ಎಸ್ಐಟಿ ರಚನೆ ಒಳ್ಳೆಯದೆ ಆಗಿದೆ, ರಾಜ್ಯ ಸರಕಾರ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಎಂ ಬಿ ಪಾಟೀಲ್

Date:

ಧರ್ಮಸ್ಥಳ ಕ್ಷೇತ್ರದ ವಿಚಾರದಲ್ಲಿ ಮಿಥ್ಯಾರೋಪಕ್ಕೆ ಪ್ರಚಾರ ಸಿಗುವ ಬದಲು ಸತ್ಯ ದೃಢವಾಗಲಿ ಎನ್ನುವ ಉದ್ದೇಶದಿಂದ ಸರಕಾರ ಎಸ್ಐಟಿ ರಚಿಸಬೇಕಾಗಿ ಬಂತು. ಇದನ್ನು ಬಿಜೆಪಿಯವರೂ ಸ್ವಾಗತಿಸಿದ್ದರು. ಈಗ ಇದನ್ನೇ ಅವರು ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ‌, “ಯಾರೋ ಒಬ್ಬ ಅನಾಮಿಕ ತಾನು ಧರ್ಮಸ್ಥಳದಲ್ಲಿ ಹತ್ತಾರು ಶವಗಳನ್ನು ಹೂತು ಹಾಕಿದ್ದಾಗಿ ಹೇಳಲು ಶುರು ಮಾಡಿದ. ಅದೇನೆಂದು ಸರಿಯಾಗಿ ಕಂಡುಕೊಳ್ಳುವುದು ಸರಕಾರದ ಕರ್ತವ್ಯವಾಗಿತ್ತು. ಎಸ್ಐಟಿ ಮಾಡಿದ್ದರಿಂದ ಧರ್ಮಸ್ಥಳದ ಶಕ್ತಿ ಮತ್ತು ಆ ಕ್ಷೇತ್ರದ ಬಗೆಗಿನ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಏಕೆಂದರೆ, ಇದರಿಂದ ವಿನಾ ಕಾರಣ ಕಳಂಕ ಅಂಟಿಕೊಳ್ಳುವ ಅಪಾಯ ತಪ್ಪಿತು” ಎಂದು ತಿಳಿಸಿದ್ದಾರೆ.

“ಧರ್ಮಸ್ಥಳದಲ್ಲಿ ಏನೋ ನಡೆಯಬಾರದ್ದು ನಡೆದಿರಬಹುದು ಎನ್ನುವ ಅನುಮಾನ ಬಿಜೆಪಿಯವರಿಗೂ ಇತ್ತು. ಇಲ್ಲದಿದ್ದರೆ ಎಸ್ಐಟಿ ರಚನೆಯನ್ನೇಕೆ ಅವರು ಸ್ವಾಗತಿಸುತ್ತಿದ್ದರು? ಈಗ ಅಲ್ಲಿ ಅಂಥದ್ದೇನೂ ನಡೆದಿಲ್ಲ ಎಂದಾಗಿದೆ. ಹೀಗಾಗಿ ಬಿಜೆಪಿ ಇದನ್ನು ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹವಣಿಸುತ್ತಿದೆ. ಎಸ್ಐಟಿ ಮಾಡಿದ್ದರಿಂದ ಒಳ್ಳೆಯದೇ ಆಗಿದೆ. ಇದಕ್ಕಾಗಿ ರಾಜ್ಯ ಸರಕಾರ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಬಳಿ ವಿಚಾರಗಳೇ ಇಲ್ಲ

“ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಬಾನು ಮುಷ್ತಾಕ್ ಅವರನ್ನು ಕರೆಯಲು ಸರಕಾರ ತೀರ್ಮಾನಿಸಿದೆ. ಬಿಜೆಪಿ ಇದನ್ನೂ ವಿರೋಧಿಸುತ್ತಿದೆ. ಹಿಂದೆ ಕವಿ ಕೆ ಎಸ್ ನಿಸಾರ್ ಅಹಮದ್ ಕೂಡ ದಸರಾ ಉದ್ಘಾಟಿಸಿದ್ದರು. ವಿಜಯಪುರದಲ್ಲಿ ನನ್ನನ್ನು ಕೂಡ ಮುಸ್ಲಿಮರು ತಮ್ಮ ಧಾರ್ಮಿಕ ಕೇಂದ್ರಗಳಿಗೆ ಆಹ್ವಾನಿಸುತ್ತಾರೆ. ಇದರಲ್ಲೆಲ್ಲ ತಪ್ಪೇನಿದೆ?” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

“ಬಿಜೆಪಿಯವರ ಬತ್ತಳಿಕೆಯಲ್ಲಿ ಗಟ್ಟಿ ವಿಚಾರಗಳೇ ಇಲ್ಲ. ಹೀಗಾಗಿಯೇ ಅವರು ಜಾತಿ ಮತ್ತು ಧರ್ಮಗಳ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಅಮೆರಿಕದ ತೆರಿಗೆ ಹೇರಿಕೆ, ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ಬೆಂಗಳೂರು ನಗರಕ್ಕೆ ಬೇಕಾದ ಎರಡನೆಯ ವಿಮಾನ ನಿಲ್ದಾಣ ಮತ್ತು ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಕೇಂದ್ರ ಸರಕಾರದ ಜೊತೆ ಮಾತನಾಡಲಿ” ಎಂದು ಪಾಟೀಲ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...