‘ಜನರ ಸಮಸ್ಯೆ ಕೇಳಲು ಹೋದ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ’: ಪ್ರಜ್ವಲ್ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಆರೋಪ

Date:

ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಲು ಹೋದ ತನ್ನ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಹಲವು ಬಾರಿ ಅತ್ಯಾಚಾರವೆಸಗಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದಾನೆ ಎಂದು ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯೆ ಆರೋಪಿಸಿದ್ದಾರೆ.

ಮೇ 1ರಂದು ಎಸ್‌ಐಟಿ ತಂಡ 44 ವರ್ಷದ ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಪ್ರಕರಣವನ್ನು ದಾಖಲಿಸಿದೆ.

ಮಾಧ್ಯಮವೊಂದು ವರದಿಸಿರುವ ಎಫ್‌ಐಆರ್‌ ದಾಖಲೆಯ ಮಾಹಿತಿಯಂತೆ, ಮಹಿಳೆ ತಾನು ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದಾಗ ತನ್ನ ಭಾಗದ ಹಲವು ಅಭಿವೃದ್ಧಿ ಕೆಲಸಗಳ ಕುರಿತು ಮಾತನಾಡುವ ಸಲುವಾಗಿ ಶಾಸಕ ಹಾಗೂ ಸಂಸದರ ಮನೆಗೆ ಆಗಾಗ ತೆರಳುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2021ರಲ್ಲಿ ನಡೆದ ಒಂದು ಘಟನೆಯನ್ನು ಮಹಿಳೆ ವಿವರಿಸಿದ್ದಾರೆ. ತಮ್ಮ ಭಾಗದ ಸ್ಥಳೀಯ ಕಾಲೇಜೊಂದರಲ್ಲಿ ಕೆಲವು ಮಹಿಳಾ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್‌ ಪ್ರವೇಶ ದೊರಕಿಸಿಕೊಡುವಂತೆ ಹೋಗಿದ್ದರು. ಅಂದು ಸಂಸದರು ಕೆಲಸದಲ್ಲಿ ನಿರತರಾಗಿದ್ದು, ಮರುದಿನ ಬರುವಂತೆ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ರಾಡಿಯಲ್ಲಿ ಕಳೆದು ಹೋದದ್ದು ಹೆಣ್ಣಿನ ಘನತೆ ಅಷ್ಟೇ ಅಲ್ಲ, ʼಸಾಮಾಜಿಕ ಶೀಲʼ ಬೀದಿಗೆ ಬಿದ್ದಿದೆ

“ಮರು ದಿನ ನಾನು ಹಾಸನದಲ್ಲಿನ ಸಂಸದರ ಕಚೇರಿಗೆ ತೆರಳಿದೆ. ಹಲವು ಮಂದಿ ಇರುವುದರಿಂದ ಕಚೇರಿ ಸಿಬ್ಬಂದಿ ಮೊದಲ ಮಹಡಿಯಲ್ಲಿ ಕಾಯುವಂತೆ ತಿಳಿಸಿದರು. ಪ್ರಜ್ವಲ್ ಎಲ್ಲ ಮಹಿಳೆಯರನ್ನು ಕಳಿಸಿದ ನಂತರ ನನ್ನನ್ನು ಕೊಠಡಿಯೊಳಗೆ ಕರೆದ. ಕೊಠಡಿಯೊಳಗೆ ಪ್ರವೇಶಿಸುತ್ತಿರುವ ಸಂದರ್ಭದಲ್ಲಿ ನನ್ನ ಕೈಹಿಡಿದು ಎಳೆದುಕೊಂಡು ಕೊಠಡಿಯ ಬಾಗಿಲನ್ನು ಮುಚ್ಚಿದ” ಎಂದು ಸಂತ್ರಸ್ತೆ ದಾಖಲಿಸಿದ್ದಾರೆ.

“ನಾನು ಸಂಸದನನ್ನು ಕೊಠಡಿಯ ಬಾಗಿಲು ಏಕೆ ಮುಚ್ಚಿದರೆಂದು ಕೇಳಿದೆ. ಸಂಸದ ಏನು ಆಗುವುದಿಲ್ಲ ಎಂದು ಮಂಚದ ಮೇಲೆ ಕೂರಿಸಿದರು. ನಿನ್ನ ಪತಿಗೆ ಕಡಿಮೆ ಮಾತನಾಡಲು ಹೇಳು ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದರು. ನಿನ್ನ ಪತಿಯಿಂದ ನನ್ನ ತಾಯಿ ಭವಾನಿ ರೇವಣ್ಣ ಅವರಿಗೆ ಎಂಎಲ್‌ಎ ಟಿಕೆಟ್ ತಪ್ಪಿ ಹೋಯಿತು. ನಿನ್ನ ಪತಿ ರಾಜಕೀಯವಾಗಿ ಮೇಲೆ ಬರಬೇಕಾದರೆ ನಾನು ಹೇಳಿದಂತೆ ಕೇಳಬೇಕು ಎಂದು ಪ್ರಜ್ವಲ್‌ ಎಚ್ಚರಿಸಿದ” ಎಂದು ಮಹಿಳೆ ಹೇಳಿದ್ದಾರೆ.

“ನಂತರ ಪ್ರಜ್ವಲ್‌ ನನ್ನನ್ನು ಮಂಚದ ಮೇಲೆ ತಳ್ಳಿ ನನ್ನನ್ನು ವಿವಸ್ತ್ರಳನ್ನಾಗಿ ಮಾಡಿದ. ನಾನು ನಿರಾಕರಿಸಿ ಕಿರುಚಿದ್ದಕ್ಕೆ ನನ್ನ ಬಳಿ ಗನ್‌ ಇರುವುದಾಗಿ ಹೇಳಿ ಮುಂದೆ ನೀನು, ನಿನ್ನ ಪತಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಜೀವ ಬೆದರಿಕೆಯೊಡ್ಡಿದ” ಎಂದು ಮಹಿಳೆ ಪೊಲೀಸರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಅನಂತರ ಸಂಸದ ನನ್ನ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯವೆಸಗಿದ. ಅದನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡ. ಇದರ ಬಗ್ಗೆ ಯಾರಿಗಾದರೂ ಹೇಳಿದರೆ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಬೆದರಿಸಿದ. ಈ ಘಟನೆ ನಡೆದ ನಂತರದಲ್ಲಿ ಆಗಾಗ ನನ್ನೊಂದಿಗೆ ವಿಡಿಯೋ ಕಾಲ್‌ ಮೂಲಕ ಮಾತನಾಡುತ್ತಿದ್ದ. ವಿಡಿಯೋ ಕರೆಯ ವೇಳೆ ನನ್ನನ್ನು ಬೆತ್ತಲಾಗುವಂತೆ ಹೇಳುತ್ತಿದ್ದ. ಇದಲ್ಲದೆ ಹಲವು ಬಾರಿ ನನ್ನ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ” ಎಂದು ಮಹಿಳೆ ಹೇಳಿದ್ದಾರೆ.

ಸಂಸದನ ಬಗ್ಗೆ ಭಯಗೊಂಡ ಕಾರಣ ಮಹಿಳೆ ಈ ಘಟನೆಯನ್ನು ಎಲ್ಲೂ ಹೇಳಿರಲಿಲ್ಲ. ಲೈಂಗಿಕ ಹಗರಣ ಬೆಳಕಿಗೆ ಬಂದು ಕರ್ನಾಟಕ ಸರ್ಕಾರ ಎಸ್‌ಐಟಿ ರಚನೆಯನ್ನು ಮಾಡಿದ ನಂತರ ವಿಶೇಷ ತನಿಖಾ ತಂಡದ ಮುಂದೆ ಘಟನೆಯ ಬಗ್ಗೆ ವಿವರಿಸಿದ್ದಾರೆ.

ಈ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣನ ವಿರುದ್ಧ ಐಪಿಸಿ ಸೆಕ್ಷನ್ 376(2)(ಎನ್‌) (ಒಂದೇ ಮಹಿಳೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗುವುದು), 506(ಬೆದರಿಸುವಿಕೆ), 354ಎ(1)(ದೈಹಿಕ ಸಂಪರ್ಕ ಹಾಗೂ ಇಷ್ಟವಿಲ್ಲದ ಲೈಂಗಿಕ ಚಟುವಟಿಕೆಗಳು), 354ಬಿ (ಹಲ್ಲೆ ಅಥವಾ ವಿವಸ್ತ್ರಗೊಳಿಸುವ ಉದ್ದೇಶದೊಂದಿಗೆ ಅಪರಾಧವೆಸಗುವುದು) ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ.

ಪ್ರಜ್ವಲ್‌ ಹಾಗೂ ಆತನ ತಂದೆ ಹೆಚ್‌ ಡಿ ರೇವಣ್ಣ ವಿರುದ್ಧ ಏ.28 ರಂದು ಹಾಸನದ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ಕೂಡ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಮೇ.2 ರಂದು ಮೈಸೂರಿನ ಕೆ ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ಹೆಚ್‌ ಡಿ ರೇವಣ್ಣ ಹಾಗೂ ಆತನ ಸಹಾಯಕನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...