ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಏಕೆ? ಕಾರಣ ಬಿಚ್ಚಿಟ್ಟ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

Date:

ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಕಾರಣ ಬಿಚ್ಚಿಟ್ಟಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಮಿತ್ ಶಾ ಜೊತೆ ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ. ಲೋಕಸಭಾ ಕ್ಷೇತ್ರಗಳ ಸೀಟು ಹಂಚಿಕೆ ಬಗ್ಗೆ ಚರ್ಚೆ ಇನ್ನೂ ನಡೆಯಬೇಕಷ್ಟೇ. ದಸರಾ ಬಳಿಕ ಸೀಟು ಹಂಚಿಕೆ ಚರ್ಚೆ ನಡೆಯಲಿದೆ. ಅಮಿತ್ ಶಾ ಜೊತೆ ಕುಮಾರಸ್ವಾಮಿ ಮತ್ತೆ ಚರ್ಚೆ ಮಾಡಲಿದ್ದಾರೆ. ಮೈತ್ರಿ ಚರ್ಚೆಗೂ ಮುನ್ನ ಶಾಸಕರು, ಸಿ ಎಂ ಇಬ್ರಾಹಿಂ ಜೊತೆ ಮಾತುಕತೆ ನಡೆಸುತ್ತೇವೆ. ಆ ನಂತರ ಎಚ್​ ಡಿ ಕುಮಾರಸ್ವಾಮಿ ಅವರು ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ. ಮಂಡ್ಯ ಸೇರಿದಂತೆ ಯಾವುದೇ ಕ್ಷೇತ್ರಗಳ ಬಗ್ಗೆ ತೀರ್ಮಾನ ಆಗಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಎಲ್ಲ 28 ಕ್ಷೇತ್ರಗಳನ್ನೂ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಆ ಕಾರಣಕ್ಕೆ ಮೈತ್ರಿ ನಿರ್ಧಾರಕ್ಕೆ ಬಂದಿದ್ದೇವೆ” ಎಂದು ತಿಳಿಸಿದರು.

“ಸಂಸತ್ತಿನ ಚಳಿಗಾಲದ ಅಧಿವೇಶನ ಕಳೆದು ನನ್ನ ಆರೋಗ್ಯ ಸುಧಾರಿಸಿದರೆ ನಾನು ಅಥವಾ ಕುಮಾರಸ್ವಾಮಿ ಮತ್ತೆ ಕೇಂದ್ರ ಗೃಹಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದೇವೆ. ಮೈತ್ರಿಗೆ ಮೊದಲು ಜೆಡಿಎಸ್ ನ 19 ಶಾಸಕರು, 8 ವಿಧಾನ ಪರಿಷತ್ ಸದಸ್ಯರುಗಳು, ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಜೊತೆ ಎರಡು ಸುತ್ತು ಮಾತುಕತೆ ನಡೆಸಲಾಗಿದೆ. ಅದು ನಡೆದ ಬಳಿಕ ಕುಮಾರಸ್ವಾಮಿ ಗೃಹ ಮಂತ್ರಿಗಳ ಭೇಟಿ ಮಾಡಿದ್ದಾರೆ. ಹಿಂದಿನ ಚುನಾವಣೆಯ ಮತ ಗಳಿಕೆ ಒಟ್ಟುಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ. ಆದರೆ ಯಾವ ಯಾವ ಕ್ಷೇತ್ರ ಅನ್ನೋ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಮಂಡ್ಯ ಸೇರಿದಂತೆ ಯಾವುದೇ ತೀರ್ಮಾನ ಆಗಿಲ್ಲ. ಸದ್ಯ ಹಾಸನ ಜೆಡಿಎಸ್, ರಾಮನಗರ ಕಾಂಗ್ರೆಸ್ ಕೈಯಲ್ಲಿದೆ, ಉಳಿದೆಡೆ ಬಿಜೆಪಿನೇ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಧಾನಸಭಾ ಚುನಾವಣೆಗಳ ಜೊತೆ ಬಿಜೆಪಿ ವಿದಾಯವನ್ನು ಘೋಷಿಸಲಾಗಿದೆ: ಮಲ್ಲಿಕಾರ್ಜುನ ಖರ್ಗೆ

“ಜಾತಿ ಆಧಾರದಲ್ಲಿ ಮತ ವಿಭಜನೆಯ ಬಗ್ಗೆ ನಾನು ಈಗ ವಾದ ಮಾಡಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇಕಡಾವಾರು ಮತ ಬಿಜೆಪಿಗೆ 30-33, ಕಾಂಗ್ರೆಸ್ 40, ಜೆಡಿಎಸ್ 20, 22 ಸಿಕ್ಕಿದೆ. ಈ ಬಾರಿಗೆ ಯಾರಿಗೆ ಮತ ಹಾಕಬೇಕು ಎನ್ನುವುದನ್ನು ಮತದಾರ ತೀರ್ಮಾನ ಮಾಡ್ತಾನೆ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರೋ ವಿಚಾರದ ಬಗ್ಗೆ ಹೆಚ್ಚೇನೂ ನಾನು ಚರ್ಚೆ ಮಾಡಲು ಹೋಗಲ್ಲ. ನಾನು ಇರೋದು ಬೆಂಗಳೂರಿನಲ್ಲಿ, ಯಾರನ್ನೂ ಭೇಟಿಯೂ ಆಗಿಲ್ಲ. ಎನ್‌ಡಿಎ, ಯುಪಿಎ ಬಗ್ಗೆ, ಯಾರ ಬಗ್ಗೆಯೂ ಹೆಚ್ಚು ತಲೆಕೊಡಿಸಿಕೊಳ್ಳಲು ಹೋಗಲ್ಲ. ‘ಐ ಆಮ್ 91 ಕ್ಷಮಿಸಿ’ ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದಂಪತಿ ಸಮೇತ ಇಂದು ಸೋಮವಾರ ಭೇಟಿ ನೀಡಿದ್ದು, ನಾಗಪ್ರತಿಷ್ಠೆ, ತುಲಾಭಾರ, ಮಹಾಪೂಜೆ ನೆರವೇರಿಸಿದರು. ಪತ್ನಿ ಚೆನ್ನಮ್ಮ ಜೊತೆಯಾಗಿ ಪೂಜಾ ಕಾರ್ಯಗಳಲ್ಲಿ ಭಾಗಿಯಾದರು. ದಂಪತಿ ಬೆಳಗ್ಗೆ ಆಶ್ಲೇಷ ಪೂಜೆ ನೆರವೇರಿಸಿದರು. ಬಳಿಕ ಸಂಪುಟ ನರಸಿಂಹ ದೇವರ ದರ್ಶನ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...