ಖ್ಯಾತ ಪತ್ರಕರ್ತ ಟಿಜೆಎಸ್ ಜಾರ್ಜ್‌ ನಿಧನಕ್ಕೆ ಸರ್ಕಾರ ಸಂತಾಪ, ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಗೆ ಆದೇಶ

Date:

ಶುಕ್ರವಾರ (ಅ.3) ಬೆಂಗಳೂರಿನಲ್ಲಿ ನಿಧನರಾದ ನಾಡಿನ ಧೀಮಂತ ಪತ್ರಕರ್ತ, ದೇಶ ವಿದೇಶಗಳ ಹಲವಾರು ಇಂಗ್ಲಿಷ್‌ ಪತ್ರಿಕೆಗಳಿಗೆ ಸಂಪಾದಕರಾಗಿದ್ದ ಟಿಜೆಎಸ್ ಜಾರ್ಜ್‌ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ.

ಹಿರಿಯ ಪತ್ರಕರ್ತರು ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಟಿ.ಜೆ.ಎಸ್ ಜಾರ್ಜ್ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್‌ ಆರ್‌ ಆದೇಶ ಹೊರಡಿಸಿದ್ದಾರೆ.

ಭಾನುವಾರ ಹೆಬ್ಬಾಳದಲ್ಲಿ ಅಂತ್ಯ ಸಂಸ್ಕಾರ ನಡೆಲಿದೆ ಎಂದು ಕುಟುಂಬ ಮೂಲಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಥಾಯಿಲ್‌ ಜೇಕಬ್ ಸೋನಿ ಜಾರ್ಜ್‌ ಅವರ ಪೂರ್ಣ ಹೆಸರು. ಜಾರ್ಜ್‌ ಅವರಿಗೆ 97 ವಯಸ್ಸಾಗಿತ್ತು. ಭಾರತೀಯ ಪತ್ರಿಕೋದ್ಯಮ ಮತ್ತು ಸಾಹಿತ್ಯ ಲೋಕದ ದೈತ್ಯ ಪ್ರತಿಭೆ ಆಗಿದ್ದರು. ಏಷ್ಯಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಜರ್ನಲಿಸಮ್‌ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಕೇರಳದಲ್ಲಿ ಜನಿಸಿದ ಜಾರ್ಜ್‌ ಅವರು ತಮ್ಮ ಜೀವಿತಾವಧಿಯ ಜೀವನವನ್ನು ಬೆಂಗಳೂರು ಮತ್ತು ಕೊಯಮತ್ತೂರಿನಲ್ಲಿ ಕಳೆದರು. ಅವರಿಗೆ ಶಿಭಾ ಥಾಯಿಲ್ ಮತ್ತು ಜೀತ್‌ ಥಾಯಿಲ್‌ ಇಬ್ಬರು ಮಕ್ಕಳಿದ್ದಾರೆ.

ಫ್ರೀ ಪ್ರೆಸ್ ಜರ್ನಲ್, ಇಂಟರ್‌ನ್ಯಾಷನಲ್‌ ಪ್ರೆಸ್‌ ಇನ್ಸ್ಟಿಟ್ಯೂಟ್‌, ದಿ ಸರ್ಚ್‌ ಲೈಟ್‌, ಹಾಂಕಾಂಗ್‌ ಏಷ್ಯಾ ವೀಕ್‌ ಪತ್ರಿಕೆಗಳನ್ನು ಮುನ್ನಡೆಸಿದ್ದಾರೆ. ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಸಂಪಾದಕೀಯ ಸಲಹೆಗಾರರಾಗಿದ್ದರು. ಸಾಮಾಜಿಕ ಅನ್ಯಾಯ, ಭ್ರಷ್ಟಾಚಾರ, ಧಾರ್ಮಿಕ ಅಸಹಿಷ್ಣುತೆ ಹಾಗೂ ಜನತಾಂತ್ರಿಕ ಮೌಲ್ಯಗಳ ಪತನದ ವಿರುದ್ಧ ಜಾರ್ಜ್‌ ಬಹುದೊಡ್ಡ ಧ್ವನಿಯಾಗಿದ್ದವರು.

‘ಫಾಯಿಂಟ್‌ ಆಫ್‌ ವ್ಯೂವ್’ ಅವರ ದೀರ್ಘ ಕಾಲ ಪ್ರಕಟವಾದ ಅವರ ಅಂಕಣ. ಇದು 25 ವರ್ಷಗಳ ಕಾಲ ಪ್ರಕಟವಾಗಿದ್ದು, 2022ರಲ್ಲಿ ಕೊನೆಯಾಯಿತು. ಈ ಅಂಕಣ ಕನ್ನಡಪ್ರಭದಲ್ಲಿ ʼನೇರಮಾತುʼ ಹೆಸರಿನಲ್ಲಿ ಪ್ರಕಟವಾಗುತ್ತಿತ್ತು.

ನಿರ್ಭೀತ ಪತ್ರಿಕೋದ್ಯಮಕ್ಕೆ ಜೀವನವಿಡಿ ಬದ್ಧರಾಗಿದ್ದರು ಜಾರ್ಜ್.‌ 1965 ರಲ್ಲಿ ಬಿಹಾರ ಸರ್ಕಾರ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು. ಹೀಗಾಗಿ ಸ್ವತಂತ್ರ ಭಾರತದಲ್ಲಿ ಬಂಧನಕ್ಕೊಳಗಾದ ಪತ್ರಿಕಾ ಸಂಪಾದಕರು ಜಾರ್ಜ್‌ ಆಗಿದ್ದಾರೆ. ಅಂದಿನ ಕೇಂದ್ರ ಸರ್ಕಾರದ ರಕ್ಷಣಾ ಸಚಿವ ವಿ ಕೆ ಕೃಷ್ಣ ಮೆನನ್‌ ಅವರು ಜಾರ್ಜ್‌ ಪರವಾಗಿ ನ್ಯಾಯಾಲಯದಲ್ಲಿ ಹಾಜರಾಗಿ ಸಾಕ್ಷಿ ನುಡಿದಿದ್ದರು.

ವಿ ಕೆ ಕೃಷ್ಣ ಮೆನನ್, ಚರಿತ್ರಾರ್ಹ ಚಿತ್ರನಟಿ ನರ್ಗಿಸ್‌, ಮಹಾನ್ ಶಾಸ್ತ್ರೀಯ ಗಾಯಕಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನ ಚರಿತ್ರೆ ರಚಿಸಿದ್ದಾರೆ. ಪತ್ರಿಕೋದ್ಯಮಿಯಾಗಿ ಅವರ ಅನುಭವಗಳನ್ನು ದಾಖಲಿಸಿದ ಪುಸ್ತಕ ‘ಘೋಷಯಾತ್ರಾ’.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...