ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ

Date:

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಬಗ್ಗೆ ಮಾತನಾಡಿ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾನೂನಿನ ಮುಂದೆ ಎಲ್ಲರೂ ಸಮಾನರು

ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದರು.

ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇವೆ

ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರ ಕರ್ನಾಟಕ ಜನತೆಯ ಆಶೋತ್ತರಗಳು ಈ ಬಾರಿಯಾದರೂ ಈಡೇರಲಿ

ಪ್ರತಿಭಟನಾಕಾರರು ಕಲ್ಲು ಹೊಡೆದಿರುವ ಫೋಟೋಗಳಿವೆ

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸ್ ಕಲ್ಲು ಹೊಡೆದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರು ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಎಂದು ಪ್ರಶ್ನಿಸಿದರು. ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ ಎಂದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು

ಮೀಸಲಾತಿ ಮುಂದೇನು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ, 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು 2ಬಿ ಯಲ್ಲಿರುವ ಶೇ.4 ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಹೇಳಿದ್ದಾರೆ.

ಹೋರಾಟಕ್ಕೆ ಬಿಜೆಪಿ ಬೆಂಬಲ

ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ.4 ರ ಮೀಸಲಾತಿಯನ್ನು ರದ್ದುಮಾಡಿ 3ಎ ಒಕ್ಕಲಿಗರಿಗೆ ಶೇ. 2 ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ ಶೇ. 2 ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದನ್ನು ಸಿಎಂ ಉಲ್ಲೇಖಿಸಿದರು.

ಸಂಧಾನಕ್ಕೆ ಸಚಿವರನ್ನು ಕಳುಹಿಸಲಾಗಿತ್ತು

ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ಹೋರಾಟವನ್ನು ಶಾಂತಿಯುತವಾಗಿ , ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ನ್ಯಾಯಾಲಯ ಸೂಚನೆ ನೀಡಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂವರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ವಿಜಯಪುರ | ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

ಮೇ ಸಾಹಿತ್ಯ ಮೇಳ ವಿಜಯಪುರ ಬಳಗ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ...