‘ಅನ್ನಭಾಗ್ಯ’ ಹಣದ ಬದಲು ಅಕ್ಕಿ ಕೊಡಲು ಸರ್ಕಾರ ತೀರ್ಮಾನ: ಸಚಿವ ಕೆ ಎಚ್‌ ಮುನಿಯಪ್ಪ

Date:

ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದು, ಇದೇ ತಿಂಗಳಿನಿಂದ ನೀಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ ಹೆಚ್​ ಮುನಿಯಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದ ಅಕ್ಕಿಯನ್ನು ಫಲಾನುಭವಿಗಳಿಗೆ ಕೊಡುತ್ತಿದ್ದೇವೆ. ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು ಕೊಡಲು ಕೇಂದ್ರ ಸರ್ಕಾರವು ಒಪ್ಪಿಗೆ ಕೊಟ್ಟಿದೆ. ಪ್ರತಿ ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ ಎಂದು ಹೇಳಿದರು.

ನಮ್ಮ ಇಲಾಖೆ ಅಧಿಕಾರಿಗಳು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸ್ಪಂದಿಸಿದ್ದಾರೆ. ಈಗ ಕೇಂದ್ರ ಸಚಿವರು ಅಕ್ಕಿ‌ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಹಾಕುತ್ತೇವೆ. ಫೆಬ್ರವರಿಯಿಂದ 10 ಕೆಜಿ ಅಕ್ಕಿ ಕೊಡುವ ತೀರ್ಮಾನ ಮಾಡಿದ್ದೇವೆ. 2013ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. ನಾವು ನುಡಿದಂತೆ ನಡೆದಿದ್ದೇವೆ. ರಾಜ್ಯದ ಜನರಿಗೆ ಅಕ್ಕಿ, ಹಣ ಎರಡನ್ನೂ ಕೊಟ್ಟಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಕೆಂದ್ರ ಸರ್ಕಾರ ಮೊದಲು ಒಂದು ಕೆಜಿ ಅಕ್ಕಿಗೆ 28 ರೂ. ನಿಗದಿಪಡಿಸಿತ್ತು. ಜನವರಿಯಿಂದ ಪ್ರತಿ ಕೆಜಿಗೆ 22.50 ರೂ ನಂತೆ ಕೊಡಲು ನಿರ್ಧರಿಸಿದೆ. ದರ ಪರಿಷ್ಕರಣೆ‌ ಹಿನ್ನೆಲೆಯಲ್ಲಿ ‌ಮೂರು ತಿಂಗಳು ಹಣ ಹಾಕಿಲ್ಲ. ಒಂದು ವಾರದೊಳಗೆ ಸಕಾಲದಲ್ಲಿ ಹಣ ಹಾಕುತ್ತೇವೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ಡಿಬಿಟಿ ಮೂಲಕ ಹಾಕುತ್ತೇವೆ ಎಂದು ಭರವಸೆ ನೀಡಿದರು.

ಅನ್ನ ಭಾಗ್ಯ ಯೋಜನೆ ಆರಂಭದಲ್ಲಿ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿತ್ತು. ಆದರೆ ಕೇಂದ್ರ ಸರ್ಕಾರದಿಂದ ಸರಿಯಾಗಿ ಸ್ಪಂದನೆ ಸಿಗದೇ ಇದ್ದಾಗ ರಾಜ್ಯ ಸರ್ಕಾರ ಅನ್ನಭಾಗ್ಯದ ಹಣ ನೀಡಲಾಗುವುದು ಎಂದು ತಿಳಿಸಿತ್ತು. ಅದರಂತೆ ಸರ್ಕಾರ ಒಂದು ಕೆಜಿ ಅಕ್ಕಿಗೆ 34 ರೂ. ಪಾವತಿ ಮಾಡಬೇಕಿತ್ತು. ಒಂದು ಪಡಿತರ ಕುಟುಂಬದಲ್ಲಿ ಐವರು ಸದಸ್ಯರಿದ್ದರೆ 20 ಕೆಜಿಗೆ ಅಕ್ಕಿಗೆ ಪ್ರತಿ ತಿಂಗಳು 850 ರೂ. ಜಮೆ ಮಾಡಬೇಕಿತ್ತು. ಆದರೆ ಕಳೆದ 2 ತಿಂಗಳಿನಿಂದಲೂ ಯಾವುದೇ ಹಣ ಜಮೆಯಾದ ಹಿನ್ನೆಲೆ ಈ ಬಗ್ಗೆ ಫಲಾನುಭವಿಗಳು ಅಧಿಕಾರಿಗಳನ್ನು ಪ್ರಶ್ನಿಸಿದ್ದರು. ಆದರೀಗ ಹಣದ ಬದಲಿಗೆ ಅಕ್ಕಿಯನ್ನು ಕೊಡುವುದಕ್ಕೆ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...