ಗೋಕಾಕ್‌ : ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರ ಬಂಧನ

Date:

  • ಸೆ.5ರಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಕೃತ್ಯ
  • ಸೆ.29ರಂದು ಗೋಕಾಕ್ ನಗರ ಪೊಲೀಸ್ ಠಾಣೆಗೆ ನೊಂದ ಮಹಿಳೆ ದೂರು

ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಗಾವಿಯ ಗೋಕಾಕ್‌ನ ಮನೆಯೊಂದರಲ್ಲಿ ನಡೆದಿದ್ದು, ಸೆ.5ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಒಟ್ಟು ಐವರನ್ನು ಬಂಧಿಸಲಾಗಿದ್ದು, ಬಂಧನದ ವೇಳೆ ಓರ್ವ ಆರೋಪಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತಲೆ ಮರೆಸಿಕೊಂಡಿರುವ ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಬಂಧಿತರನ್ನು ರಮೇಶ ಉದ್ದಪ್ಪ ಬಿಗಾಗಿ, ದುರ್ಗಪ್ಪ ಸೋಮಲಿಂಗಪ್ಪ ವಡ್ಡರ, ಯಲ್ಲಪ್ಪ ಸಿದ್ಧಪ್ಪ ಗೀಸನಿಂಗವ್ವಗೋಳ, ಕೃಷ್ಣಾಪ್ರಕಾರ ಪೂಜೇರಿ, ರಾಮಸಿದ್ದ ಗುರಶಿದ್ದಪ್ಪ ತಪ್ಪಿ ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಬಸವರಾಜ ವಸಂತ ಖಿಲಾರಿ ಪರಾರಿಯಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
sp bheemashankar guled

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್, “ಸೆ.5ರ ಶಿಕ್ಷಕರ ದಿನಾಚರಣೆಯಂದು ಘಟನೆ ನಡೆದಿದೆ. ಇತ್ತೀಚಿನ ಡಕಾಯಿತಿ ಪ್ರಕರಣದಲ್ಲಿ ಬಂಧಿಸಲಾಗಿದ್ದ ಬೆಣಚಿನಮರಡಿ ಖಿಲಾರಿ ಗ್ಯಾಂಗ್ ಮತ್ತು ಗೋಕಾಕ್ ಎಸ್ಪಿ ಸರ್ಕಾರ್ ಎಂಬ ಗ್ಯಾಂಗ್‌ನ ಆರು ಸದಸ್ಯರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಸೆ. 29ರಂದು ನೊಂದ ಮಹಿಳೆ ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ” ಎಂದರು.

ಪ್ರಕರಣದ ಪ್ರಮುಖ ಆರೋಪಿ ರಮೇಶ ಉದ್ದಪ್ಪ ಖಿಲಾರಿ ಬಂಧನ ವೇಳೆ ತಪ್ಪಿಸಿಕೊಂಡು ಹೋಗುತ್ತಿದ್ದಾಗ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದಾನೆ. ಈತನನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸ್ ಕಣ್ಗಾವಲಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಸಿದ್ದಾರೆ.

gang rape belgam

ಪ್ರಕರಣದ ಹಿನ್ನೆಲೆ ಏನು?
ಕಳೆದ ಸೆ. 5ರಂದು ಆರೋಪಿ ಬಸವರಾಜ ಬಿಲಾರಿ, ಸಂತ್ರಸ್ತ ಮಹಿಳೆ ಮತ್ತು ಮತ್ತೋರ್ವ ವ್ಯಕ್ತಿಯ ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಪುಸಲಾಯಿಸಿ ಚಹಾ ಕುಡಿಯಲು ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಆ ಬಳಿಕ ತನ್ನ ಡಕಾಯಿತಿ ಗ್ಯಾಂಗ್ ಸದಸ್ಯರನ್ನೂ ಮನೆಗೆ ಕರೆಸಿಕೊಂಡಿದ್ದಾನೆ. ಆರೋಪಿಗಳು ಒಬ್ಬೊಬ್ಬರಾಗಿ ಮಹಿಳೆ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ.

ಅತ್ಯಾಚಾರಕ್ಕೊಳಗಾದ ಮಹಿಳೆ ಮತ್ತು ಜೊತೆಗಿದ್ದ ಪುರುಷನ ಬಳಿಯಿದ್ದ ಹಣ, ಚಿನ್ನಾಭರಣ, ಎಟಿಎಂ ಪಾಸ್‌ವರ್ಡ್ ಪಡೆದು ಹಣವನ್ನೂ ದೋಚಿದ್ದಾರೆ. ಆರೋಪಿಗಳು ಆ ಮಹಿಳೆ ಮತ್ತು ಪುರುಷನ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ನಿಮ್ಮ ಮಾನ ಹರಾಜು ಹಾಕುವುದಲ್ಲದೆ ಕೊಲ್ಲುವುದಾಗಿಯೂ ಜೀವ ಬೆದರಿಕೆ ಹಾಕಿದ್ದಾರೆ.

ಪ್ರಕರಣದ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದರು.

ಪ್ರಕರಣವನ್ನು ಹೆಚ್ಚುವರಿ ಎಸ್ಪಿ ವೇಣುಗೋಪಾಲ ಹಾಗೂ ಡಿಎಸ್ಪಿ ಡಿ.ಎಸ್.ಮುಲ್ಲಾ ಮಾರ್ಗದರ್ಶನದಲ್ಲಿ ಸಿಪಿಐ ಗೋಪಾಲ ರಾಠೋಡ್ ನೇತೃತ್ವದ ತಂಡ ಭೇದಿಸಿದ್ದು, ಅಭಿನಂದನೆ ಸಲ್ಲಿಸುತ್ತೇವೆ. ಸೂಕ್ತ ಬಹುಮಾನ ಕೂಡ ಘೋಷಿಸುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...