ನೇಕಾರರ ಮಗ್ಗಗಳಿಗೆ 250 ಯುನಿಟ್‌ವರೆಗೂ ಉಚಿತ ವಿದ್ಯುತ್‌: ಸಚಿವ ಶಿವಾನಂದ ಪಾಟೀಲ್

Date:

  • ’10 ಎಚ್‌.ಪಿ. ವರೆಗಿನ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಅನ್ವಯ’
  • ದಸರಾ, ದೀಪಾವಳಿ ಕೊಡುಗೆಯಾಗಿ ಉಚಿತ ವಿದ್ಯುತ್‌: ಶಿವಾನಂದ ಪಾಟೀಲ್

10 ಎಚ್‌.ಪಿ. ವರೆಗಿನ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಮಾಸಿಕ ಗರಿಷ್ಠ 250 ಯುನಿಟ್‌ ವರೆಗೆ ಉಚಿತ ವಿದ್ಯುತ್‌ ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದರು.

ವಿಜಯಪುರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ನೇಕಾರರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಲು ಸರ್ಕಾರ ಕ್ರಮಕೈಗೊಂಡಿದೆ. ಈ ಮೂಲಕ ಆರ್ಥಿಕ ಸಂಕಷ್ಟದಲ್ಲಿರುವ ನೇಕಾರರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ದಸರಾ, ದೀಪಾವಳಿ ಕೊಡುಗೆಯಾಗಿ ಉಚಿತ ವಿದ್ಯುತ್‌ ನೀಡಲು ಮುಂದಾಗಿದೆ” ಎಂದರು.

“ಈ ಯೋಜನೆ ಅನುಷ್ಠಾನದಿಂದ ರಾಜ್ಯದ ಸುಮಾರು 40 ಸಾವಿರ ನೇಕಾರರಿಗೆ ಅನುಕೂಲವಾಗಲಿದೆ. ನೇಕಾರರಿಗೆ ಉಚಿತ ವಿದ್ಯುತ್‌ ಪೂರೈಕೆಯಿಂದ ಮಾಸಿಕ ಅಂದಾಜು ₹150 ಕೋಟಿ ಮೊತ್ತವನ್ನು ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಭರಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“10 ರಿಂದ 20 ಎಚ್‌.ಪಿ. ವರೆಗಿನ ವಿದ್ಯುತ್‌ ಮಗ್ಗ ಹಾಗೂ ಮಗ್ಗಪೂರ್ವ ಘಟಕಗಳಿಗೆ ಪ್ರತಿ ಯುನಿಟ್‌ಗೆ ₹1.25ರಂತೆ ರಿಯಾಯಿತಿ ದರದಲ್ಲಿ ಮಾಸಿಕ ಗರಿಷ್ಠ 500 ಯುನಿಟ್‌ ವರೆಗೆ ವಿದ್ಯುತ್‌ ಪೂರೈಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ನಕಲಿ ವೋಟರ್‌ ಐಡಿ ತಯಾರಿಕೆ ಆರೋಪ; ಭೈರತಿ ಸುರೇಶ್‌ ಆಪ್ತ ಸೇರಿ ಮೂವರು ಸಿಸಿಬಿ ವಶಕ್ಕೆ

“ಉಚಿತ ವಿದ್ಯುತ್‌ ಸಹಾಯಧನ ಯೋಜನೆಗೆ ನೋಂದಾಯಿಸಿಕೊಳ್ಳಲು ನೇಕಾರರು ತಮ್ಮ ಆಧಾರ್‌ ಕಾರ್ಡ್‌, ಪಡಿತರ ಕಾರ್ಡ್‌, ಮಗ್ಗದ ಚಿತ್ರ, ವಿದ್ಯುತ್‌ ಸಂಪರ್ಕ ಹೊಂದಿರುವ ದಾಖಲಾತಿ, ಆರ್‌.ಆರ್‌.ಸಂಖ್ಯೆ, ಬಿಲ್‌ ಮತ್ತು ರಸೀದಿ ಸೇರಿದಂತೆ ಇತರೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು” ಎಂದು ವಿವರಿಸಿದರು.

ರಾಜ್ಯದಲ್ಲಿ ಬರಗಾಲ ಇರುವುದರಿಂದ ಈ ಬಾರಿ ಕಬ್ಬಿನ ಇಳುವರಿ ಕಡಿಮೆಯಾಗುವ ಸಾಧ್ಯತೆ ಇದೆ. ಹಿಂದಿನ ಹಂಗಾಮುಗಳಲ್ಲಿ ಸಕ್ಕರೆ ಕಾರ್ಖಾನೆಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಬೇರೆ ಬೇರೆ ಅವಧಿಯಲ್ಲಿ ಕಬ್ಬು ನುರಿಸಲು ಆರಂಭಿಸುತ್ತಿರುವುದನ್ನು ತಪ್ಪಿಸಿ, ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಏಕಕಾಲಕ್ಕೆ ಕಬ್ಬು ನುರಿಸುವಿಕೆ ಆರಂಭಿಸಲು ಸಕ್ಕರೆ ಕಾರ್ಖಾನೆಗಳಿಗೆ ಈ ನಿರ್ದೇಶನ ನೀಡಲಾಗಿದೆ. ರಾಜ್ಯದಾದ್ಯಂತ ಸಕ್ಕರೆ ಕಾರ್ಖಾನೆಗಳು ಅ.25ರಿಂದಲೇ ಕಬ್ಬು ನುರಿಸಲು ಆರಂಭಿಸುವಂತೆ ಸರ್ಕಾರ ಹೊಸ ಆದೇಶ ಹೊರಡಿಸಿದೆ” ಎಂದು ಇದೇ ವೇಳೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...