ಧರ್ಮಸ್ಥಳ | 13 ವರ್ಷದ ಹಿಂದೆ ಕಾಣೆಯಾದ ಹೇಮಲತಾ; ಎಸ್‌ಐಟಿ ಸೂಚನೆ ಬಳಿಕ ಪ್ರಕರಣ ದಾಖಲು

Date:

ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿಯೊಬ್ಬಳು ಕಾಣೆಯಾದ 13 ವರ್ಷಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.

2012 ರಲ್ಲಿ ಬಂಟ್ವಾಳ ತಾಲೂಕಿನ ಕವಲಮುದುರು ಎಂಬ ಗ್ರಾಮದ ನಿವಾಸಿ ನಾರಾಯಣ ದೇವಾಡಿಗ ಅವರ ಪುತ್ರಿ 17 ವರ್ಷದ ಹೇಮಾವತಿ ಆಲಿಯಾಸ್‌ ಹೇಮಲತಾ ಅವರನ್ನು ಅಂಗನವಾಡಿ ಕಾರ್ಯಕರ್ತೆ ವಾಸಂತಿ ಎಂಬಾಕೆ ಕರೆದೊಯ್ದಿರುತ್ತಾರೆ.

ವಾಸಂತಿ ಅವರು ಮನಗೆ ಮರಳಿರುತ್ತಾರೆ. ಆದರೆ ಹೇಮಲತಾ ಮನೆಗೆ ಮರಳುವುದೇ ಇಲ್ಲ. ಆಕೆಯ ಸಹೋದರ ನಿತಿನ್‌ ದೇವಾಡಿಗ ಅವರು ಬಿಎಲ್‌ ಆರ್‌ ಪೋಸ್ಟ್‌ ಗೆ ನೀಡಿರುವ ಸಂದರ್ಶನದಲ್ಲಿ ನನ್ನ ಸಹೋದರಿ ಕಾಣೆಯಾಗುತ್ತಿದ್ದಂತೆ ಕೂಡಲೇ 2012 ರಲ್ಲೇ ನಾವು ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ದಾಖಲಿಸಲು ಹೋದೆವು. ಆದರೆ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದರು. ಆಕೆಯನ್ನು ಹುಡುಕುವುದಾಗಿ ಹೇಳಿ ದೂರು ದಾಖಲಿಸಿಕೊಳ್ಳದೆ ನಮ್ಮನ್ನು ಕಳುಹಿಸಿದರು. ಆದರೆ ಇದುವರೆಗೂ ನನ್ನ ಸಹೋದರಿಯನ್ನು ಅವರು ಹುಡುಕಲೇ ಇಲ್ಲ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಸಂದರ್ಭದಲ್ಲಿ ವಾಸಂತಿ ನಮಗೆ ಹೇಮಲತಾ ನನ್ನ ಜತೆ ದೇವಸ್ಥಾನಕ್ಕೆ ಬರಲೇ ಇಲ್ಲ ಎಂದು ಸುಳ್ಳು ಹೇಳಿದಳು. ತನ್ನ ಜೀವನೋಪಾಯಕ್ಕೆ ಉದ್ಯೋಗ ಸಿಗಲಿದೆ ಎಂದು ಕೆಲಸ ಕಲಿಯಲು ನನ್ನ ಸಹೋದರಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಳು. ಈ ಹಿಂದೆಯೂ ವಾಸಂತಿ ನನ್ನ ಸಹೋದರಿಯನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು. ಆದರೆ ಎರಡನೇ ಬಾರಿ ಹೋದಾಗ ನನ್ನ ಸಹೋದರಿ ಮರಳಿ ಬರಲೇ ಇಲ್ಲ ಎಂದು ವಿವರಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್‌ಗಷ್ಟೇ ಅಲ್ಲ, ಸಮಾಜಕ್ಕೆ ಅರ್ಥವಾಗಿದೆಯೇ ಆರ್‌ಎಸ್‌ಎಸ್ ಅಜೆಂಡಾ?

ಪೊಲೀಸರು ದೂರು ದಾಖಲಿಸಿಕೊಳ್ಳಲೇ ಇಲ್ಲ. ನಾವು ಪ್ರಭಾವಿಗಳೂ ಅಲ್ಲ, ಆರ್ಥಿಕವಾಗಿ ಬಲಾಢ್ಯರಾಗಿರಲಿಲ್ಲ. ಧರ್ಮಸ್ಥಳದಲ್ಲಿ ಸಂಭವಿಸಿದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಶವಗಳನ್ನು ಹೂತು ಹಾಕಿರುವ ಪ್ರಕರಣ ಕುರಿತು ತನಿಖೆ ನಡೆಸಲು 2025ರ ಜುಲೈ 19 ರಂದು ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ ಐಟಿ) ರಚಿಸಿತು. ನನ್ನ ಸಹೋದರಿ ಹೇಮಲತಾ ಕಾಣೆಯಾಗಿರುವುದಾಗಿ ಎಸ್‌ ಐಟಿ ಗೆ ಮನವಿ ಸಲ್ಲಿಸಿದಾಗ ಅಧಿಕಾರಿಗಳು, ಸ್ಥಳೀಯ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಲು ಸೂಚಿಸಿದರು.

ಎಸ್‌ ಐಟಿ ನೀಡಿರುವ ಸೀಕೃತಿ ಪತ್ರವನ್ನು ತೋರಿಸಿದಾಗ ಪುಂಜಾಲಕಟ್ಟೆ ಪೊಲೀಸರು ಅಂತಿಮವಾಗಿ 2025 ರ ಆಗಸ್ಟ್‌ 14 ರಂದು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹೇಮಲತಾ ಅವರ ಮಾಹಿತಿ ಸಂಗ್ರಹಿಸಲು ಸ್ಥಳೀಯ ಪೊಲೀಸರು ಮೂರು ಬಾರಿ ದೇವಾಡಿಗ ಅವರ ಮನೆಗೆ ಭೇಟಿ ನೀಡಿದ್ದಾರೆ. ಪೊಲೀಸರು ವಾಸಂತಿ ಅವರ ಮನೆಗೂ ಭೇಟಿ ನೀಡಿದ್ದಾರೆ. ಮತ್ತೊಮ್ಮೆ ನಮ್ಮ ಮನೆಗೆ ಭೇಟಿ ನೀಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಸಂತಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್‌ ಮೂಲಗಳು ಖಚಿತಪಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...