ಗದಗ | ಎಸ್ಐಆರ್‌ನ ಪದದಲ್ಲೇ ಪ್ರಭುತ್ವದ ಹುನ್ನಾರ, ಮೋಸ ಅಡಗಿದೆ: ಚಿಂತಕ ಶಿವಸುಂದರ

Date:

‘ಕೇಂದ್ರ ಸರಕಾರ ತಂದಿರುವ ಎಸ್ಐಆರ್‌ನಲ್ಲಿ ಪದದಲ್ಲೇ ಪ್ರಭುತ್ವದ ಹುನ್ನಾರವಿದೆ. ಇದು ‘ಎಸ್ಐಆರ್ ಅಲ್ಲ ಎಫ್ಐಆರ್’ ಮತಪಟ್ಟಿಯಿಂದ ಸುಮಾರು 20 ಕೋಟಿಗೂ ಹೆಚ್ಚು ಜನರ ಹೆಸರು ಕಡಿತ ಮಾಡಲಾಗುತ್ತದೆ ಹಾಗೂ ಅಷ್ಟು ಜನರು ಮತದಾನ ಪಟ್ಟಿಯಿಂದ ಹೊರಗುಳಿಯುತ್ತಾರೆ ಎಂದು ಗದಗ ಲಯನ್ಸ್ ಭವನದಲ್ಲಿ ಏರ್ಪಡಿಸಿದ್ದ, ‘ಎಸ್‌ಐಆರ್: ಪೌರತ್ವದ ಪ್ರಶ್ನೆ, ಪ್ರಭುತ್ವದ ಹುನ್ನಾರಗಳು’ ಕುರಿತು ನಡೆದ ಸಂವಾದ ಗೋಷ್ಠಿಯಲ್ಲಿ ಚಿಂತಕ ಶಿವಸುಂದರ ಹೇಳಿದರು.

ಗದಗ ಮೇ ಸಾಹಿತ್ಯ ಮೇಳ, ಲಡಾಯಿ ಪ್ರಕಾಶನ ಹಾಗೂ ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ದೇಶದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ ಪೂರ್ಣಗೊಳ್ಳುವ ವೇಳೆಗೆ ಈಗಿರುವ 100 ಕೋಟಿ ಮತದಾರರಲ್ಲಿ 20 ಕೋಟಿ ಜನರು ಪಟ್ಟಿಯಿಂದ ಹೊರಗುಳಿಯುತ್ತಾರೆ. ‘ಎಸ್‌ಐಆರ್‌ನಲ್ಲಿರುವ ವಿಶೇಷ ಎಂಬ ಪದದಲ್ಲೇ ಅತಿದೊಡ್ಡ ಹುನ್ನಾರ ಹಾಗೂ ಮೋಸ ಅಡಗಿದೆ. ಇದು ಕೇವಲ ಮತಪಟ್ಟಿ ವಿಶೇಷ ಪರಿಷ್ಕರಣೆಯಾಗದೆ ಈ ದೇಶದ ನಾಗರಿಕರ ನಾಗರಿಕತ್ವದ ಪರಿಷ್ಕರಣೆಯಾಗಿದೆ ಎಂದರು.

ಎಸ್‌ಐಆ‌ರ್ ಮೂಲಕ ಪ್ರಧಾನಿ ಮೋದಿ ಅವರು ದೇಶದ 140 ಕೋಟಿ ಜನರ ಮೇಲೆ ಆರೋಪ ಪಟ್ಟಿ ಹಾಕಿದ್ದಾರೆ. ಈಗ ಇರುವವರೆಲ್ಲರೂ ಈ ದೇಶದ ನಾಗರಿಕರಲ್ಲ. ನಾವು ಕೇಳುವ ದಾಖಲೆಗಳನ್ನು ಒದಗಿಸಿ ನೀವು ಭಾರತೀಯರು ಎಂದು ಸಾಬೀತುಪಡಿಸಿ ಎಂದು ಅಗ್ನಿ ಪರೀಕ್ಷೆ ಇಟ್ಟಿದ್ದಾರೆ. ಇಲ್ಲಿ ದಾಖಲೆಗಳು ಹೊಂದಾಣಿಕೆಯಾದರೆ ಸಮಸ್ಯೆ ಇಲ್ಲ. ಇಲ್ಲವಾದರೆ ದಾಖಲೆಗಳು ಒದಗಿಸಿಲ್ಲ ಎಂಬ ಕಾರಣಕ್ಕೆ ಈ ದೇಶದ ನಾಗರಿಕರಲ್ಲ ಎಂದು ಹೇಳಿ ಈಗಾಗಲೇ ಕೋಟ್ಯಂತರ ಜನರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ. ಇದರಲ್ಲಿ ಮುಸ್ಲಿಮರು, ದಲಿತರು, ಆದಿವಾಸಿಗಳು, ಮಹಿಳೆಯರು ಹೆಚ್ಚು ಇರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್‌ನಿಂದ ಎಸ್‌ಐಆರ್‌ನ ಮೊದಲ ಹಂತ ಆರಂಭಗೊಳ್ಳಲಿದ್ದು, ಪ್ರತಿ ಮನೆಗೆ ಬಿಎಲ್‌ಒಗಳು ಬಂದು ಅರ್ಜಿ ನಮೂನೆ ಕೊಡುವರು. ಅದನ್ನು ಒಂದು ತಿಂಗಳಲ್ಲಿ ಭರ್ತಿ ಮಾಡಿ ಕೊಡಬೇಕು. ನಮ್ಮ ಬಳಿ ಇರುವ ದಾಖಲೆಗಳು ಅವರಿಗೆ ಬೇಕಿಲ್ಲ. ಅವರು ಕೇಳುವ ದಾಖಲೆಗಳನ್ನು ಒದಗಿಸಲು ಸಾಕಷ್ಟು ಜನರಿಗೆ ಆಗುವುದಿಲ್ಲ. ಹಾಗಾಗಿ, ಮುಸ್ಲಿಮರು, ದಲಿತರು, ಆದಿವಾಸಿಗಳು ಮತ್ತು ಮಹಿಳೆಯರು ಈ ದೇಶದ ನಾಗರಿಕರು ಅಲ್ಲ ಎಂದು ಘೋಷಣೆ ಮಾಡುವ ಬಹುದೊಡ್ಡ ಹುನ್ನಾರ ನಡೆದಿದೆ.

ಒಬ್ಬ ಪ್ರಜೆ ಈ ದೇಶದ ನಾಗರಿಕ ಅಲ್ಲ ಎಂದು ಘೋಷಣೆಯಾದರೆ ಬದುಕನ್ನೇ ಕಳೆದುಕೊಳ್ಳುತ್ತಾನೆ. ಮಕ್ಕಳನ್ನು ಶಾಲೆಗೆ ಸೇರಿಸಲು ಸಾಧ್ಯವಿಲ್ಲ. ಸ್ವಂತ ಉದ್ಯೋಗ, ಕಷ್ಟಕಾಲದಲ್ಲಿ ಪೊಲೀಸರಿಗೆ ದೂರು ಕೊಡುವ ಅವಕಾಶವನ್ನೂ ಕಳೆದುಕೊಳ್ಳುತ್ತಾನೆ ಎಂದು ಕಳವಳ ವ್ಯಕ್ತಪಡಿಸಿದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...