ತಡರಾತ್ರಿವರೆಗೂ ಹಾಲ್‌ ಟಿಕೆಟ್‌ ವಿತರಣೆ | ದೇಶಕ್ಕೆ ಕೆಟ್ಟ ಸಂದೇಶ ರವಾನಿಸಿದ ಕೆಪಿಎಸ್‌ಸಿ: ಪ್ರಲ್ಹಾದ ಜೋಶಿ ಕಿಡಿ

Date:

ರಾಜ್ಯದಲ್ಲಿ 384 ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಮೇ 3ರಂದು ಕೆಪಿಎಸ್‌ಸಿ ನಡೆಸುತ್ತಿದ್ದ ಮುಖ್ಯ ಪರೀಕ್ಷೆಗೆ ತಡರಾತ್ರಿವರೆಗೂ ಅರ್ಜಿ ಸಲ್ಲಿಕೆ ಮತ್ತು ಹಾಲ್‌ಟಿಕೆಟ್‌ ವಿತರಿಸಿದ ಕರ್ನಾಟಕ ಸರ್ಕಾರ ದೇಶಕ್ಕೆ ಒಂದು ಕೆಟ್ಟ ಸಂದೇಶ ರವಾನಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ, 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಶುಕ್ರವಾರವೂ ಅರ್ಜಿ ಸ್ವೀಕರಿಸಿ ತಡರಾತ್ರಿವರೆಗೂ ಹಾಲ್‌ಟಿಕೆಟ್‌ ವಿತರಿಸಿದ್ದು, ಪಾರದರ್ಶಕತೆಗೆ ವಿರುದ್ಧ ನಡೆ ಅನುಸರಿಸಿದೆ. ನೇಮಕಾತಿಯಲ್ಲಿ ಒಂದು ಮಾದರಿ ಸಂಸ್ಥೆಯಾಗಿ ಇರಬೇಕಾದ ಕೆಪಿಎಸ್‌ಸಿ ಕಪ್ಪು ಚುಕ್ಕೆಯಾಗಿದೆ. ರಾಜ್ಯ ಸರ್ಕಾರದ ದುರಾಡಳಿತದಲ್ಲಿ ತನ್ನ ಪಾತ್ರವನ್ನೂ ದೇಶಕ್ಕೆ ಪ್ರದರ್ಶಿಸಿದೆ ಎಂದು ಆರೋಪಿಸಿದ್ದಾರೆ.

“ಕೆಪಿಎಸ್‌ಸಿ ಪರೀಕ್ಷೆ ಆರಂಭದ ಮೊದಲಿನಿಂದಲೂ ಗೊಂದಲ ಸೃಷ್ಟಿಸುತ್ತ, ಎಡವಟ್ಟುಗಳನ್ನು ಮಾಡುತ್ತಲೇ ಬಂದಿದೆ. ಪರೀಕ್ಷೆಯಲ್ಲಿ ಸಾಲು ಸಾಲು ತಪ್ಪು, ಎಡವಟ್ಟುಗಳಾಗಿವೆ. ಕನ್ನಡದಲ್ಲಿ ತಪ್ಪು ತಪ್ಪಾಗಿ ಪ್ರಶ್ನೆಗಳ ಪ್ರಕಟ, ಎರಡೆರಡು ಬಾರಿ ಪರೀಕ್ಷೆ, ಅದರಲ್ಲಿಯೂ ಸಾಲು ಸಾಲು ತಪ್ಪುಗಳು ಹೀಗೆ ಲೋಪದೋಷಗಳ ಸರಮಾಲೆಯನ್ನೇ ಹೊದ್ದಿದೆ. ರಾಜ್ಯ ಸರ್ಕಾರದ ಜತೆ ಕೆಪಿಎಸ್‌ಸಿ ಸಹ ದುರಾಡಳಿತದ ಪರಮಾವಧಿ ಮೆರೆದಿದೆ” ಎಂದು ಸಚಿವ ಜೋಶಿ ಹರಿಹಾಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದ ಪಾಲಿಗೆ ಪಾಪದ ಸಂಸ್ಥೆ

“ಕರ್ನಾಟಕ ಲೋಕಸೇವಾ ಆಯೋಗ ಸದ್ಯ ಕರ್ನಾಟಕ ಮತ್ತು ಕನ್ನಡಿಗರ ಪಾಲಿಗೆ ಒಂದು ಶಾಪದ ಸಂಸ್ಥೆಯಾಗಿದೆ. ರಾತ್ರೋರಾತ್ರಿ ಹಾಲ್‌ಟಿಕೆಟ್‌ ವಿತರಿಸಿದರೆ ಅಭ್ಯರ್ಥಿಗಳು ಬರುವುದಾದರೂ ಹೇಗೆ? ಮಹಿಳಾ ಅಭ್ಯರ್ಥಿಗಳು ದೂರದ ಊರುಗಳಿಂದ ಬೆಂಗಳೂರಿಗೆ ಬರಲು ಹೇಗೆ ಸಾಧ್ಯ? ಕೆಪಿಎಸ್‌ಸಿ ಇದ್ಯಾವುದರ ಅರಿವೂ ಇಲ್ಲದಂತೆ ನಡೆದುಕೊಂಡಿದೆ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಲ್ಲಿ ನಡೆಯಿತು ಸರ್ವಪಕ್ಷ ಸಭೆ?

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಕೆಪಿಎಸ್‌ಸಿ ವಿಚಾರವಾಗಿ ಸದನದಲ್ಲಿ “ಸರ್ವಪಕ್ಷ ಸಭೆ ಕರೆಯುತ್ತೇನೆ. ಎಲ್ಲರಿಂದಲೂ ಅಭಿಪ್ರಾಯ ಪಡೆಯುತ್ತೇನೆ.. ಕನ್ನಡಿಗರಿಗೆ ಅನ್ಯಾಯ ಆಗಲು ಬಿಡುವುದಿಲ್ಲಾ…” ಎಂದೆಲ್ಲಾ ಹೇಳಿದ್ದೀರಿ. ಎಲ್ಲಿ ನಡೆಸಿದ್ದೀರಿ ಸರ್ವಪಕ್ಷ ಸಭೆ? ಮತ್ತೂ ಕನ್ನಡಿಗರಿಗೆ ತಾವು ಮಾಡಿದ್ದೇನು” ಎಂದು ಪ್ರಶ್ನಿಸಿದ್ದಾರೆ.

ತಮ್ಮ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ದುರಾಡಳಿತ ಮಿತಿ ಮೀರಿದೆ. ಕೆಪಿಎಸ್‌ಸಿ ದೇಶಕ್ಕೆ ಕಪ್ಪು ಚುಕ್ಕೆಯಾಗಿರುವುದು ಅತ್ಯಂತ ದುರಾದೃಷ್ಟಕರ ಮತ್ತು ಸರ್ಕಾರದ ಅತಿ ದೊಡ್ಡ ವೈಫಲ್ಯವೂ ಆಗಿದೆ. ರಾತ್ರೋರಾತ್ರಿ ಹಾಲ್ ಟಿಕೆಟ್ ವಿತರಿಸಲು ಮುಂದಾಗುತ್ತಿರುವ ನಿಮಗೆ ಸ್ವಲ್ಪವಾದರೂ ನಾಚಿಕೆ, ಮಾನ-ಮರ್ಯಾದೆ ಇಲ್ಲವೇ? ಸಾರ್ವಜನಿಕ ಸೇವೆಯಲ್ಲಿ ತೊಡಗಬೇಕೆಂಬ ಅಭ್ಯರ್ಥಿಗಳ ಜೀವನದ ಜತೆ ಹೀಗೆ ಚೆಲ್ಲಾಟವಾಡುತ್ತ ದುರಾಡಳಿತದಲ್ಲೇ ತೊಡಗಿರುವ ತಮ್ಮ ಸರ್ಕಾರ ರಾಜ್ಯದ ಜನತೆಗೆ ಬೇಡವಾಗಿದೆ. ನಿಮ್ಮ ರಾಜೀನಾಮೆಯಿಂದ ಮಾತ್ರ ರಾಜ್ಯಕ್ಕೆ ನ್ಯಾಯ ಸಿಗಲು ಸಾಧ್ಯ. ಹಾಗಾಗಿ ಮೊದಲು ರಾಜೀನಾಮೆ ನೀಡಿ ಮನೆಗೆ ಹೋಗಿ” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...