ಹೃದಯಾಘಾತಕ್ಕೆ ತ್ವರಿತ ಚಿಕಿತ್ಸೆ | ಶೀಘ್ರದಲ್ಲೇ ‘ಸ್ಟೆಮಿ’ ಯೋಜನೆ ಜಾರಿಗೆ ಸರ್ಕಾರ ಚಿಂತನೆ

Date:

ಹೃದಯಾಘಾತ ಸಂಭವಿಸಿದ ನಿಗದಿತ ಅವಧಿಯೊಳಗೆ ಚಿಕಿತ್ಸೆ ಒದಗಿಸಲು ‘ಸ್ಟೆಮಿ’ ಯೋಜನೆಯನ್ನು (ಹೃದಯ ಸ್ನಾಯುವಿನ ಸೋಂಕು ನಿವಾರಣೆ) ಶೀಘ್ರದಲ್ಲೇ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ವಿಶ್ವ ಹೃದಯದ ದಿನ ಇಂದು (ಸೆ.29) ವಾರ್ತಾ ಇಲಾಖೆ ಟ್ವೀಟ್‌ ಮಾಹಿತಿ ಹಂಚಿಕೊಂಡಿದ್ದು, “ಹೃದಯದ ಕಾಳಜಿಗೆ ಸ್ಟೆಮಿ ಯೋಜನೆ ಮೂಲಕ ರಾಜ್ಯದಾದ್ಯಂತ ಬಸ್‌ ನಿಲ್ದಾಣಗಳು ಸೇರಿ ಸಾರ್ವಜನಿಕ ಸ್ಥಳಗಳಲ್ಲಿ “ಅಟೊಮೇಟೆಡ್‌ ಎಕ್ಸ್‌ಟರ್ನಲ್‌ ಡಿಫೈಬ್ರಿಲ್ಲೇಟರ್ಸ್‌” (ಎಇಡಿ) ಸಾಧನಗಳನ್ನು ಶೀಘ್ರದಲ್ಲೇ ಅಳವಡಿಸಲಿದೆ” ಎಂದು ತಿಳಿಸಿದೆ.

ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್‌ ಮಾಡಿ, “ಸ್ವಸ್ಥ ಹೃದಯ ಆರೋಗ್ಯಯುತ ಬದುಕಿನ ಕೀಲಿಕೈ. ಆರೋಗ್ಯಕ್ಕೆ ಪುಷ್ಟಿ ನೀಡುವಂತಹ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳಿ, ಮಾನಸಿಕ ಮತ್ತು ದೈಹಿಕ ಒತ್ತಡಗಳ ನಿಯಂತ್ರಣಕ್ಕಾಗಿ ಇರುವ ಸರಳ ಮಾರ್ಗಗಳನ್ನು ಅನುಸರಿಸಿ, ನಿಯಮಿತವಾಗಿ ಹೃದಯ ತಪಾಸಣೆ ಮಾಡಿಸಿ. ನೀವು ನಿಮ್ಮ ಹೃದಯದ ಕಾಳಜಿ ವಹಿಸಿದರೆ, ಹೃದಯ ನಿಮ್ಮ ದೇಹದ ಕಾಳಜಿ ವಹಿಸುತ್ತದೆ. ಮರೆಯದಿರಿ, ಹೃದಯ ಹಗುರಾಗಿದ್ದರೆ ಬದುಕು ಸುಂದರ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ‘ಸ್ಟೆಮಿ’ ಯೋಜನೆ

ಹೃದಯಾಘಾತ ಸಂಭವಿಸಿದ ಒಂದು ಗಂಟೆಯೊಳಗೆ ಅಗತ್ಯ ಚಿಕಿತ್ಸೆ ಒದಗಿಸಿ, ವ್ಯಕ್ತಿಯನ್ನು ಪ್ರಾಣಾಪಾಯದಿಂದ ಪಾರು ಮಾಡಲು ಆರೋಗ್ಯ ಇಲಾಖೆ ರೂಪಿಸಿರುವ ಯೋಜನೆ ಹೆಸರು ಸ್ಟೆಮಿ. ಇದು ಪ್ರಾಯೋಗಿಕವಾಗಿ ಯಶಸ್ವಿಯಾಗಿದ್ದು, ಶೀಘ್ರದಲ್ಲಿಯೇ ರಾಜ್ಯದಾದ್ಯಂತ ಜಾರಿ ಆಗಲಿದೆ.

ಇತ್ತೀಚೆಗೆ ಹಠಾತ್ ಹೃದಯಾಘಾತದಿಂದ ನಿಧನರಾಗುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಆರೋಗ್ಯವಂತ ವ್ಯಕ್ತಿಗಳು ಸಹ 30-40 ವರ್ಷಗಳ ಆಸುಪಾಸಿನಲ್ಲಿಯೇ ಸಾವಿಗೀಡಾಗುವ ಪ್ರಕರಣಗಳು ವರದಿ ಆಗುತ್ತಿವೆ. ಇದಕ್ಕೆ ನಟ ಪುನೀತ್ ರಾಜ್‌ಕುಮಾರ್, ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಉದಾಹರಣೆ. ಇಂತಹ ಸಾವಿನ ಪ್ರಕರಣಗಳ ಪ್ರಮಾಣ ತಗ್ಗಿಸಲು ಮುಂದಾಗಿರುವ ಇಲಾಖೆ, ಪುನೀತ್ ರಾಜ್‌ಕುಮಾರ್ ಅವರ ಹೆಸರಿನಲ್ಲಿಯೇ ಹೃದಯ ಚಿಕಿತ್ಸೆಗೆ ಯೋಜನೆ ರೂಪಿಸಿದೆ.

ವ್ಯಕ್ತಿಗೆ ಹೃದಯಾಘಾತ ಸಂಭವಿಸಿದ ಒಂದು ಗಂಟೆ ನಿರ್ಣಾಯಕವಾಗಿರುತ್ತದೆ. ಈ ಅವಧಿಯಲ್ಲಿ ತಾಲ್ಲೂಕು ಮಟ್ಟದಲ್ಲಿಯೇ ಚಿಕಿತ್ಸೆ ಒದಗಿಸಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ‘ಸ್ಟೆಮಿ’ (ಹೃದಯ ಸ್ನಾಯುವಿನ ಸೋಂಕು ನಿವಾರಣೆ) ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ 10 ಜಿಲ್ಲಾ ಆಸ್ಪತ್ರೆಗಳು ಸೇರಿ 45 ಆರೋಗ್ಯ ಕೇಂದ್ರಗಳಲ್ಲಿ ಈಗಾಗಲೇ ಕಾರ್ಯಗತಗೊಳಿಸಲಾಗಿದೆ.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಬೆಂಗಳೂರು, ಮೈಸೂರು ಹಾಗೂ ಕಲಬುರಗಿ ಘಟಕವನ್ನು ಕಾರ್ಯಾಚರಣೆಯ ಕೇಂದ್ರಗಳನ್ನಾಗಿ ಬಳಸಿಕೊಂಡು, ಸೇವೆ ನೀಡಲಾಗಿದೆ. ‘ಆಟೊಮೇಟೆಡ್ ಎಕ್ಸ್‌ಟರ್ನಲ್ ಡಿಫೈಬ್ರಿಲ್ಲೇಟರ್ಸ್ (ಎಇಡಿ)’ ಸಾಧನವು ನಿಂತುಹೋದ ಎದೆ ಬಡಿತವನ್ನು ಪುನರಾರಂಭಿಸಲು ಸಹಕಾರಿಯಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...