ದುಬಾರಿ ಸಿನಿಮಾ ಟಿಕೆಟ್ ದರಕ್ಕೆ ಕೊನೆಗೂ ಸರ್ಕಾರ ಕಡಿವಾಣ, ಏಕರೂಪ ದರ ನಿಗದಿ ಮಾಡಿ ಆದೇಶ

Date:

ದುಬಾರಿ ಸಿನಿಮಾ ಟಿಕೆಟ್ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ತರುವುದಾಗಿ ಹೇಳಿತ್ತು. ಸರ್ಕಾರದ ಭರವಸೆ ಇಂದು ಈಡೇರಿದೆ.

ಸೆಪ್ಟೆಂಬರ್ 12ರಿಂದ ಈ ನಿಯಮ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ. ಟಿಕೆಟ್ ದರ 200 ಮೀರದಂತೆ ದರ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇಂದಿನಿಂದಲೇ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ ಸಾಧ್ಯತೆ ಇದೆ.

ತೆರಿಗೆ ಸೇರಿದಂತೆ ಗರಿಷ್ಠ ದರ 236 ಆಗುತ್ತದೆ. ಈ ನಿಯಮ ಜಾರಿಯಿಂದ ಪ್ರೇಕ್ಷಕ ನಿಟ್ಟುಸಿರು ಬಿಟ್ಟಿದ್ದಾರೆ. ಪರಭಾಷ ಚಿತ್ರಗಳ ಲೂಟಿಯಿಂದ ಪ್ರೇಕ್ಷಕರ ಜೇಬಿಗೆ ಹೊರೆಯಾಗದಂತೆ ಸರ್ಕಾರ ಕೊನೆಗೂ ಕನ್ನಡ ಸಿನಿ ಪ್ರೇಕ್ಷಕರಿಗೆ ಗುಡ್​ನ್ಯೂಸ್ ಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಕೆಲವು ಷರತ್ತುಗಳನ್ನು ಕೂಡ ಸರ್ಕಾರ ಹೇರಿದೆ. ಅನೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ಗೋಲ್ಡ್ ಕ್ಲಾಸ್ ವ್ಯವಸ್ಥೆ ಇರುತ್ತವೆ. ಇವುಗಳಿಗೆ 200 ರೂಪಾಯಿ ಟಿಕೆಟ್ ದರದ ಮಿತಿ ಇಲ್ಲ. ಆ ಆಸನಗಳಿಗೆ ಮಲ್ಟಿಪ್ಲೆಕ್ಸ್​ಗಳು ತಮ್ಮಿಷ್ಟದ ದರ ನಿಗದಿ ಮಾಡಬಹುದು. ಬಹುತೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ರಿಕ್ಲೈನ್ ಸೀಟ್​ಗಳು ಇರುತ್ತವೆ. ಅವುಗಳಿಗೂ 200 ರೂಪಾಯಿ ಟಿಕೆಟ್ ದರ ಅನ್ವಯ ಆಗುತ್ತದೆ ಎನ್ನಲಾಗಿದೆ.

ಕರ್ನಾಟಕ ಸಿನಿಮಾ (ನಿಯಂತ್ರಣ) ಕಾಯ್ದೆ, 1964 (ಕರ್ನಾಟಕ ಕಾಯ್ದೆ ಸಂಖ್ಯೆ 23, 1964) ರ ಸೆಕ್ಷನ್ 19 ರ ಮೂಲಕ ನೀಡಲಾಗಿರುವ ಅಧಿಕಾರದಡಿಯಲ್ಲಿ ಕರ್ನಾಟಕ ಸರ್ಕಾರವು ಕರ್ನಾಟಕ ಸಿನಿಮಾ (ನಿಯಂತ್ರಣ) ನಿಯಮಗಳು, 2014 ಅನ್ನು ಮತ್ತಷ್ಟು ತಿದ್ದುಪಡಿ ಮಾಡಲು ಕರಡು ನಿಯಮಗಳನ್ನು ರೂಪಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...