ಸರ್ಕಾರದ ನಿರ್ಧಾರದಿಂದ ಪರಮಾನಂದವಾಗಿದೆ : ಡಾ. ಬಸವಲಿಂಗ ಪಟ್ಟದೇವರು

Date:

 

“ಇಂದು ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಬಸವಣ್ಣನವರನ್ನು ಕರ್ನಾಟಕದ ʼಸಾಂಸ್ಕೃತಿಕ ನಾಯಕʼರನ್ನಾಗಿ ಘೋಷಣೆ ಮಾಡಿದ್ದು ಪರಮಾನಂದ ತಂದಿದೆ. ಇದು ಸರ್ಕಾರದ ಘನತೆಯನ್ನೂ ಹೆಚ್ಚಿಸಿದೆ” ಎಂದು ಬಾಲ್ಕಿಯ ಹಿರೇಮಠ ಸಂಸ್ಥಾನದ ಸ್ವಾಮೀಜಿ ಡಾ ಬಸವಲಿಂಗ ಪಟ್ಟದೇವರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ದಿನ.ಕಾಮ್‌ ಜೊತೆ ಮಾತನಾಡಿದ ಅವರು, ಬಸವಣ್ಣನವರು ತುಳಿತಕ್ಕೊಳಗಾದವರನ್ನು ಮೇಲೆತ್ತಿದವರು. ಮೌಢ್ಯ ಕಂದಾಚಾರದ ವಿರುದ್ಧ ನ್ಯಾಯವನ್ನು ಜಗತ್ತಿಗೆ ಕೊಟ್ಟವರು ಜಗಜ್ಯೋತಿ ಬಸವಣ್ಣನವರು. ಅವರ ತತ್ವ, ವಿಚಾರ ಎಂದೆಂದೂ ಪ್ರಸ್ತುತ. ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂಬ ಮನವಿಯನ್ನು ಜನವರಿ ಎಂಟನೇ ತಾರೀಕು ಮಠಾಧೀಶರು, ಸಾಹಿತಿಗಳ ನಿಯೋಗ ಕೊಟ್ಟಿತ್ತು. ಇಷ್ಟು ಕಡಿಮೆ ಅವಧಿಯಲ್ಲಿ ಈ ನಿರ್ಧಾರ ಕೈಗೊಂಡಿರುವುದು ಸಿದ್ದರಾಮಯ್ಯನವರಿಗೆ ಬಸವಣ್ಣನವರ ಮೇಲೆ ಇಟ್ಟಂತಹ ಭಕ್ತಿ, ಪ್ರೇಮವನ್ನು ತೋರಿಸಿಕೊಡುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯನವರು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಬಸವಣ್ಣನವರ ಭಾವಚಿತ್ರವನ್ನು ಸರ್ಕಾರಿ ಕಚೇರಿಗಳಲ್ಲಿ ಹಾಕಿಸಿದ್ದರು. ಅಕ್ಕ ಮಹಾದೇವಿ ಹೆಸರಿನಲ್ಲಿ ಮಹಿಳಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದು, ಬಸವ ಕಲ್ಯಾಣದ ಅನುಭವ ಮಂಟಪದ ನೀಲನಕ್ಷೆ ಸಿದ್ದಪಡಿಸಿದ್ದು ಈ ಎಲ್ಲಾ ಶ್ರೇಯಸ್ಸು ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ. ಅಷ್ಟೇ ಅಲ್ಲ ಬಸವಣ್ಣನವರ ವಚನಗಳ ನಾಲ್ಕು ಸಂಪುಟಗಳನ್ನು ಹೊರ ತಂದವರು ಸಿದ್ದರಾಮಯ್ಯನವರು” ಎಂದು ಶ್ಲಾಘಿಸಿದರು.

“ಸಿದ್ದರಾಮಯ್ಯನವರು ಬಸವಣ್ಣನವರ ಹೆಸರಿನ ಮೇಲೆ ಪ್ರಮಾಣವಚನ ಮಾಡಿರುವುದು ಬಸವಣ್ಣನವರ ತತ್ವದ ಮೇಲಿನ ಅವರ ಭಕ್ತಿ ತೋರಿಸುತ್ತದೆ. ಸದ್ಯದಲ್ಲಿಯೇ ತಜ್ಞರ ಜೊತೆ ಚರ್ಚೆ ಮಾಡಿ ನಿಯೋಗದ ಜೊತೆ ಹೋಗಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿ ಮುಂದೆ ಬಸವಣ್ಣನವರ ತತ್ವ ಪ್ರಸಾರ, ಶರಣರ ಜೀವನ ಚರಿತ್ರೆಯನ್ನು ಪಠ್ಯಗಳಲ್ಲಿ ಹೇಗೆ ಅಳವಡಿಸಬೇಕು ಎಂಬ ಬಗ್ಗೆ ಸಲಹೆ ಕೊಡುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...