಗಳು ಕಬ್ಬು ತುಂಬಿಕೊಂಡು ಕಾರ್ಖಾನೆಗೆ ಬಂದಿದ್ದವು. ಇದನ್ನು ಖಂಡಿಸಿ (1) ಬಸವಂತ ಕಾಂಬಳೆ, 2) ಹಣಮಂತಗೌಡ ಪಾಟೀಲ 3) ಸುರೇಶ ಚಿಂಚಲಿ 4) ಸುರೇಶ ಢವಳೇಶ್ವರ 5)ಮಹೇಶಗೌಡ ಪಾಟೀಲ 6) ದುಂಡಪ್ಪ ಯರಗಟ್ಟಿ, 7) ಕಲಮೇಶ ಹನಗೋಜಿ 8) ಮುತ್ತು ಹೊಸಕೋಟಿ 9)ರಾಚಪ್ಪ ಕೊಳ್ಳೋಳಿ 10) ಈರಪ್ಪ ಹಂಚಿನಾಳ 11) ಬಸಪ್ಪ ಸಂಗನ್ನವರ 12) ಸದಾಶಿವ ಸಂಕರಡ್ಡಿ 13)ಸುಭಾಸ ಶಿರಬೂರ 14) ಮಂಜು ಅರಕೇರಿ 15) ಹಣಮಂತ ನಬಾಬ್ 16) ಮುತ್ತಪ್ಪ ಕೋಮಾರ 17) ಗಂಗಾಧರ ಮೇಟಿ ಇವರ ನೇತೃತ್ವದಲ್ಲಿ ಸುಮಾರು 700 ಜನರು ಸಕ್ಕರೆ ಕಾರ್ಖಾನೆಗಳಿಗೆ ಮುತ್ತಿಗೆ ಹಾಕಿ‌ ಪ್ರತಿಭಟಿಸಿದರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಕೊಲೆಗೆ ಸಂಚು ರೂಪಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳದಲ್ಲಿ ಇಲ್ಲದಿದ್ದರೂ ಪ್ರಕರಣ ದಾಖಲು: ಆರೋಪ

ಈ ಪ್ರಕರಣದಲ್ಲಿ 17ನೇ ಆರೋಪಿಯನ್ನಾಗಿ ರೈತ ಮುಖಂಡ ಗಂಗಾಧರ ಮೇಟಿ ಹೆಸರಿದೆ. ಕಳೆದೊಂದು ವಾರದಿಂದ ತಾನು ಕುಟುಂಬ ಸಮೇತ ದಿಲ್ಲಿ ಪ್ರವಾಸದಲ್ಲಿದ್ದು, ತನ್ನ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಲಾಗಿದೆ ಎಂದು ಗಂಗಾಧರ ಮೇಟಿ ದೂರಿದ್ದಾರೆ.

ಮುಧೋಳದಲ್ಲಿ ನಡೆದ ಕಬ್ಬು ಬೆಳೆಗಾರರ ಚಳುವಳಿಯಲ್ಲಿ ತಾನು ಒಂದು ದಿನವು ಭಾಗವಹಿಸಲಿಲ್ಲ. ಘಟನೆ ನಡೆದಾಗ ಸ್ಥಳದಲ್ಲಿ ಇಲ್ಲದಿದ್ದರೂ ತಮ್ಮ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಗಂಗಾಧರ ಮೇಟಿ ಆರೋಪಿಸಿದ್ದಾರೆ.
ಸದ್ಯ ದಿಲ್ಲಿ ಪ್ರವಾಸದಲ್ಲಿರುವ ಅವರು, ಇಂಡಿಯಾ ಗೇಟ್ ಬಳಿಯಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ, ಪೊಲೀಸ್‌ ಇಲಾಖೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...