ಹಿಂದೂ ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು: ಬಸನಗೌಡ ಪಾಟೀಲ ಯತ್ನಾಳ

Date:

  • ಬೆಂಗಳೂರಿನಲ್ಲಿ ಕಾನೂನು ನೆರವು ಕಚೇರಿ ತೆರೆಯುತ್ತೇನೆ
  • ಬಿಜೆಪಿ-ಹಿಂದೂ ಕಾರ್ಯಕರ್ತರಲ್ಲಿ ಧೈರ್ಯ ತುಂಬುವೆ

ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಹಿಂದೂ ಸಂತ್ರಸ್ತರಿಗೆ ಕಾನೂನು ನೆರವು ನೀಡುವುದಕ್ಕಾಗಿ ಬೆಂಗಳೂರಿನಲ್ಲಿ ಕಚೇರಿ ತೆರೆಯುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಘೋಷಿಸಿದರು.

ಶನಿವಾರ ವಿಜಯಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೂ ಪೊಲೀಸರು ಪ್ರಕರಣ ದಾಖಲಿಸುವ, ಠಾಣೆಗೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಳ್ಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯದ ಹರಣ ನಡೆಯುತ್ತಿದೆ. ಇಂಥ ದೌರ್ಜನ್ಯದಿಂದ ಬಾಧಿತರಿಗೆ ಉಚಿತವಾಗಿ ಕಾನೂನು ನೆರವು ನೀಡುವುದಕ್ಕಾಗಿ ಎರಡು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಚೇರಿ ತೆರೆಯುವೆ” ಎಂದರು.

“ಉಚಿತ ಕಾನೂನು ನೆರವು ನೀಡಲು ಹಲವು ವಕೀಲರು ಮುಂದೆ ಬಂದಿದ್ದಾರೆ. ಬಾಧಿತರಿಗೆ ಉಚಿತ ಕಾಲಿಂಗ್ ಸೇವೆ ಆರಂಭಿಸಿ, ಭಯದಿಂದ ಬಳಲಿರುವ ಬಿಜೆಪಿ-ಹಿಂದೂ ಕಾರ್ಯಕರ್ತರಲ್ಲಿ ಧೈರ್ಯ ತುಂಬುವ ಕೆಲಸ ಮಾಡಲಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ ಹೆಸರು ಇಡುವುದು ಸೂಕ್ತವಲ್ಲ. ಆದಿಲ್ ಶಾಹಿ, ನಿಜಾಮ ಶಾಹಿ ವ್ಯವಸ್ಥೆಯಿಂದ ನಮ್ಮ ಭಾಗ ಅಭಿವೃದ್ಧಿಯಾಗಿಲ್ಲ. ಬದಲಾಗಿ ಮೈಸೂರು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಜಯಚಾಮರಾಜೇಂದ್ರ ಒಡೆಯರ್ ಅಥವಾ ಮೈಸೂರು ರಾಜ ಮನೆತನದ ಮಹಾರಾಜರ ಹೆಸರು ಇಡಲಿ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಟ್ಟು ಅಂಗವೈಕಲ್ಯವಲ್ಲ; ಸ್ಮೃತಿ ಇರಾನಿ ಹೇಳಿಕೆ ಯಾರನ್ನು ಮೆಚ್ಚಿಸಲು?

“ಭ್ರಷ್ಟಾಚಾರ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿರುದ್ಧ ಸಿಬಿಐ ತನಿಖೆ ವಾಪಸ್ ಪಡೆದಿರುವ ಕ್ರಮ ಅರಾಜಕತೆಗೆ ನಾಂದಿ ಹಾಡಲಿದೆ. ಭವಿಷ್ಯದಲ್ಲಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧವೂ ಪ್ರಕರಣ ವಾಪಸ್ ಪಡೆಯುತ್ತೇವೆ ಎಂದರೆ ಅರಾಜಕತೆ ಉಂಟಾಗಲಿದೆ” ಎಂದು ಹೇಳೀದರು.

“ಇದೇ ಕಾರಣಕ್ಕೆ ನಾನು ಕಾನೂನು ಹೋರಾಟಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದು, ನಮ್ಮ ವಕೀಲರು ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಜನವರಿ 5 ರಂದು ಮತ್ತೆ ವಿಚಾರಣೆ ಇದ್ದು, ನ್ಯಾಯಕ್ಕೆ ಜಯ ಸಿಗಲಿದೆ” ಎಂಬ ವಿಶ್ವಾಸ ವ್ಯಕ್ತಪಡಿಸಿದರು.

“ವಿಜಯಪುರ ನಗರದ ಓರ್ವ ಇಸ್ಲಾಂ ಧರ್ಮಗುರು ವಿರುದ್ಧ ನಾನು ಮಾಡಿರುವ ಆರೋಪಿಗಳ ಕುರಿತು ತನಿಖೆ ನಡೆಯುವುದು ಖಚಿತ. ಆದರೆ ಈ ಕುರಿತು ಬಹಿರಂಗವಾಗಿ ಮಾಹಿತಿ ಹಂಚಿಕೊಳ್ಳಲಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...