ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ, ಶೀಘ್ರವೇ ಚುನಾವಣೆ: ಡಿ ಕೆ ಶಿವಕುಮಾರ್

Date:

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ, ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.

“ಜಿಬಿಎ ರಚನೆ ಮಾಡಲಾಗಿದೆ ಈ ಮೂಲಕ ಐದು ಪಾಲಿಕೆಗಳನ್ನು ನಾವು ಮಾಡಿಯೇ ತೀರುತ್ತೇವೆ. ಈ ಕುರಿತು ಶಾಸಕ ರಿಜ್ವಾನ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಕೆಲವರು ಸಾರ್ವಜನಿಕವಾಗಿ ವಿರೋಧ ಮಾಡಬಹುದು. ಆದರೆ ಆಡಳಿತ ದೃಷ್ಟಿಯಿಂದ ಇದನ್ನು ಮಾಡಲೇಬೇಕಾಗಿದೆ. ಪಾಲಿಕೆಗಳು ರಚನೆಯಾದರೆ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನ ಮಾನ ನೀಡಲೇಬೇಕು ಎಂದು ನಾವು ತೀರ್ಮಾನಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿ.ಕೆ.ಶಿವಕುಮಾರ್ ಒಬ್ಬನೇ ಸರ್ಕಾರ ತರಲು ಆಗುವುದಿಲ್ಲ. ಕಾರ್ಯಕರ್ತರೇ ಇಲ್ಲಿ ಜೀವಾಳ. ನಾವು ವಿಧಾನಸೌಧದಲ್ಲಿ ತೀರ್ಮಾನ ಮಾಡಬಹುದು. ಆದರೆ ಸರ್ಕಾರದ ರಾಯಭಾರಿಗಳು ನೀವು. ನಮ್ಮ ಭವಿಷ್ಯ, ಬೆಂಗಳೂರು ಭವಿಷ್ಯ ನಿಮ್ಮ ಕೈಯಲ್ಲಿದೆ” ಎಂದು ಹೇಳಿದರು.

ಜನರ ಕಲ್ಯಾಣಕ್ಕಾಗಿ 25% ಹಣ ವಿನಿಯೋಗ

“ನಮ್ಮ ಸರ್ಕಾರ ಸಮಾಜ ಹಾಗೂ ಬಡವರ ಕಲ್ಯಾಣಕ್ಕಾಗಿ 1 ಲಕ್ಷ ಕೋಟಿ ರೂ.ಹಣ ನೀಡಿದೆ. 50 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚವಾದರೆ, 19 ಸಾವಿರ ಕೋಟಿ ಹಣವನ್ನು ರೈತರ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್, ಸುಮಾರು 11 ಸಾವಿರ ಕೋಟಿಯನ್ನು ಪಿಂಚಣಿಗಳಿಗೆ ವೆಚ್ಚ ಮಾಡಲಾಗುತ್ತಿದೆ. ರಾಜ್ಯ ಬಜೆಟ್ಟಿನ 25% ಹಣವನ್ನು ಜನರಿಗೆ ನೀಡುತ್ತಿದ್ದೇವೆ. ಈ ಉಪಕಾರ ಸ್ಮರಣೆಯನ್ನು ಜನರಿಗೆ ಮನದಟ್ಟು ಮಾಡಬೇಕಿರುವುದು ನಿಮ್ಮ ಕರ್ತವ್ಯ” ಎಂದರು.

“ಈ ದೇಶದ ಇತಿಹಾಸದಲ್ಲಿ ಕಾಂಗ್ರೆಸ್ ನೀಡಿರುವ ಹಲವಾರು ಕಾರ್ಯಕ್ರಮಗಳನ್ನು ಯಾರೂ ಸಹ ನಿಲ್ಲಸಲು ಸಾಧ್ಯವಿಲ್ಲ. ಉಳುವವನೆ ಭೂಮಿಯ ಒಡೆಯ, ಅಂಗನವಾಡಿ, ಆಶಾ, ನರೇಗಾ ಹೀಗೆ ನೂರಾರು ಕಾರ್ಯಕ್ರಮಗಳು ಕಾಂಗ್ರೆಸ್ ಜನರಿಗೆ ನೀಡಿರುವ ಶಕ್ತಿ. ಅರಣ್ಯ ಭೂಮಿ ಹಕ್ಕು, ಆಹಾರ ಭದ್ರತಾ ಕಾಯ್ದೆಗಳನ್ನು ಬಿಜೆಪಿಯವರು ಬದಲಾವಣೆ ಮಾಡಲು ಸಾಧ್ಯವಾಯಿತೇ? ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಿದ್ದು ಬಂಗಾರಪ್ಪ ಅವರು. ನಾವು ಯಾವುದೇ ರಾಜಕೀಯ ದೃಷ್ಟಿ ಇಟ್ಟುಕೊಂಡು ನಾವು ಕೆಲಸ ಮಾಡುತ್ತಿಲ್ಲ. ಜನರ ಅಭಿವೃದ್ದಿಗಾಗಿ ಕೆಲಸ ಮಾಡುತ್ತಿದ್ದೇವೆ. ಬ್ಯಾಂಕ್ ಗಳ ರಾಷ್ಟ್ರೀಕರಣದಿಂದ ಬ್ಯಾಂಕ್ ಗಳೇ ಮನೆ ಬಾಗಿಲಿಗೆ ಬಂದಿವೆ. ಬಿಸಿಯೂಟ, ಅನ್ನಭಾಗ್ಯ ಇದೆಲ್ಲವೂ ಕ್ರಾಂತಿಕಾರಕ ಯೋಜನೆಗಳು. ಹಟ್ಟಿ, ತಾಂಡಾಗಳಲ್ಲಿ ವಾಸವಿರುವ ಜನರು ಯಾವುದೇ ಭೂ ದಾಖಲೆಗಳನ್ನು ಹೊಂದಿರಲಿಲ್ಲ. ಅವರಿಗೆಲ್ಲ ಉಚಿತವಾಗಿ ಭೂ ದಾಖಲೆಗಳನ್ನು ನೀಡಲಾಗುತ್ತಿದೆ. ಇತ್ತೀಚೆಗೆ 1,11,111 ದಾಖಲೆಗಳನ್ನು ನೀಡಲಾಯಿತು” ಎಂದು ತಿಳಿಸಿದರು.

ವಾರ್ಡ್, ಪಂಚಾಯ್ತಿ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶ

“ನೀವುಗಳು ಕೂಡ ಈ ಕೆಲಸ ಮಾಡಬೇಕು. ಪ್ರತಿ ವಾರ್ಡ್, ಪಂಚಾಯ್ತಿಯಲ್ಲಿ ಗ್ಯಾರಂಟಿ ಸಮಾವೇಶ ಮಾಡುವುದರ ಬಗ್ಗೆ ಚರ್ಚಿಸುತ್ತಿದ್ದೇವೆ. ಆಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು. ಇಂದಿನ ಕಾರ್ಯಕ್ರಮಕ್ಕೆ ಪರಾಜಿತ ಅಭ್ಯರ್ಥಿಗಳು, ಬ್ಲಾಕ್ ಅಧ್ಯಕ್ಷರು, ಮಾಜಿ ಕೌನ್ಸಲರ್ ಗಳನ್ನು ಕರೆಸಿದ್ದು, ನೀವು ಈ ವಿಚಾರವಾಗಿ ಯಾವ ರೀತಿ ಕೆಲಸ ಮಾಡುತ್ತೀರಿ ಅದರ ಮೇಲೆ ನಿಮ್ಮ ಹಣೆಬರಹ ನಿರ್ಧಾರವಾಗಲಿದೆ. ಡಿ.ಕೆ. ಶಿವಕುಮಾರ್, ಹೆಚ್.ಎಂ ರೇವಣ್ಣ ಹಿಂದೆ ಗಿರಕಿ ಹೊಡೆದರೆ ಪಾಲಿಕೆ ಚುನಾವಣೆ ಟಿಕೆಟ್ ಸಿಗುತ್ತದೆ ಎಂದು ನೀವು ಭಾವಿಸಿದ್ದರೆ, ಅದನ್ನು ತಲೆಯಿಂದ ತೆಗೆದುಹಾಕಿ. ನೀವು ಸ್ಥಳೀಯ ಮಟ್ಟದಲ್ಲಿದ್ದು ಕೆಲಸ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

33% ಮೀಸಲಾತಿ ಜಾರಿಯಾದರೆ 75 ಜನ ಮಹಿಳಾ ಶಾಸಕಿಯರು

“ಕಾರ್ಯಕರ್ತರು ಯಾವುದಕ್ಕೂ ಚಿಂತನೆ ಮಾಡಬೇಡಿ. ಎಲ್ಲರೂ ಶಾಸಕರು, ಪಾಲಿಕೆ ಸದಸ್ಯರು ಆಗಲು ಆಗುವುದಿಲ್ಲ. ಮನೆಯಲ್ಲಿ ಬೈದರೂ ಕೂಡ ನಮ್ಮ ಮಹಿಳಾ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯುತ್ತಾರೆ. ಅವರಿಗಾಗಿ ಏನಾದರೂ ಮಾಡಲೇಬೇಕು. ಇದಕ್ಕಾಗಿ ರಾಜಕೀಯದಲ್ಲಿ 33% ಮೀಸಲಾತಿ ತರಲು ನಾವು ಪ್ರಯತ್ನ ಮಾಡಿದ್ದೆವು. ಮುಂದೆ ಇದು ಜಾರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗೆ ಇದನ್ನು ಜಾರಿಗೆ ತರಲು ಸಿದ್ಧತೆ ನಡೆಯುತ್ತಿದೆ. ಇದು ಜಾರಿಯಾದರೆ, ನಮ್ಮ ಜೊತೆಗೆ 75 ಜನ ಮಹಿಳಾ ಶಾಸಕಿಯರು ಇರುತ್ತಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ 50% ಮೀಸಲಾತಿ ನೀಡಿದ್ದೇವೆ” ಎಂದು ಹೇಳಿದರು.

ಬಿಜೆಪಿ ಯಾವತ್ತಿಗೂ ಅಭಿವೃದ್ಧಿಯ ವಿರುದ್ಧ

ಕಾರ್ಯಕ್ರಮದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಟನಲ್ ರಸ್ತೆ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿದೆ ಎನ್ನುವ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಬಗ್ಗೆ ಕೇಳಿದಾಗ, “ದೆಹಲಿ, ಮುಂಬೈ ಹಾಗೂ ದೇಶದ ಇತರೇ ಭಾಗಗಳಲ್ಲಿ ಟನಲ್ ರಸ್ತೆ ಮಾಡಲಾಗುತ್ತಿದೆ. ಅಲ್ಲೆಲ್ಲಾ ಯಾವ ಕಾರಣಕ್ಕೆ ಟನಲ್ ರಸ್ತೆ ಮಾಡಲಾಗುತ್ತಿದೆ. ಇಲ್ಲಿ ಮಾತ್ರ ಯಾಕೆ ವಿರೋಧ. ಆತನಿಗೆ (ತೇಜಸ್ವಿ ಸೂರ್ಯ) ಆನಂತರ ಉತ್ತರಿಸುತ್ತೇನೆ. ನಾವು ಏನೇ ಮಾಡಿದರು ಟೀಕೆ ಮಾಡುತ್ತಾರೆ. ಬಿಜೆಪಿ ಯಾವತ್ತಿಗೂ ಅಭಿವೃದ್ಧಿಯ ವಿರುದ್ಧವಾಗಿರುವ ಪಕ್ಷ. ಬೆಂಗಳೂರಿಗೆ ಅವರ ಕೊಡುಗೆ ಶೂನ್ಯ” ಎಂದರು.

ಮೆಟ್ರೋ ಡಿಪಿಆರ್‌ ಅನ್ನೇ ಟನಲ್‌ ರಸ್ತೆ ಡಿಪಿಆರ್‌ ಆಗಿ ನಕಲು ಮಾಡಲಾಗಿದೆ ಎಂದಾಗ, “ಆತನಿಗೆ ಉತ್ತರ ನೀಡಲು ಹೋಗುವುದಿಲ್ಲ. ಮೆಟ್ರೋ ಕಾಂಗ್ರೆಸ್‌ ಪಕ್ಷದ ಕೊಡುಗೆ” ಎಂದು ಉತ್ತರ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...