ಎಚ್‌ಡಿಕೆ – ಎಡಿಜಿಪಿ ವಾಗ್ಯುದ್ಧ; ಕಾಂಗ್ರೆಸ್‌ಗೆ ಕುಮಾರಸ್ವಾಮಿ ಸವಾಲು

Date:

ಬೆಂಗಳೂರಿನ ಗಂಗೇನಹಳ್ಳಿಯ 1.11 ಎಕರೆ ಭೂಮಿ ಅಕ್ರಮ ಡಿನೋಟಿಫಿಕೇಷನ್ ಹಗರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಮತ್ತು ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಸ್‌ಐಟಿ ಎಡಿಜಿಪಿ ಚಂದ್ರಶೇಖರ್‌ ನಡುವಿನ ವಾಗ್ಯುದ್ಧ ಮುನ್ನೆಲೆಯಲ್ಲಿದೆ. ಇಬ್ಬರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. “ನಾನು ಆರೋಪಿಯೇ ಇರಬಹುದು. ಆದರೆ, ಲೋಕಾಯುಕ್ತ ಎಸ್‌ಐಟಿ ಎಡಿಜಿಪಿ ಎಂ ಚಂದ್ರಶೇಖರ್ ಸರಣಿ ಅಪರಾಧಗಳನ್ನು ಎಸಗಿದ್ದಾರೆ. ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್‌” ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಅಕ್ರಮ ಡಿನೋಟಿಫಿಕೇಷನ್‌ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಎಚ್‌.ಡಿ ಕುಮಾರಸ್ವಾಮಿ ಅವರನ್ನು ಶುಕ್ರವಾರ ವಿಚಾರಣೆ ಒಳಪಡಿಸಿದ್ದರು. ವಿಚಾರಣೆ ಎದುರಿಸಿದ್ದ ಕುಮಾರಸ್ವಾಮಿ ಶನಿವಾರ ಪ್ರತಿಕಾಗೋಷ್ಠಿ ನಡೆಸಿದ್ದರು. ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸುತ್ತಿರುವ ಎಡಿಜಿಪಿ ಚಂದ್ರಶೇಖರ್ ವಿರುದ್ಧವೇ ಆರೋಪ ಮಾಡಿದ್ದರು. “ಚಂದ್ರಶೇಖರ್ ಹಿನ್ನೆಲೆ ಗೊತ್ತಾ? ಈ ವ್ಯಕ್ತಿ ಹಿನ್ನೆಲೆ ಹುಡುಕಿ ಹೊರಟಾಗ ಗೊತ್ತಾಗಿದ್ದು, ಹಿಮಾಚಲ ಪ್ರದೇಶದ ಕೇಡರ್​​ನಲ್ಲಿ ಇರಬೇಕಾದವರು. ಯುಪಿಎಸ್​ಸಿಯಲ್ಲಿ ಆಯ್ಕೆಯಾಗಿ ಹಿಮಾಚಲದಲ್ಲಿ ಕೆಲಸ ಮಾಡಬೇಕಾದವನು. ಮಾನ್ಯತಾ ಟೆಕ್​ ಪಾರ್ಕ್​ ಮುಂಭಾಗ 38 ಮಹಡಿಗಳ ಬಿಲ್ಡಿಂಗ್ಅನ್ನು ತನ್ನ ಹೆಂಡತಿ ಹೆಸರಿನಲ್ಲಿ ಕಟ್ಟುತ್ತಿದ್ದಾರೆ. ಅದು ಕೂಡ ರಾಜಕಾಲುವೆ ಜಾಗದಲ್ಲಿ” ಎಂದು ಆರೋಪಿಸಿದ್ದರು.

ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಚಂದ್ರಶೇಖರ್, “ಹಂದಿಗಳ ಜೊತೆ ಗುದ್ದಾಡುವುದಿಲ್ಲ. ಕರ್ತವ್ಯ ನಿರ್ವಹಿಸುವ ವೇಳೆ ಅಪರಾಧಿಗಳು ಮತ್ತು ಆರೋಪಿಗಳನ್ನು ಎದುರಿಸುವುದನ್ನು ನಾವು ತಪ್ಪಿಸಲು ಸಾಧ್ಯವಿಲ್ಲ. ಯಾವ ಕ್ರಿಮಿನಲ್​, ಯಾವ ಆರೋಪಿಗಳ ಜೊತೆ ವಿರೋಧ ಕಟ್ಟಿಕೊಳ್ಳುತ್ತೇವೋ ಅವರು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ” ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಂದ್ರಶೇಖರ್ ಜೊತೆಗಿನ ತಮ್ಮ ಕಿತ್ತಾಟದಲ್ಲಿ ಕಾಂಗ್ರೆಸ್‌ ಸಚಿವರನ್ನೂ ಕುಮಾರಸ್ವಾಮಿ ಎಳೆದು ತಂದಿದ್ದಾರೆ. “ಅಪ್ರಬುದ್ಧ ಅವಿವೇಕಿಗಳಿಗೆ ಏನು ಹೇಳುವುದು? ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಹುದ್ದೆಯಲ್ಲಿರುವ ಕಳಂಕಿತ, ಕ್ರಿಮಿನಲ್ ಪ್ರವೃತ್ತಿಯ ಅಧಿಕಾರಿ ನನ್ನ ಸರ್ಕಾರದಲ್ಲಿಯೂ ಕೆಲಸ ಮಾಡಿದ್ದರು, ನಿಜ. ನಾನು ಇಲ್ಲವೆನ್ನುವುದಿಲ್ಲ. ಆದರೆ, ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ. ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ” ಎಂದಿದ್ದಾರೆ. “ನಿಮಗೆ ಅಂತಹ ಎದೆಗಾರಿಕೆ ಇದೆಯಾ” ಎಂದು ಕಾಂಗ್ರೆಸ್ ​ಸಚಿವರನ್ನು ಪ್ರಶ್ನಿಸಿದ್ದಾರೆ.

“ಹೀಗೆಯೇ ಪತ್ರ ಬರಿ ಎಂದು ಹೇಳಿಕೊಟ್ಟು ಅಧಿಕಾರಿಯಿಂದ ಪತ್ರ ಬರೆಸಲಾಗಿದೆ. ಆ ಪತ್ರ ಬರೆಸಿದವರು ಯಾರು ಎಂಬುದು ನನಗೆ ಗೊತ್ತಾಗಿದೆ. ಕೆಪಿಸಿಸಿ ಕಚೇರಿಯಿಂದಲೇ ಪತ್ರ ಬಹಿರಂಗವಾಗಿದೆ ಎಂಬುದೂ ಗೊತ್ತಿದೆ. ಕಳಂಕಿತ ಅಧಿಕಾರಿಗಳಿಂದ ರಕ್ಷಣೆ ಪಡೆದುಕೊಳ್ಳುವ ನಿಮ್ಮ (ಕಾಂಗ್ರೆಸ್‌) ನಿಕೃಷ್ಟ ಸ್ಥಿತಿ ನನಗೆ ಬಂದಿಲ್ಲ. ಬರುವುದೂ ಇಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...