ಸಾರಿಗೆ ನೌಕರರ ವಿರುದ್ಧ ಸರ್ಕಾರ ಎಸ್ಮಾ ಜಾರಿ, ಆರು ತಿಂಗಳವರೆಗೂ ಪ್ರತಿಭಟಿಸುವಂತಿಲ್ಲ

Date:

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಎಸ್ಮಾ ಜಾರಿ ಮಾಡಿದೆ.

ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕೆಎಸ್​ಆರ್​ಟಿಸಿ, ಬಿಎಂಆರ್​ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದರು. ಆಗಸ್ಟ್ 5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಆದರೆ ಇದೀಗ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಕಾರ್ಮಿಕ ಇಲಾಖೆ ಎಸ್ಮಾ ಜಾರಿ ಮಾಡಿದೆ. ಇದು ಮುಂದಿನ ಆರು ತಿಂಗಳು ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಯಾವುದೇ ರೀತಿಯ ಮುಷ್ಕರವನ್ನು ನಿಷೇಧಿಸಲಾಗಿದೆ.

ಏನಿದು ಎಸ್ಮಾ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ನೌಕರರು ಸಾಮೂಹಿಕ ಪ್ರತಿಭಟನೆ ನಡೆಸಿ ಪರಿಸ್ಥಿತಿ ನಿಯಂತ್ರಣ ತಪ್ಪುತ್ತದೆ ಎನ್ನುವುದು ಸರ್ಕಾರದ ಗಮನಕ್ಕೆ ಬಂದರೆ ಎಸ್ಮಾ ಜಾರಿ ಮಾಡಲು ಮುಂದಾಗುತ್ತದೆ. ಮೂಲ ಸೌಕರ್ಯಗಳಾದ ಆಹಾರ, ಭದ್ರತೆ, ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆಗೆ ಮುಖಭಂಗ ಬರುವ ಹಂತಕ್ಕೆ ಪ್ರತಿಭಟನೆಗಳು ಬಂದಾಗ ಸರ್ಕಾರ ಎಸ್ಮಾ ಜಾರಿ ಮಾಡುವ ಅಧಿಕಾರವಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತುಳಿದಷ್ಟು ಪುಟಿದೇಳುವ ರಾಹುಲ್ ಎಂಬ ಜನನಾಯಕ

ಎಸ್ಮಾ ಎಂದರೆ ಕಡ್ಡಾಯ ಕೆಲಸ. ಸಂವಿಧಾನದಲ್ಲಿ ತಿಳಿಸಿರುವಂತೆ, 7ರಲ್ಲಿನ 2ನೇ ಪಟ್ಟಿಯಲ್ಲಿರುವ ‘ಸಾರ್ವಜನಿಕ ಸುವ್ಯವಸ್ಥೆ’ ಮತ್ತು ‘ಪೊಲೀಸ್’ ಸಂಬಂಧಿಸಿದ ಎಲ್ಲಾ ಸೇವೆಗಳ ಕುರಿತು ರಾಜ್ಯ ಶಾಸಕಾಂಗವು ಕಾನೂನು ರೂಪಿಸುವ ಅಧಿಕಾರ ಹೊಂದಿರುತ್ತದೆ. ಎಸ್ಮಾ ಕಾಯ್ದೆ ಉಲ್ಲಂಘನೆ ಮಾಡಿದರೆ ವಾರಂಟ್ ಇಲ್ಲದೇ ಬಂಧನ ಮಾಡಬಹುದು. ಅಲ್ಲದೆ ಆರು ತಿಂಗಳು ಜೈಲು ವಾಸ ಶಿಕ್ಷೆಯನ್ನು ನೀಡುವ ಸಾಧ್ಯತೆಯೂ ಇರುತ್ತದೆ ಎಂಬ ಉಲ್ಲೇಖವಿದೆ.

ಎಸ್ಮಾ ಜಾರಿಯಲ್ಲಿದ್ದ ಮೇಲೆ ಅದನ್ನು ಧಿಕ್ಕರಿಸಿ ಉದ್ಯೋಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಆತನ ವೇತನ, ಭತ್ಯೆ, ಬಡ್ತಿ ಮತ್ತು ಇತರ ಸವಲತ್ತುಗಳ ಮೇಲೆ ಪರಿಣಾಮ ಉಂಟಾಗುತ್ತದೆ. ಈ ಕಾರಣಕ್ಕೆ ರಾಜ್ಯ ಸರ್ಕಾರಗಳು ಉದ್ಯೋಗಿಗಳು ಹಠ ಮುಂದುವರಿಸಿದರೆ ಕೊನೆಯ ಅಸ್ತ್ರವಾಗಿ ಎಸ್ಮಾ ಜಾರಿಗೊಳಿಸುತ್ತವೆ.

***

ಸೌಜನ್ಯ ಪರ ನಿಂತಿದ್ದಕ್ಕಾಗಿ ಈದಿನ ಯೂಟ್ಯೂಬ್ ಚಾನೆಲ್ ಬ್ಲಾಕ್ ಮಾಡಲಾಗಿದೆ ಪರ್ಯಾಯವಾಗಿ ಈದಿನ ಟಿವಿ ಚಾನೆಲ್ ಕಾರ್ಯನಿರ್ವಹಿಸುತ್ತಿದೆ. Subscribe ಮಾಡಿ
👇
https://www.youtube.com/@EedinaTv

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...