ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐದು ಜನ ಸಾಧಕರಿಗೆ 2025ನೇ ಸಾಲಿನ ವಾಲ್ಮೀಕಿ ಪ್ರಶಸ್ತಿ

Date:

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅರ್ಹರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪ್ರತಿ‌ ವರ್ಷ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದೆ.

ಪ್ರತಿ ವರ್ಷದಂತೆ‌ ಈ ವರ್ಷವೂ ಸಹ ರಂಗಭೂಮಿ, ಸಂಘಟನೆ, ಮಾಧ್ಯಮ, ‌ಸಾಮಾಜಿಕ ಕ್ಷೇತ್ರ ಮತ್ತು ಸಮಾಜ ಸೇವೆಯಲ್ಲಿ ತಮ್ಮದೇ ಅದ‌ ವಿಶಿಷ್ಟ ಸೇವೆ ಸಲ್ಲಿಸಿ‌ ವಾಲ್ಮೀಕಿ ಸಮಾಜಕ್ಕೆ‌ ತಮ್ಮ ಕೊಡಿಗೆಯನ್ನು ನೀಡಿರುವ ಅರ್ಹ ಸಾಧಕರನ್ನು ಗುರುತಿಸಿ ವಾಲ್ಮೀಕಿ ಪ್ರಶಸ್ತಿಯನ್ನು ಸರ್ಕಾರವು ಪ್ರಕಟಿಸಿದೆ.

2025ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಬೆಂಗಳೂರು ಕೇಂದ್ರದ ಮಾಧ್ಯಮ ಕ್ಷೇತ್ರದಿಂದ ಬೆಂಗಳೂರಿನ ನಾಗರಾಜು ಗಾಣದ ಹುಣಸೆ, ಬೆಂಗಳೂರು ವಿಭಾಗದಲ್ಲಿ ರಂಗಭೂಮಿ ಕ್ಷೇತ್ರದಿಂದ ಚಿತ್ರದುರ್ಗದ ಚಳ್ಳಕೆರೆಯ ಪಿ. ತಿಪ್ಪೇಸ್ವಾಮಿ, ಮೈಸೂರು ವಿಭಾಗದಲ್ಲಿ ಸಂಘಟನೆ ಕ್ಷೇತ್ರದಿಂದ ಕೊಡಗಿನ ವಿರಾಜಪೇಟೆಯ ಜೆ.ಕೆ. ಮುತ್ತಮ್ಮ, ಬೆಳಗಾವಿ ವಿಭಾಗದಲ್ಲಿ ಸಮಾಜಸೇವೆ ಕ್ಷೇತ್ರದಿಂದ ವಿಜಯಪುರ ಟೌನ್ ನ ಮಳಸಿದ್ದ ಲಕ್ಷ್ಮಣ ನಾಯಕೋಡಿ ಮತ್ತು ಕಲಬುರಗಿ ವಿಭಾಗದಲ್ಲಿ ಸಾಮಾಜಿಕ ಕ್ಷೇತ್ರದಿಂದ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಟೌನ್ ನ ಕೆ. ಉಚ್ಚಂಗಪ್ಪ ಅವರು ಭಾಜನರಾಗಿದ್ದಾರೆ ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಪ್ರತಿ ವರ್ಷ ಸೀಗೆಹುಣ್ಣಿಮೆ ದಿನದಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಡಾ: ಬಿ.ಆರ್. ಅಂಬೇಡ್ಕ‌ರ್, ಡಾ: ಬಾಬು ಜಗಜೀವನರಾಂ ಹಾಗೂ ಡಿ. ದೇವರಾಜು ಅರಸು ಇವರ ಸ್ಮರಣಾರ್ಥ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುತ್ತಿರುವ ಮಾದರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಸೋಮಣ್ಣ, ಡಿಕೆಶಿ ಉದ್ಧಟತನ ಅಕ್ಷಮ್ಯ

ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಶೈಕ್ಷಣಿಕ ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವಂತಹ ಬೆಂಗಳೂರು, ಮೈಸೂರು. ಬೆಳಗಾವಿ, ಕಲಬುರಗಿ ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ಕೇಂದ್ರ ಸ್ಥಾನದಿಂದ ತಲಾ ಒಬ್ಬರಂತೆ ಒಟ್ಟು ಐದು ಸಾಧಕರಿಗೆ ನಗದು ಮೊತ್ತ ಹಾಗೂ ಬಂಗಾರದ ಪದಕಗಳನ್ನು ನೀಡಿ ಗೌರವಿಸಲಾಗುವುದು.

2025-26ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಇವರ ಸ್ಮರಣಾರ್ಥ ನೀಡುವ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಆಯ್ಕೆ ಮಾಡುವ ಸಂಬಂಧ ಡಾ.ಎ.ಬಿ ರಾಮಚಂದ್ರಪ್ಪ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು.

ಸಮಿತಿಯು ಸಭೆಗಳನ್ನು ನಡೆಸಿ ಪ್ರಶಸ್ತಿಗಾಗಿ ಸ್ವೀಕರಿಸಲಾದ ಸುಮಾರು 133 ನಾಮನಿರ್ದೇಶನಗಳನ್ನು ಪರಿಶೀಲಿಸಿ ಅರ್ಹ ಸಾಧಕರನ್ನು ಗುರುತಿಸಿ ಗುರುತಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು ಸರ್ಕಾರವು ಸಮಿತಿಯ ಶಿಫಾರಸ್ಸನ್ನು ಒಪ್ಪಿ ಅರ್ಹರಿಗೆ ಪ್ರಶಸ್ತಿಯನ್ನು ಘೋಷಿಸಿರುತ್ತದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...