ಕರಾವಳಿ-ಮಲೆನಾಡಿನಲ್ಲಿ ಮಳೆ ಅಬ್ಬರ; ಹಲವು ರಸ್ತೆಗಳಲ್ಲಿ ಸಂಚಾರ ಬಂದ್‌

Date:

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟಕ್ಕೆ ಹೆದ್ದಾರಿ ಬದಿಯ ಹಲವು ಗುಡ್ಡಗಳು ಕುಸಿದು ಬೀಳುತ್ತಿದ್ದು, ನಾನಾ ಭಾಗಗಳಲ್ಲಿ ಸಂಚಾರ ಬಂದ್‌ ಆಗಿದೆ. ಹಲವು ಪ್ರದೇಶಗಳಿಗೆ ಸಂಪರ್ಕ ಕಡಿತವಾಗಿವೆ. ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸಿವೆ. ಪ್ರಮುಖ ಪಟ್ಟಣಗಳಿಗೆ ಸಂಪರ್ಕ ಒದಗಿಸುವ ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವ್ಯಾಪಾರ-ವಹಿವಾಟು, ಪ್ರವಾಸಗಳು ಮೊಟಕುಗೊಂಡಿವೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಶಿರೂರಿನ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದಿದ್ದು, ಭಟ್ಕಳ-ಬೈಂದೂರು ನಡುವಿನ ಸಂಪರ್ಕ ಕಡಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯನ್ನು ಬಂದ್‌ ಮಾಡಲಾಗಿದೆ. ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಇನ್ನೂ ಕೆಲ ದಿನಗಳ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆಗಳಿಲ್ಲ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಗಿಹೊಸಳ್ಳಿ ಬಳಿ ಕೂಡ ರಾಷ್ಟ್ರೀಯ ಹೆದ್ದಾರಿ 766(ಇ)ರಲ್ಲಿ ಗುಡ್ಡು ಕುಸಿದಿದ್ದು, ಸಿರಸಿ ಮತ್ತು ಕುಮಟಾ ನಡುವಿನ ಸಂಪರ್ಕ ಕಡಿತಗೊಂಡಿದೆ. ವಾಹನ ಸವಾರರು ಸಿದ್ದಾಪುರ ಮಾರ್ಗವಾಗಿ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಪ್ರಮುಖ ಪ್ರವಾಸಿ ತಾಣವಾದ ಯಾಣಕ್ಕೂ ಕೂಡ ಸಂಪರ್ಕ ಕಡಿತವಾಗಿದ್ದು, ಪ್ರವಾಸಿಗರ ಕುಮಟಾದಿಂದ ಮಾತ್ರವೇ ಯಾಣಕ್ಕೆ ತೆರಳುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿಯೂ ನಡೆಯುತ್ತಿದ್ದು, ಶಿರಾಡಿ ಘಾಟ್‌ನ ಪರಿಸ್ಥಿತಿ ಅಸ್ಥವ್ಯಸ್ಥವಾಗಿದೆ. ಶಿರಾಡಿ ಘಾಟ್‌ನಲ್ಲಿ ಸಂಚಾರ ಬಹುತೇಕ ಕಡಿತಗೊಂಡಿದೆ. ಜೊತೆಗೆ, ಸಂಪಾಜೆ ಬಳಿಯ ಘಾಟ್‌ನಲ್ಲಿಯೂ ಭೂಕುಸಿತ ಸಂಭವಿಸಿದೆ. ಬೆಂಗಳೂರು-ಮಂಗಳೂರು ನಡುವಿನ ಸಂಚಾರಕ್ಕೆ ಚಾರ್ಮಾಡಿ ಘಾಟ್‌ ಮಾರ್ಗವನ್ನಷ್ಟೇ ಬಳಸಬೇಕಾಗಿದೆ.

ಗುಡ್ಡ ಕುಸಿತ

ಇನ್ನು, ಮೈಸೂರು ಜಿಲ್ಲೆಯಲ್ಲಿ ಕಬಿನಿ ನದಿ ಉಕ್ಕಿ ಹರಿಯುತ್ತಿದ್ದು, ಕಬಿನಿ ಜಲಾಶಯವೂ ಬಹುತೇಕ ತುಂಬಿದೆ. ಪರಿಣಾಮ, ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ್ದು, ಮೈಸೂರಿನಿಂದ ತಮಿಳುನಾಡು ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 ನಂಜನಗೂಡಿನ ಮಲ್ಲನ ಮೂಲೆ ಮಠದ ಬಳಿ ಜಲಾವೃತಗೊಂಡಿದೆ. ಪರಿಣಾಮ, ವಾಹನ ಸಂಚಾರ ಸ್ಥಗಿತಗೊಂಡಿದ್ದು, ಮೈಸೂರಿನಿಂದ ಎರಡೂ ರಾಜ್ಯಗಳಿಗೆ ಸಂಪರ್ಕ ಕಡಿತಗೊಂಡಿದೆ.

ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಮಡಿಕೇರಿ-ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ಪ್ರವಾಹ ಉಂಟಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಹೊರನಾಡು ನಡುವಿನ ರಸ್ತೆ, ಕಳಸ-ಹೊರನಾಡು ರಸ್ತೆ, ಶೃಂಗೇರಿ-ಕೊಪ್ಪ ರಸ್ತೆಗಳು ಅಲ್ಲಲ್ಲಿ ಜಲಾವೃತಗೊಂಡಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಶೃಂಗೇರಿಯಿಂದ ಹೊರನಾಡಿಗೆ ಹೋಗುವ ರಸ್ತೆ ಸಂಪೂರ್ಣ ಬಂದ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...