ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್ ಜಾಮೀನು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Date:

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್‌ ಮೋಹನ್‌ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ಆಗಸ್ಟ್ 20ರಂದು ನಿರಾಕರಿಸಿದೆ.

ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿದ್ದಾರೆ ಎಂಬುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಈ ಸಂಬಂಧ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಎತ್ತಿಹಿಡಿದಿದೆ.
ಪ್ರತಿವಾದಿ ಮೋಹನ್‌ ನಾಯಕ್‌ ವಿಚಾರಣೆ ಮುಂದುವರೆಯಲು ವಿಚಾರಣಾ ನ್ಯಾಯಾಲಯದೊಂದಿಗೆ ಸಹಕರಿಸುತ್ತಿದ್ದಾರೆ. ಅವರು ಪ್ರಕರಣ ಮುಂದೂಡುವಂತೆ ಎಲ್ಲೂ ಕೋರಿಲ್ಲ. ಅಲ್ಲದೆ, ಅವರು 18-7-2018 ರಿಂದ ಬಂಧನದಲ್ಲಿದ್ದು ಕರ್ನಾಟಕ ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸಲು ತಾನು ಇಚ್ಛಿಸುವುದಿಲ್ಲ ಎಂದು ತನ್ನ ಅದೇಶದಲ್ಲಿ ಹೇಳಿದ ಸುಪ್ರೀಂ ಕೋರ್ಟ್‌ ವಿಶೇಷ ಅನುಮತಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ವಿಚಾರಣೆಗೆ ಸಾಕಷ್ಟು ಸಮಯ ಹಿಡಿಯಬಹುದು ಎಂಬ ಕಾರಣಕ್ಜೆ ಕರ್ನಾಟಕ ಹೈಕೋರ್ಟ್ 2023ರ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಗೌರಿ ಅವರ ಸಹೋದರಿ ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಮಂಗಳವಾರ ನೀಡಿರುವ ಆದೇಶದಲ್ಲಿ ರಾಜ್ಯ ಸರ್ಕಾರದ ಮೇಲ್ಮನವಿಯನ್ನೂ ವಜಾಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 100 ಸಾಕ್ಷಿಗಳ ವಿಚಾರಣೆ ಬಾಕಿ ಇದೆ ಎಂದು ಕರ್ನಾಟಕ ಸರ್ಕಾರದ ಪರ ವಕೀಲರು ತಿಳಿಸಿದ್ದರು. ಮೇಲ್ಮನವಿಗಳನ್ನು ಪರಿಗಣಿಸಲು ನಿರಾಕರಿಸಿದ ಪೀಠ ಆರೋಪಿಯು ಯಾವುದೇ ಜಾಮೀನು ಷರತ್ತು ಉಲ್ಲಂಘಿಸಿದ್ದರೆ ಅಥವಾ ವಿಚಾರಣೆ ವಿಳಂಬಗೊಳಿಸಿದ್ದರೆ ಮಾತ್ರ ಜಾಮೀನು ರದ್ದುಗೊಳಿಸುವಂತೆ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಕಕ್ಷಿದಾರರಿಗೆ ಸ್ವಾತಂತ್ರ್ಯವಿದೆ ಎಂದಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ಸಂವಿಧಾನ ರಕ್ಷಿಸಬೇಕೇ ಅಥವಾ ತಮ್ಮ ಒಡೆಯರ ಅಡಿಯಾಳಾಗಬೇಕೇ?

2017ರ ಸೆಪ್ಟೆಂಬರ್‌ 5ರಂದು ಗೌರಿ ಲಂಕೇಶ್‌ ಅವರನ್ನು ಗುಂಡು ಹಾರಿಸಿ ಕೊಲ್ಲಲಾಗಿತ್ತು. ಡಿಸೆಂಬರ್ 7, 2023 ರಂದು, ಕರ್ನಾಟಕ ಹೈಕೋರ್ಟ್ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಮೋಹನ್ ನಾಯಕ್‌ಗೆ ಜಾಮೀನು ನೀಡಿತ್ತು. ಪ್ರಕರಣದಲ್ಲಿ ಜಾಮೀನು ದೊರೆತ ಮೊದಲ ಆರೋಪಿ ಮೋಹನ್‌ ಆಗಿದ್ದರು.

ಈ ವರ್ಷ ಜುಲೈನಲ್ಲಿ ಪ್ರಕರಣದಲ್ಲಿ ಆರೋಪಿಗಳಾದ ಅಮಿತ್‌ ದಿಗ್ವೇಕರ್‌, ಕೆ ಟಿ ನವೀನ್‌ ಕುಮಾರ್ ಹಾಗೂ ಎಚ್ ಎಲ್‌ ಸುರೇಶ್‌ ಅವರಿಗೆ ಜಾಮೀನು ದೊರೆತಿತ್ತು.

ಕವಿತಾ ಲಂಕೇಶ್ ಪರ ವಕೀಲರಾದ ರೋಹನ್ ಶರ್ಮಾ, ಕರಿಷ್ಮಾ ಮಾರಿಯಾ, ಪೂಜಾ ಬಿ ಮೆಹ್ತಾ, ಯಶ್ ಎಸ್ ವಿಜಯ್ ಮತ್ತು ರಶ್ಮಿ ಸಿಂಗ್ ಅವರೊಂದಿಗೆ ಹಿರಿಯ ವಕೀಲರಾದ ಹುಝೆಫಾ ಅಹ್ಮದಿ ಮತ್ತು ಅಪರ್ಣಾ ಭಟ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.

ಕರ್ನಾಟಕ ಸರ್ಕಾರವನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆವಿಷ್ಕರ್ ಸಿಂಘ್ವಿ ಮತ್ತು ವಕೀಲ ವಿಎನ್ ರಘುಪತಿ, ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಪ್ರತಿನಿಧಿಸಿದ್ದರು.

ಮೋಹನ್ ನಾಯಕ್ ಪರ ವಕೀಲರಾದ ಗೌತಮ್ ಎಸ್ ಭಾರದ್ವಾಜ್, ಅಶ್ವಿನ್ ಕುಮಾರ್ ಡಿಎಸ್, ಸುರ್ಭಿ ಮೆಹ್ತಾ ಮತ್ತು ಇಶಾನ್ ರಾಯ್ ಚೌಧರಿ ವಕಾಲತ್ತು ವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...