ಟೊಮೆಟೊ ಬೆಲೆಯಲ್ಲಿ ಭಾರೀ ಕುಸಿತ; ರೈತರು ಕಂಗಾಲು

Date:

ಕಳೆದ ಎರಡು ತಿಂಗಳುಗಳ ಹಿಂದೆ ಚಿನ್ನದ ಬೆಲೆ ಕಂಡಿದ್ದ ಟೊಮೆಟೊ ದರ ಈಗ ಭಾರೀ ಕುಸಿತ ಕಂಡಿದೆ. ಜುಲೈ-ಆಗಸ್ಟ್‌ನಲ್ಲಿ 2.5 ಸಾವಿರ ರೂ.ಗೆ ಮಾರಾಟವಾಗಿದ್ದ 15 ಕೆ.ಜಿ ಬಾಕ್ಸ್‌ ಟೊಮೆಟೊ, ಇದೀಗ 50 ರಿಂದ 100 ರೂ.ಗೆ ಕುಸಿದಿದೆ. ಟೊಮೆಟೊ ಬೆಳೆದಿದ್ದ ರೈತರು ಕಂಗಾಲಾಗಿದ್ದಾರೆ.

ಟೊಮೆಟೊ ಬೆಲೆ ಏರಿಕೆಯಾಗಿದ್ದ ಸಂದರ್ಭದಲ್ಲಿ ಹಲವಾರು ರೈತರು ಟೊಮೆಟೊ ಬೆಳೆಯತ್ತ ಮುಖಮಾಡಿದ್ದರು. ಟೊಮೆಟೊ ಬಿತ್ತನೆಯೂ ಭಾರೀ ಪ್ರಮಾಣದಲ್ಲಿ ನಡೆದಿತ್ತು. ಆದರೆ, ಆ ಬೆಳೆ ರೈತರ ಕೈಸೇರುವಷ್ಟದಲ್ಲಿ ಬೆಲೆ ಕುಸಿತ ಕಂಡಿದೆ.

ಜುಲೈ ತಿಂಗಳಿನಲ್ಲಿ ಬೇಡಿಕೆಗೆ ತಕ್ಕಷ್ಟು ಟೊಮೆಟೊ ಧಾರಣೆ ಇಲ್ಲದೆ, ಬೆಲೆ ಏರಿಕೆಯಾಗಿತ್ತು. ನೆರೆಯ ರಾಷ್ಟ್ರ ನೇಪಾಳದಿಂದ ಟೊಮೆಟೊ ಆಮದು ಮಾಡಿಕೊಳ್ಳಲಾಗಿತ್ತು. ಇದೀಗ, ರಾಜ್ಯದಲ್ಲಿ ಟೊಮೆಟೊ ಇಳುವರಿ ಹೆಚ್ಚಾಗಿದೆ. ಜೊತೆಗೆ, ನೆರೆಯ ರಾಜ್ಯಗಳಿಂದಲೂ ರಾಜ್ಯದ ಮಾರುಕಟ್ಟೆಗೆ ಟೊಮೆಟೊ ಬಂದಿದೆ. ಹೀಗಾಗಿ, ಟೊಮೆಟೊ ಬೆಲೆಯಲ್ಲಿ ಭಾರೀ ಕುಸಿತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೊಮೆಟೊ ಬೆಳೆಯಲು ಎಕರೆಗೆ 1.5 ಲಕ್ಷದಿಂದ 2 ಲಕ್ಷ ರೂ.ವರೆಗೆ ಖರ್ಚಾಗುತ್ತದೆ. ಆದರೆ, ಬೆಲೆ ಕುಸಿತ ಕಂಡಿದ್ದು, ಹಾಕಿರುವ ಬಂಡವಾಳವೂ ಕೈಸೇರುವುದೋ-ಇಲ್ಲವೋ ಎಂಬ ಆತಂಕ ರೈತರಲ್ಲಿ ಮನೆ ಮಾಡಿದೆ.

ಈದಿನ.ಕಾಮ್ ಜೊತೆ ಮಾತನಾಡಿದ ಚನ್ನರಾಯಪಟ್ಟಣ ತಾಲೂಕಿನ ರೈತ ಪ್ರಭಾಕರ್, “ಸಾಲ ಮಾಡಿ 2 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದೆ. ಉತ್ತಮ ಇಳುವರಿಯೂ ಬಂದಿದೆ. ಆದರೆ, ಬೆಲೆ ಕುಸಿತದಿಂದಾಗಿ ಮಾಡಿದ ಸಾಲ ತೀರಿಸಲು ಆಗುತ್ತದೋ-ಇಲ್ಲವೋ ಗೊತ್ತಿಲ್ಲ. ಟೊಮೆಟೊವನ್ನು ಕೊಯ್ಯಲು ಯೋಚಿಸುವ ಪರಿಸ್ಥಿತಿ ಇದೆ. ಟೊಮೆಟೊ ಕೊಯ್ದು, ಮಾರುಕಟ್ಟೆ ಸಾಗಿಸಲು ಮತ್ತಷ್ಟು ವೆಚ್ಚವಾಗುತ್ತದೆ. ಹೀಗಾಗಿ, ಏನು ಮಾಡಬೇಕೆಂಬುದೇ ತೋಚುತ್ತಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...