ಗೃಹ ಲಕ್ಷ್ಮಿ | ಚಾಮುಂಡೇಶ್ವರಿಗೆ ಪ್ರತಿ ತಿಂಗಳು 2000 ರೂ. ಅರ್ಪಿಸಲು ದಿನೇಶ್ ಗೂಳಿಗೌಡ ಮನವಿ

Date:

  • ಲಕ್ಷ್ಮಿ ಹೆಬ್ಬಾಳ್ಕರ್‌ ಅವರನ್ನು ದಿನೇಶ್‌ ಗೂಳಿಗೌಡ ಭೇಟಿ ಮಾಡಿ ಮನವಿ
  • ‘ರಾಜ್ಯದ 1.2 ಕೋಟಿಗೂ ಅಧಿಕ ಕುಟುಂಬಗಳಿಗೆ ಜಮಾ ಮಾಡಲಾಗುತ್ತಿದೆ’

ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂಪಾಯಿಯನ್ನು ಇನ್ನು ಮುಂದೆ ಪ್ರತಿ ತಿಂಗಳು ಬಿಡುಗಡೆ ಮಾಡುವ  ಮೊದಲಿಗೆ ಮೈಸೂರಿನ ಚಾಮುಂಡೇಶ್ವರಿ ತಾಯಿಯ ಖಾತೆಗೆ ಮೊದಲು ಎರಡು ಸಾವಿರ ಅರ್ಪಿಸಿ, ನಂತರ ಫಲಾನುಭವಿಗಳಿಗೆ ಹಣ ಹಂಚಬೇಕು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರನ್ನು ಶುಕ್ರವಾರ ದಿನೇಶ್‌ ಗೂಳಿಗೌಡ ಭೇಟಿ ಮಾಡಿ, ಈ ಸಂಬಂಧ ಈ ಹಿಂದೆ ಡಿಸಿಎಂ ಡಿ ಕೆ ಶಿವಕುಮಾರ್‌ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರವನ್ನು ಮನವಿ ರೂಪದಲ್ಲಿ ಸಲ್ಲಿಸಿದರು.

ದಿನೇಶ್‌ ಗೂಳಿಗೌಡ ಮಾಡಿದ್ದ ಮನವಿಗೆ ಸ್ಪಂದಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಸೂಕ್ತ ಕ್ರಮವಹಿಸುವಂತೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಸೂಚಿಸಿದ್ದರು. ಈ ವೇಳೆ ಶಾಸಕ ದಿನೇಶ್‌ ಗೂಳಿಗೌಡ ಅವರು ಸಹ ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯೋಜನೆ ಜಾರಿಗೂ ಮುನ್ನ ಹರಕೆ ತೀರಿಸಲು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿ ಹಾಗೂ ಮಹಿಳಾ ಮತ್ತು ಕುಟುಂಬ ಕಲ್ಯಾಣ ಸಚಿವರು ದೇಗುಲಕ್ಕೆ ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಮಾತ್ರವಲ್ಲ ಗೃಹ ಲಕ್ಷ್ಮಿಯರಿಗೆ ನೀಡುವ 2 ಸಾವಿರ ರೂ.ಗಳನ್ನು ದೇವಿಗೆ ಸಲ್ಲಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ಪರಿ ನರಮೇಧದ ನಂತರವೂ ಮೇಲೇಳದೇಕೆ ನೆತ್ತರದಾಹಿಗಳ ತಕ್ಕಡಿ?

ಈಗ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ರಾಜ್ಯದ 1.2 ಕೋಟಿಗೂ ಅಧಿಕ ಕುಟುಂಬಗಳಿಗೆ ಜಮಾ ಮಾಡಲಾಗುತ್ತಿದೆ. ಆ ಹಣದಿಂದ ಸಾಕಷ್ಟು ಬಡ ಕುಟುಂಬಗಳ ಜೀವನ ಮಟ್ಟ ಸುಧಾರಣೆಗೊಂಡಿದೆ. ಅಲ್ಲದೆ, ನಮ್ಮ ಸರ್ಕಾರದ ಹಾಗೂ ತಮ್ಮಗಳ ಬಗ್ಗೆ ಶುಭ ಹಾರೈಕೆಯನ್ನು ಮಾಡುತ್ತಲೇ ಇದ್ದಾರೆ ಎಂದು ಗೂಳಿಗೌಡ ಮನವಿಯಲ್ಲಿ ತಿಳಿಸಿದ್ದಾರೆ.

“ಈಗ ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ನಿಖರವಾಗಿ ತಲಾ 2 ಸಾವಿರ ರೂ. ಹಣ ಜಮಾ ಆಗುತ್ತಿರುವುದು ಖುಷಿಯ ವಿಚಾರವಾಗಿದೆ. ಅದೇ ರೀತಿ ಪ್ರತಿ ತಿಂಗಳ ಕಂತನ್ನು ಯಜಮಾನಿಯರಿಗೆ ಪಾವತಿಸುವ ಮೊದಲು ನಾಡದೇವಿ ಚಾಮುಂಡೇಶ್ವರಿಯ ಸನ್ನಧಿಗೂ ಸಲ್ಲಿಸಬೇಕು. ಆ ಮೂಲಕ ಮೊದಲ ಹಣ ನಾಡದೇವತೆಗೆ ಸಲ್ಲಿಕೆಯಾಗಿ ಬಳಿಕ ಉಳಿದವರಿಗೆ ಪಾವತಿಯಾಗುವಂತೆ ವ್ಯವಸ್ಥೆ ಮಾಡಬೇಕು” ಎಂದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...