ವಿರೋಧದ ನಡುವೆ ದ್ವೇಷ ಭಾಷಣ ವಿಧೇಯಕ ಅಂಗೀಕಾರ; ವಿಪಕ್ಷಗಳ ಆಕ್ರೋಶ

Date:

ದ್ವೇಷ ಭಾಷಣಕ್ಕೆ ತಡೆ ಹಾಕುವ ನಿಟ್ಟಿನಲ್ಲಿ “ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ( ಪ್ರತಿಬಂಧಕ) ವಿಧೇಯಕ” 2025 ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿತು. ವಿಪಕ್ಷಗಳ ವಿರೋಧ ಹಾಗೂ ಸದನದ ಬಾವಿಯಲ್ಲಿ ಧರಣಿ ನಡುವೆ ಹೆಚ್ಚಿನ ಚರ್ಚೆಗೆ ಅವಕಾಶ ಆಗದಂತೆ ಮಸೂದೆ ಅಂಗೀಕಾರಗೊಂಡಿತು.

ವಿಧೇಯಕದ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿ “ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನ ಸಮಾಜಕ್ಕೆ ನೋವಾಗುವ ರೀತಿಯಲ್ಲಿ ಮಾತುಗಳನ್ನು ಆಡುತ್ತಿದ್ದಾರೆ. ಇದರ ಪ್ರಮಾಣ ಜಾಸ್ತಿಯಾಗಿದೆ. ಅದರ ಪರಿಣಾಮವಾಗಿ ಸಮಾಜದಲ್ಲಿ ಕೊಲೆಗಳು, ಹೊಡೆದಾಟಗಳು ನಡೆದಿವೆ. ಇದನ್ನು ನಿಯಂತ್ರಣ ಮಾಡಬೇಕಾಗಿದೆ” ಎಂದರು.

ಸಾಮಾಜಿಕ, ರಾಜಕೀಯ ಸಭೆಗಳಲ್ಲಿ ಆಡುವ ದ್ವೇಷದ ಮಾತುಗಳು ಮತ್ತೊಂದು ಸಮುದಾಯದ ಮೇಲೆ ಪರಿಣಾಮ ಬೀರುತ್ತಿದೆ. ದ್ವೇಷ ಭಾಷಣದಲ್ಲಿ ಮತ್ತೊಂದು ಸಮುದಾಯದ ಬಗ್ಗೆ ಕೆಟ್ಟ ಮಾತುಗಳನ್ನು ಆಡಲಾಗಿದೆ. ದ್ವೇಷ ಭಾಷಣ ಮಾಡುವ ವ್ಯಕ್ತಿಗಳಿಗೆ ಎಷ್ಟು ದಿನ ನಿರ್ಬಂಧ ಹೇರಲು ಸಾಧ್ಯ? ಹೀಗಾಗಿ ಕಾನೂನು ತರಲಾಗಿದೆ ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹತ್ತು ವರ್ಷದ ಬದಲಾಗಿ 7 ವರ್ಷ
ದ್ವೇಷ ಭಾಷಣ ಪುನರಾವರ್ತನೆಗೆ ಗರಿಷ್ಠ ಶಿಕ್ಷೆ 10 ವರ್ಷದ ಬದಲಾಗಿ 7 ವರ್ಷ ಜೈಲು ಶಿಕ್ಷೆ ಎಂದು ತಿದ್ದುಪಡಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು.

ಈಗಾಗಲೇ ಮುದ್ರಿತ ಪುಸ್ತಕಗಳಿಗೂ ಅನ್ವಯ!
ಈಗಾಗಲೇ ಮುದ್ರಿತವಾಗಿರುವ ಪುಸ್ತಕ, ಗ್ರಂಥದಲ್ಲಿ ದ್ವೇಷದ ಮಾತುಗಳು ಇವೆ ಎಂದಾದರೆ ಏನು ಕ್ರಮ? ಎಂದು ಸುನೀಲ್ ಕುಮಾರ್ ಪ್ರಶ್ನಿಸಿದರು. ಇದಕ್ಕೆ ಸ್ಪಷ್ಟನೆ ಕೊಟ್ಟ ಪರಮೇಶ್ವರ್, “ಹಳೆ ಪುಸ್ತಕದಲ್ಲಿ ಇಂತಹ ಅಂಶ ಇದ್ದರೂ ಅದು ಕೂಡಾ ಈ ಕಾನೂನಿನ ವ್ಯಾಪ್ತಿಯಲ್ಲಿ ಬರಲಿದೆ. ಅಂತವನ್ನು ಬ್ಯಾನ್ ಮಾಡುವ ಪ್ರಕ್ರಿಯೆಗೆ ಅವಕಾಶ ಇದೆ” ಎಂದು ವಿವರಿಸಿದರು.

ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ!
ವಿಧೇಯಕದ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, “75 ವರ್ಷದ ಹಿಂದೆ ಯಾವ ತಜ್ಞರಿಗೆ ಬಾರದ ಆಲೋಚನೆ ನಮ್ಮ ಗೃಹ ಸಚಿವರಿಗೆ ಏಕೆ ಬಂತು? ರಾಜಕೀಯ ದ್ವೇಷ ತೀರಿಸಿಕೊಳ್ಳಲು ಇದನ್ನು ಬಳಕೆ ಮಾಡುವಂತಹ ಅವಕಾಶ ಸಿಕ್ಕಂತಾಗಿದೆ”ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್ ಅಧಿಕಾರಿಗಳು ಹಿಟ್ಲರ್ ಆಗಲು ಅವಕಾಶ ಇದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಲಿದೆ. ಕಾರ್ಟೂನ್ ರಚಿಸಲು ಅವಕಾಶ ಇಲ್ಲದಂತಾಗುತ್ತದೆ. ಭ್ರಷ್ಟಾಚಾರದಂತಹ ಗಂಭೀರ ಆರೋಪ ಸುದ್ದಿ ಮಾಡಿದರೆ ಮಾಧ್ಯಮದ ಪ್ರತಿನಿಧಿಗಳು ಮೊದಲೇ ಜಾಮೀನು ಪಡೆಯುವಂತಹ ಸ್ಥಿತಿ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ವಿಧೇಯಕ ಜಾರಿಗೆ ತರುವ ಉದ್ದೇಶ ಓಟ್ ಬ್ಯಾಂಕ್ ರಾಜಕಾರಣವಾಗಿದೆ. ತುರ್ತುಪರಿಸ್ಥಿತಿ ಜಾರಿಗೆ ತಂದವರಿಂದ ಇನ್ನೇನು ಬಯಸಲು ಸಾಧ್ಯ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನೇಕೆ ಮಾಡುತ್ತಿಲ್ಲ?

ವಿಧೇಯಕದಲ್ಲಿ ಏನಿದೆ?
ದ್ವೇಷ ಭಾಷಣ ಪ್ರಸರಣೆ, ಪ್ರಕಟಣೆ, ಪ್ರಚಾರ ತಡೆಯಲು ವಿಧೇಯಕ ತರಲಾಗಿದೆ.

ನಿರ್ದಿಷ್ಟ ವ್ಯಕ್ತಿ, ಸಮೂಹ, ಸಂಸ್ಥೆಗಳ ವಿರುದ್ಧ ದ್ವೇಷ ಹುಟ್ಟಿಸುವ ಅಪರಾಧಗಳ ತಡೆಗೆ ವಿಧೇಯಕದಲ್ಲಿ ಅವಕಾಶ.
ಮೊದಲ ಬಾರಿಗೆ ದ್ವೇಷ ಭಾಷಣ, ದ್ವೇಷ ಅಪರಾಧಗಳಿಗೆ ಕನಿಷ್ಟ 1 ವರ್ಷ, ಗರಿಷ್ಟ 7 ವರ್ಷದವರೆಗೆ ಜೈಲು, 50 ಸಾವಿರ ರೂ ದಂಡ.

ಅಪರಾಧ ಪುನರಾವರ್ತನೆ ಆದರೆ ಕನಿಷ್ಟ 2 ವರ್ಷದಿಂದ ಗರಿಷ್ಠ 7 ವರ್ಷದ ವರೆಗೆ ಜೈಲು ಶಿಕ್ಷೆ, 1 ಲಕ್ಷ ರೂ ದಂಡ
ದ್ವೇಷ ಭಾಷಣ ಮಾಡಿ ಕೇಸ್ ಬಿದ್ದರೆ ಅದು ಜಾಮೀನು ರಹಿತ ಪ್ರಕರಣವಾಗಲಿದೆ.

ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟರ ಮೂಲಕ ದ್ವೇಷ ಭಾಷಣಗಳ ವಿಚಾರಣೆಗೆ ಅವಕಾಶ.

ದ್ವೇಷ ಭಾಷಣಗಳ ಪ್ರಕರಣಗಳನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅಥವಾ ಉಪಪೊಲೀಸ್ ವರಿಷ್ಠಾಧಿಕಾರಿ ದರ್ಜೆಗಿಂತ ಕಡಿಮೆ ಇಲ್ಲಸ ಯಾರೇ ಪೊಲೀಸ್ ಅಧಿಕಾರಿಯು ಮಾಹಿತಿ ಸ್ವೀಕರಿಸಿದರೆ ವಿಚಾರಣೆ ಮಾಡಿ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಅವಕಾಶ.

ಈ ಕಾಯ್ದೆಯಡಿ ದ್ವೇಷ ಭಾಷಣಗಳಿಗೆ ನೊಂದಾಯಿತ ಅಥವಾ ನೊಂದಾಯಿತವಲ್ಲದ ಸಂಘ ಸಂಸ್ಥೆಗಳೂ ಹೊಣೆಗಾರರಾಗಿರುತ್ತಾರೆ ಎಂದು ಉಲ್ಲೇಖ.

ದ್ವೇಷ ಭಾಷಣಗಳ ಕಂಟೆಂಟ್ ಗಳನ್ನು ಡೊಮೈನ್ ನಿಂದ ಬ್ಲಾಕ್ ಮಾಡುವ ಅಥವಾ ತೆಗೆದು ಹಾಕುವ ಅಧಿಕಾರ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...