ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

Date:

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರದಿಂದ ಭಾನುವಾರ ಆದೇಶ ಹೊರಡಿಸಲಾಗಿದೆ.

ನಿನ್ನೆಯೇ ಪ್ರಕರಣದ ತನಿಖೆ ಸಿಐಡಿ ಗೆ ಹಸ್ತಾಂತರಿಸಿರುವ ಸರ್ಕಾರ, ಅಧಿಕೃತವಾಗಿ ಇಂದು ಬೆಂಗಳೂರಿನ ಸಿಐಡಿ ಕಚೇರಿಗೆ ತೆರಳಿ ಕೇಸ್‌ನ ಕಡತಗಳನ್ನು ತನಿಖಾಧಿಕಾರಿ ಹಾಗೂ ಎಸಿಪಿ ಗಿರೀಶ್ ಹಸ್ತಾಂತರಿಸಲಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಗದಗದಲ್ಲಿ ಮಾತನಾಡಿದ್ದು, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ‌ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ‌ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಬೆಳಗಾವಿಗೆ ಆಗಮಿಸಿದ್ದು, ಡಿಎಸ್ಪಿ ಮಟ್ಟದ ಅಧಿಕಾರಿಗಳ ತಂಡದಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ನಾಳೆ ಬೆಳಗಾವಿಗೆ NHRC ಡಿಐಜಿ ಸುನೀಲ್ ಕುಮಾರ್ ಮೀನಾ ಆಗಮಿಸಲಿದ್ದು, ಈ ಹಿನ್ನೆಲೆ ಜಿಲ್ಲೆಯ ಸರ್ಕ್ಯೂಟ್ ಹೌಸ್​ನಲ್ಲೇ ಪೊಲೀಸರಿಂದ ಮಾಹಿತಿ ಪಡೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಅತ್ಯಾಚಾರ ಆರೋಪಿ ಇನ್ನೂ ಏಕೆ ಶಾಸಕರಾಗಿದ್ದಾರೆ?: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ಆಕ್ರೋಶ

ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಕರೆಸಿಕೊಂಡು ಘಟನೆ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಬಳಿಕ ಪೊಲೀಸರು ಏನೆಲ್ಲಾ ಮಾಡಿದ್ದಾರೆ, ಬಳಿಕ ಯಾವೆಲ್ಲ ಕ್ರಮ ಕೈಕೊಂಡಿದ್ದಾರೆ ಎಂದು ಮಾಹಿತಿ ಪಡೆದುಕೊಂಡಿದ್ದಾರೆ.

ಪ್ರಕರಣ ಕುರಿತಾಗಿ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ. ಉಳಿದ ಇಬ್ಬರಿಗೆ ಹುಡುಕಾಟ ನಡೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಹೋಗಲು ತಡ ಮಾಡಿದ್ದ ಕಾಕತಿ ಸಿಪಿಐ ವಿಜಯ್‌ ಸಿನ್ನೂರ್‌ ಅವರನ್ನ ಅಮಾನತು ಮಾಡಲಾಗಿದೆ.

ಸಂತ್ರಸ್ತೆಗೆ ನೆರವುಗಳ ಮೇಲೆ ನೆರವು ಘೋಷಣೆ ಮಾಡಲಾಗಿದೆ. ಮೊನ್ನೆಯಷ್ಟೇ ರಾಜ್ಯ ಸರ್ಕಾರ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ನಿನ್ನೆ ಜಮೀನು ಮಂಜೂರು ಮಾಡಲಾಗಿದೆ. ಸಚಿವ ಬಿ.ನಾಗೇಂದ್ರ ನಿರ್ದೇಶನ ಮೇಲೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ 2.3 ಎಕರೆ ಜಮೀನು ಕೊಡಲಾಗಿದೆ.

ಇದೇ ಘಟನೆ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಅತ್ತ ಸತ್ಯಶೋಧನಾ ಸಮಿತಿ ಸ್ಥಳದಲ್ಲಿ ಸತ್ಯ ಶೋಧನ ನಡೆಸಿದ್ದರೆ, ಇತ್ತ ಬಿಜೆಪಿ ಕಾರ್ಯಕರ್ತರು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...