ಅಸ್ತಿತ್ವಕ್ಕೆ ಬಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಅಧ್ಯಕ್ಷರಾಗಿ ಸಿಎಂ, 75 ಸದಸ್ಯರಿಗೆ ಅವಕಾಶ

Date:

ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಒಟ್ಟು 75 ಸದಸ್ಯರ ಬಲದ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ಬಂದಿದೆ.

ಬೆಂಗಳೂರನ್ನು ಐದು ನಗರ ಪಾಲಿಕೆಗಳಾಗಿ ವಿಭಜಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಸಿಎಂ ಡಿ.ಕೆ. ಶಿವಕುಮಾರ್ ಉಪಾಧ್ಯಕ್ಷರಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರಾಗಿ ನೇಮಕ ಮಾಡಲಾಗಿದೆ.‌

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರುಗಳನ್ನು ನೇಮಿಸಲಾಗಿದೆ. ಕರ್ನಾಟಕದಿಂದ ಆಯ್ಕೆಯಾಗಿರುವ ಐವರನ್ನು ರಾಜ್ಯಸಭಾ ಸದಸ್ಯರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ. 11 ಮಂದಿ ವಿಧಾನ ಪರಿಷತ್ ಸದಸ್ಯರನ್ನೂ ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ. ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಕೂಡ ಪದನಿಮಿತ್ತ ಸದಸ್ಯರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸಚಿವರಾಗಿರುವ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಗೆ ಸದಸ್ಯರ ಪಟ್ಟಿಯಲ್ಲಿದ್ದಾರೆ. ಅಲ್ಲದೆ, ಸಚಿವರಾದ ರಾಮಲಿಂಗಾ ರೆಡ್ಡಿ, ಕೆ ಜೆ ಜಾರ್ಜ್, ಬೈರತಿ ಸುರೇಶ್, ಕೃಷ್ಣ ಬೈರೇಗೌಡ, ಜಮರ್ ಅಹ್ಮದ್ ಖಾನ್ ಕೂಡಾ ಪದನಿಮಿತ್ತ ಸದಸ್ಯರ ಪಟ್ಟಿಯಲ್ಲಿ ಇದ್ದಾರೆ.

ಐದು ನಗರ ಪಾಲಿಕೆಗಳಾದ ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳ ಮೇಯರುಗಳು ಹಾಗೂ ಆಯುಕ್ತರುಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಸದಸ್ಯರನ್ನಾಗಿಸಲಾಗಿದೆ. ಇನ್ನು ಬಿಡಿಎ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು, ನಗರ ಪೊಲೀಸ್ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ನಿಗಮ ಎಂಡಿ, ಬಿಎಂಆರ್ ಸಿಎಲ್ ಮಹಾನಗರ ಆಯುಕ್ತರು, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದ ಸಿಇಒರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯ ಆಯುಕ್ತರು, ಜಲಮಂಡಳಿ ಅಧ್ಯಕ್ಷರು, ಬಿಎಂಟಿಸಿ ಎಂಡಿ, ಬೆಸ್ಕಾಂ ಎಂಡಿ, ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆ ನಿರ್ದೇಶಕರು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ನಗರ ಯೋಜಕರು ಮತ್ತು ಪ್ರಾಧಿಕಾರದ ಮುಖ್ಯ ಅಭಿಯಂತರರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ.

ಗ್ರೇಟರ್ ಬೆಂಗಳೂರು ಕಾಯ್ದೆ ಅಡಿ ಬೆಂಗಳೂರಲ್ಲಿ ಐದು ನಗರ ಪಾಲಿಕೆಗಳನ್ನು ರಚಿಸಿ, ನಗರಾಭಿವೃದ್ಧಿ ಇಲಾಖೆಯು ಕಳೆದ ತಿಂಗಳು ಕರಡು ಅಧಿಸೂಚನೆ ಹೊರಡಿಸಿತ್ತು. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿ ಜನಸಂಖ್ಯೆ ವಿಸ್ತೀರ್ಣ, ಜನಸಂಖ್ಯಾ ಸಾಂದ್ರತೆ, ಉತ್ಪತ್ತಿಯಾಗುವ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗದ ಶೇಕಡಾವಾರು, ಆರ್ಥಿಕ ಪ್ರಾಮುಖ್ಯತೆ, ಪ್ರದೇಶದಲ್ಲಿ ಲಭ್ಯವಿರುವ ಮೂಲಸೌಕರ್ಯ ಸೌಲಭ್ಯಗಳ ಅನ್ವಯ ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ 5 ನಗರ ಪಾಲಿಕೆಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿದೆ. ಕರಡು ಅಧಿಸೂಚನೆಯಲ್ಲಿ ಐದು ನಗರ ಪಾಲಿಕೆಗಳಿಗೆ ಗಡಿಗಳನ್ನು ನಿರ್ದಿಷ್ಟಪಡಿಸಲಾಗಿತ್ತು.

ಸದಸ್ಯರ ಪಟ್ಟಿಯಲ್ಲಿ ಯಾರೆಲ್ಲಾ?

ಯತೀಂದ್ರ ಸಿದ್ದರಾಮಯ್ಯ
ನಿರ್ಮಲಾ ಸೀತರಾಮನ್
ಶೋಭಾ ಕರಂದ್ಲಾಜೆ
ರಾಮಲಿಂಗಾ ರೆಡ್ಡಿ
ಕೆಜೆ ಜಾರ್ಜ್
ಬೈರತಿ ಸುರೇಶ್
ದಿನೇಶ್ ಗುಂಡೂರಾವ್
ಕೃಷ್ಣ ಬೈರೇಗೌಡ
ಜಮೀರ್ ಅಹ್ಮದ್ ಖಾನ್
ಸಿಎನ್ ಮಂಜುನಾಥ್
ಪಿಸಿ ಮೋಹನ್
ತೇಜಸ್ವಿ ಸೂರ್ಯ
ನಾರಾಯಣ ಕೊರಗಪ್ಪ
ಜೈರಾಮ್ ರಮೇಶ್
ಜಗ್ಗೇಶ್
ಲಹರ್ ಸಿಂಗ್
ಜಿಸಿ ಚಂದ್ರಶೇಖರ್
ಬೈರತಿ ಬಸವರಾಜ
ಎಸ್ ಟಿ ಸೋಮಶೇಖರ್
ಮುನಿರತ್ನ
ಎಸ್ ಮುನಿರಾಜು
ಕೆ ಗೋಪಾಲಯ್ಯ
ಡಾ ಸಿಎನ್ ಅಶ್ವತ್ಥ ನಾರಾಯಣ
ಎಸಿ ಶ್ರೀನಿವಾಸ್
ಎಸ್ ರಘು
ರಿಜ್ವಾನ್ ಅರ್ಷದ್
ಎನ್ ಎ ಹ್ಯಾರಿಸ್
ಎಸ್ ಸುರೇಶ್ ಕುಮಾರ್
ಪ್ರಿಯಕೃಷ್ಣ
ಎಂ ಕೃಷ್ಣಪ್ಪ
ಉದಯ ಗರುಡಾಚಾರ್
ರವಿ ಸುಬ್ರಹ್ಮಣ್ಯ
ಆರ್ ಅಶೋಕ್
ಸಿಕೆ ರಘುಮೂರ್ತಿ
ಮಂಜುಳ ಲಿಂಬಾವಳಿ
ಸತೀಶ್ ರೆಡ್ಡಿ
ಎಂ ಕೃಷ್ಣಪ್ಪ
ಎಸ್ ಪುಟ್ಟಣ್ಣ
ಕೆ ಗೋವಿಂದ ರಾಜ್
ಎಚ್‌ಎಸ್ ಗೋಪಿನಾಥ್
ಬಿಕೆ ಹರಿಪ್ರಸಾದ್
ಟಿ ಎನ್ ಜಯರಾಯಿಗೌಡ
ಕೇಶವ ಪ್ರಸಾದ್
ಎನ್ ನಾಗರಾಜು
ನಸೀರ್ ಅಹ್ಮದ್
ಶರವಣ ಟಿಎ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...