ವೈದ್ಯಕೀಯ ಸೀಟು ನಿರಾಕರಣೆ, ಸಚಿವ ಪರಮೇಶ್ವರ್‌ ಒಡೆತನದ ಶಿಕ್ಷಣ ಸಂಸ್ಥೆಗೆ ₹15 ಲಕ್ಷ ಪರಿಹಾರ ನೀಡಲು ಹೈಕೋರ್ಟ್‌ ನಿರ್ದೇಶನ

Date:

ವೈದ್ಯಕೀಯ ಪದವಿಗೆ ಅಗತ್ಯವಿರುವ ಎಲ್ಲ ಅರ್ಹತೆಗಳಿದ್ದರೂ 2017 – 18ನೇ ಸಾಲಿನಲ್ಲಿ ಎಂಬಿಬಿಎಸ್‌ ಆಕಾಂಕ್ಷಿಯಾಗಿದ್ದ ವಿದ್ಯಾರ್ಥಿನಿಗೆ ಸೀಟು ನೀಡುವುದಾಗಿ ಭರವಸೆ ನೀಡಿ ನಿರಾಕರಿಸಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಒಡೆತನದ ತುಮಕೂರಿನ ಸಿದ್ದಾರ್ಥ ಉನ್ನತ ಶಿಕ್ಷಣ ಸಂಸ್ಥೆಗೆ 15 ಲಕ್ಷ ರೂ. ಪರಿಹಾರ ಪಾವತಿಸುವಂತೆ ನಿರ್ದೇಶನ ನೀಡಿದೆ.

ವಿದ್ಯಾರ್ಥಿನಿಗಾಗಿರುವ ಕಾನೂನುಬಾಹಿರ ತೊಂದರೆಗೆ ಶಿಕ್ಷಣ ಸಂಸ್ಥೆಯೇ ಜವಾಬ್ದಾರಿ ಎಂದು ಹೇಳಿರುವ ನ್ಯಾಯಪೀಠ, ‘ಮುಂದಿನ ಎರಡು ತಿಂಗಳಲ್ಲಿ ಪರಿಹಾರ ಮೊತ್ತ ಪಾವತಿಸಬೇಕು’ ಎಂದು ನಿರ್ದೇಶಿಸಿ ನ್ಯಾಯಮೂರ್ತಿ ಅನು ಸಿವರಾಮನ್‌ ಮತ್ತು ನ್ಯಾಯಮೂರ್ತಿ ಕೆ. ಮನ್ಮಧರಾವ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಏನಿದು ಪ್ರಕರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2017ರಲ್ಲಿ ವಿ. ಸಂಜನಾ ಅಖಿಲ ಭಾರತ ಮಟ್ಟದ ನೀಟ್‌ ಪರೀಕ್ಷೆಯಲ್ಲಿ 1,95,911 ರಾಂಕ್ ಪಡೆದುಕೊಂಡಿದ್ದರು. 2017ರ ಸೆ.1 ರಂದು ಸಿದ್ಧಾರ್ಥ ಅಕಾಡೆಮಿ ನಡೆಸಿದ್ದ ಕೌನ್ಸೆಲಿಂಗ್‌ನಲ್ಲಿ ಮೂಲ ದಾಖಲೆಗಳ ಜತೆಗೆ, 15.6 ಲಕ್ಷ ರೂ. ಡಿಡಿ ಸಲ್ಲಿಸಿದ್ದರು. ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮೌಖಿಕವಾಗಿ ತಿಳಿಸಿದ್ದರೂ, ಈ ಸಂಬಂಧ ಯಾವುದೇ ರಸೀದಿ ಇಲ್ಲವೇ ಸೀಟು ಹಂಚಿಕೆ ಪತ್ರ ನೀಡಿರಲಿಲ್ಲ.

ಕೆಲ ದಿನಗಳ ಬಳಿಕ 52 ಲಕ್ಷ ರೂ. ಬ್ಯಾಂಕ್‌ ಗ್ಯಾರಂಟಿ ನೀಡಬೇಕೆಂದು ಶಿಕ್ಷಣ ಸಂಸ್ಥೆ ಒತ್ತಾಯಿಸಿತ್ತು. ಅದನ್ನೂ ವ್ಯವಸ್ಥೆ ಮಾಡಿ ಗ್ಯಾರಂಟಿ ಸಲ್ಲಿಸಿದ್ದರು. ಆದರೆ, ಪ್ರವೇಶ ಸಂಬಂಧ ವಿದ್ಯಾರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಬ್ಯಾಂಕ್‌ ಗ್ಯಾರಂಟಿ ಸ್ವೀಕರಿಸುವುದಕ್ಕೆ ಸಾಧ್ಯವಿಲ್ಲವೆಂದು ತಿಳಿಸಿ ನಿರಾಕರಿಸಲಾಗಿತ್ತು. ಅದನ್ನು ಪ್ರಶ್ನಿಸಿ ಸಂಜನಾ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ವಿವಿಯ ವಾದ ತಿರಸ್ಕರಿಸಿರುವ ನ್ಯಾಯಪೀಠ, ” ಮಂದಿನ ವರ್ಷ ಸೀಟು ನೀಡುವುದಾಗಿ ಕುಲಪತಿ ನೀಡಿದ್ದಾರೆಂಬ ಪತ್ರದಲ್ಲಿಕುಲಪತಿ, ಪ್ರಾಂಶುಪಾಲರು ಮತ್ತು ಅರ್ಜಿದಾರರ ಸಹಿಗಳಿವೆ. ಈ ಪತ್ರವನ್ನು ಬಲವಂತವಾಗಿ ಪಡೆದುಕೊಂಡಿದ್ದಾರೆ ಎಂಬುದರ ಸಂಬಂಧ ದೂರು ದಾಖಲಾಗಿಲ್ಲ. ಜತೆಗೆ, ಅರ್ಜಿದಾರರಾದ ಸಂಜನಾ ನಿಗದಿತ ದಿನಕ್ಕೂ ಮೊದಲೇ ಶುಲ್ಕ ಪಾವತಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಎಲ್ಲಅಗತ್ಯತೆಗಳನ್ನು ಪೂರೈಸಿದ್ದಾರೆ. ತಕ್ಷಣ ಬ್ಯಾಂಕ್‌ ಗ್ಯಾರಂಟಿ ನೀಡಿದ್ದಾರೆ. ಹಾಗಾಗಿ, 15 ಲಕ್ಷ ರೂ. ಪರಿಹಾರ ನೀಡಬೇಕು,” ಎಂದು ಆದೇಶಿಸಿದೆ.

ಅರ್ಜಿದಾರರ ಪರ ವಕೀಲರು, ”ಅರ್ಜಿದಾರರಿಗೆ ಸೀಟು ನೀಡುವುದಕ್ಕೆ ನಿರಾಕರಿಸಿದ್ದು, ಅವರಿಗಿಂತಲೂ ಕಡಿಮೆ ರ್ಯಾಂಕ್‌ ಪಡೆದಿದ್ದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಬಳಿಕ 2018 – 19ನೇ ಶೈಕ್ಷಣಿಕ ಸಾಲಿನಲ್ಲಿ ಉಚಿತ ಸೀಟು ನೀಡುವುದಾಗಿ ವಿವಿ ಕುಲಪತಿ ಭರವಸೆ ಪತ್ರ ನೀಡಿದ್ದರು. ಆದರೆ, ಅದನ್ನು ಈಡೇರಿಸಿಲ್ಲ. ಇದರಿಂದ ಮತ್ತೆ 2018ರಲ್ಲಿ ಕೆಇಎ ಮೂಲಕ ಕೌನ್ಸೆಲಿಂಗ್‌ಗೆ ಹಾಜರಾಗಿ ಬಸವೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆದು ಕಾಲೇಜು ಶುಲ್ಕವಾಗಿ 24.2 ಲಕ್ಷ ರೂ. ಪಾವತಿ ಮಾಡಲಾಗಿದೆ,” ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...