ಜನತಾ ದರ್ಶನಕ್ಕೆ ಉತ್ತಮ ಸ್ಪಂದನೆ; 6,684 ಅಹವಾಲು, ಮನವಿ ಸ್ವೀಕೃತ

Date:

  • ರಾಜ್ಯಾದ್ಯಂತ ಏಕ ಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲೂ ನಡೆದ ಜನತಾ ದರ್ಶನ
  • ಸ್ವೀಕರಿಸಿದ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು
  • ಮಾಜಿ ಸಿಎಂ ಬೊಮ್ಮಾಯಿ ಅವರ ಜಿಲ್ಲೆಯಲ್ಲಿ ಹೆಚ್ಚು ಅಹವಾಲು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ರಾಜ್ಯಾದ್ಯಂತ 6,684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡಿವೆ.

ಅನಿವಾರ್ಯ ಕಾರಣಗಳಿಂದ ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಜನತಾ ದರ್ಶನ ನಡೆಯಲಿಲ್ಲ. ಬೆಳಗಾವಿಯಲ್ಲಿ ಸೆ.26 ರಂದು ನಡೆಯಲಿದೆ. ಸೋಮವಾರ ರಾಜ್ಯಾದ್ಯಂತ ಸ್ವೀಕೃತಗೊಂಡಿರುವ 6,684 ಅಹವಾಲು ಮತ್ತು ಮನವಿಗಳ ಪೈಕಿ 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6,663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನಿಯಾಗಿವೆ.

ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಆಗಿವೆ. ಸಂಜೆ 6 ಗಂಟೆವರೆಗೂ ಸಿಕ್ಕಿರುವ ಅಂಕಿ ಅಂಶಗಳ ಪ್ರಕಾರ 2,100 ಕ್ಕೂ ಹೆಚ್ಚು ಅಹವಾಲುಗಳು ಕಂದಾಯ ಇಲಾಖೆಗೆ ಸೇರಿದ್ದಾಗಿವೆ. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ್ದಾಗಿದ್ದ ಸಾವಿರಕ್ಕೂ ಅಧಿಕ ಅಹವಾಲುಗಳು ಈ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಡಳಿತಕ್ಕೆ ಸಂಬಂಧಿಸಿದ್ದಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎದುರಿಗೆ ಅತಿ ಹೆಚ್ಚು ಸಮಸ್ಯೆಗಳು ಮತ್ತು ಅಹವಾಲುಗಳು ಸಲ್ಲಿಕೆಯಾಗಿವೆ. ಉಳಿದಂತೆ ಜಿಲ್ಲಾಧಿಕಾರಿಗಳ ಮುಂದೆ ಸಲ್ಲಿಕೆಯಾದವುಗಳಾಗಿವೆ. ಜಿಲ್ಲಾ ರಕ್ಷಣಾಧಿಗಳ ಎದುರಿಗೆ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿದರೆ ಹೆಚ್ಚಿನ‌ ಕಡೆ ಅತಿ ಕಡಿಮೆ ಅಹವಾಲುಗಳು ಸಲ್ಲಿಕೆ ಆಗಿರುವುದು ಆಶ್ಚರ್ಯದ ಜತೆಗೆ ವಿಶ್ಲೇಷಣೆ ಮಾಡಬೇಕಾದ ಸಂಗತಿಯಾಗಿದೆ.

ಜನತಾ ದರ್ಶನ

ಹಾವೇರಿ ಜಿಲ್ಲೆಯಲ್ಲಿ ದಾಖಲೆ ಅಹವಾಲು

ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಹವಾಲುಗಳು ದಾಖಲಾಗಿವೆ. 774 ಅಹವಾಲುಗಳ ಮೂಲಕ ಹಾಸನ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 432 ಅಹವಾಲುಗಳ ಮೂಲಕ ಹಾಸನ ಎರಡನೇ ಸ್ಥಾನದಲ್ಲಿ, 423 ಅಹವಾಲುಗಳ ಮೂಲಕ ಕೋಲಾರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.

ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.

ಮೌಖಿಕವಾಗಿ ದೂರು ಕೊಡಲು ಬಂದವರನ್ನು ಕುಳ್ಳಿರಿಸಿ ಅಧಿಕಾರಿ ಮತ್ತು ಸಿಬ್ಬಂದಿಯೇ ಅಹವಾಲುಗಳನ್ನು ಬರೆದು, ಬಳಿಕ ಅದನ್ನು ಓದಿಹೇಳಿ ಅರ್ಜಿದಾರರಿಂದ ಸಹಿ ಪಡೆದು ದಾಖಲಿಸಿಕೊಳ್ಳುವ ಪ್ರಯತ್ನಗಳೂ ನಡೆದಿವೆ.

ಮೈಸೂರು ಜಿಲ್ಲೆಯ ಜನತಾ ದರ್ಶನದಲ್ಲಿನ ಕುಂದುಕೊರತೆ ಮನವಿಗಳನ್ನು IPGRS ನಲ್ಲಿ upload ಮಾಡುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಎಲ್ಲಾ ಅರ್ಜಿಗಳನ್ನು Manually ಸ್ವೀಕರಿಸಲಾಗಿದ್ದು ಬಳಿಕ upload ಮಾಡಲಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರದ ಸಂಬಂಧ ಸಾವಿರಾರು ಅರ್ಜಿಗಳು ಬಂದಿವೆ. ಸ್ವೀಕರಿಸುವ ವೇಳೆ ಕೆಲವು ಅನಾನುಕೂಲಗಳು ಸಂಭವಿಸಿದ್ದರಿಂದ ಅವುಗಳನ್ನೂ upload ಮಾಡಲು ಸಾಧ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...