ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸ್ಥಳ ಕೇಳಿ ಸಿಎಂಗೆ ಪತ್ರ ಬರೆದ ಎಚ್ ಡಿ ಕುಮಾರಸ್ವಾಮಿ

Date:

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವುದಕ್ಕೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಇಬ್ಬರಿಗೂ ಪತ್ರ ಬರೆದಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಮಂಡ್ಯದಲ್ಲಿ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆ ಮಾಡಬೇಕೆನ್ನುವ ಬೇಡಿಕೆ ಇದೆ. ನಾನು ಸಂಸದನಾಗಿ ಒಂದೂವರೆ ವರ್ಷ ಆಯಿತು. ಕೈಗಾರಿಕೆಗೆ ಜಾಗ ಕೊಡಿ ಎಂದು ಡಿಸಿ ಅವರಿಗೆ ಪತ್ರ ಬರೆದಿದ್ದೇನೆ. ಪಾಪ.. ಅವರು ಜಾಗ ಹುಡುಕುತ್ತಲೇ ಇದ್ದಾರೆ. ಜಿಲ್ಲಾಧಿಕಾರಿಗಳು ಜಾಗ ಹುಡುಕಿದ್ರು ಸಿಕ್ಕಿಲ್ಲ” ಎಂದರು.

“ರಾಜ್ಯದಲ್ಲಿ ಕೇಂದ್ರದಿಂದ ಏನೇ ಕೆಲಸ ಆಗಬೇಕಿದ್ದರೂ ರಾಜ್ಯದ ಸಹಕಾರ ಬೇಕಿದೆ. ಸಹಕಾರ ಸಿಗುತ್ತದೆ ಎಂಬ ನಂಬಿಕೆ ಇದೆ. ಮಂಡ್ಯ ಶಾಸಕರು ಜಾಗ ಕೊಡುವುದಾದರೆ ಕೊಡಲಿ. ಸರಕಾರದಿಂದ ಸ್ವಾಧೀನ ಮಾಡಿಸಿ ನಮಗೆ ಕೊಡಲಿ. ಎಲ್ಲರೂ ಸೇರಿ ಕೈಗಾರಿಕೆ ತಂದು ಉದ್ಯೋಗ ಸೃಷ್ಟಿ ಮಾಡೋಣ. ಮಂಡ್ಯಕ್ಕೆ ಏನು ತಂದ್ರಿ ಅಂತ ಕೇಳುವವರು ನೀವು ಜಿಲ್ಲೆಗೆ ಏನು ತಂದಿದ್ದೀರಾ ಹೇಳಿ. ಚಿಲ್ಲರೆ ರಾಜಕೀಯ ಮಾಡುವುದನ್ನು ನಿಲ್ಲಿಸಲಿ. ಕಾರ್ಖಾನೆ ಸ್ಥಾಪನೆ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ಅವರು, ಸಚಿವ ಎಂ.ಬಿ. ಪಾಟೀಲ್ ಅವರಿಗೆ ಪತ್ರ ಬರೆದಿದ್ದೇನೆ. ಅವರಿಂದ ಏನು ಪ್ರತಿಕ್ರಿಯೆ ಬರುತ್ತದೋ ನೋಡೋಣ” ಎಂದು ಸಚಿವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕರ ಕಷ್ಟ ನೋಡಲಾಗದೆ ವೇತನಕ್ಕೆ ಹಣ ನೀಡುತ್ತಿದ್ದೇನೆ

“ಮೈಷುಗರ್ ಶಾಲೆ ಶಿಕ್ಷಕರಿಗೆ ಸಂಬಳ ಕೊಡುವ ಯೋಗ್ಯತೆ ಇಲ್ಲ ಈ ಸರ್ಕಾರಕ್ಕೆ. ಸಂಬಳ ಕೊಡಲು ದುಡ್ಡಿಲ್ಲ ಎಂದರೆ ಈ ಸರ್ಕಾರದಲ್ಲಿ ದುಡ್ಡಿಲ್ಲ ಅಂತ ಆಯ್ತು. ನಾನು ಸಿಎಂ ಆಗಿದ್ದಾಗ ಕಾರ್ಖಾನೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಬಜೆಟ್ ನಾಲ್ಕು ₹100 ಕೋಟಿ ಇಟ್ಟಿದ್ದೆ‌. ಆ ದುಡ್ಡು ಎಲ್ಲಿ ಹೋಯಿತು? ಈಗ ನೋಡಿದರೆ ಕೀಳು ಮಟ್ಟದಲ್ಲಿ ಮಾತನಾಡುತ್ತೀರಾ?” ಎಂದು ಸಚಿವರು ತರಾಟೆಗೆ ತೆಗೆದುಕೊಂಡರು.

ಮಂಡ್ಯ ಕೃಷಿ ವಿವಿ ತಂದಿದ್ದೇವೆ, ಸಂತೋಷ. ಐದು ವರ್ಷ ಬಿಟ್ಟು ಮಾತಾಡೋಣ. ಬೆಂಗಳೂರು ನಗರ ವಿವಿಯಲ್ಲಿ 161 ಪ್ರಾಧ್ಯಾಪಕರು ಇರಬೇಕು. ಆದರೆ ಈಗ ಕೇವಲ 9 ಜನ ಪ್ರಾಧ್ಯಾಪಕರು ಇದ್ದಾರೆ. ರಾಜ್ಯದಲ್ಲಿ 65 ಸಾವಿರ ಶಿಕ್ಷಕರ ಕೊರತೆ ಇದೆ. ಇವರು ಯಾರನ್ನು ನೇಮಕ ಮಾಡುವ ಯೋಗ್ಯತೆ ಇಲ್ಲ ಎಂದು ಸಚಿವರು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...