ಬೈಕ್ ಟ್ಯಾಕ್ಸಿಗಳಿಗೆ ನೀತಿ ರೂಪಿಸದ ಸರ್ಕಾರ, ಹೈಕೋರ್ಟ್ ಬೇಸರ

Date:

ಬೈಕ್ ಟ್ಯಾಕ್ಸಿಗಳಿಗೆ ರಾಜ್ಯದಲ್ಲಿ ನೀತಿ ರೂಪಿಸಲು ಒಂದು ತಿಂಗಳ ಕಾಲಾವಕಾಶ ನೀಡಿದರೂ ಸೂಕ್ತ ಕ್ರಮಕ್ಕೆ ಮುಂದಾಗದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ಹೊರಹಾಕಿದೆ.

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಓಲಾ, ಉಬರ್‌ ಮತ್ತು ರ‍್ಯಾಪಿಡೋ ಮಾತೃ ಸಂಸ್ಥೆಗಳು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ, ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿತು.

“ಬೈಕ್ ಟ್ಯಾಕ್ಸಿಗಳಿಗೆ ನೀತಿ ರೂಪಿಸಲು ಒಂದು ತಿಂಗಳು ಸಮಯ ನೀಡಲಾಗಿದೆ. ಆದರೆ, ಈವರೆಗೂ ಸರ್ಕಾರ ನೀತಿ ರೂಪಿಸಿಲ್ಲ. ಅಲ್ಲದೆ, ಬೈಕ್ ಟ್ಯಾಕ್ಸಿ ನಿರ್ಬಂಧಿಸಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಅಲ್ಲದೆ, ಮುಂದಿನ ವಿಚಾರಣೆ ವೇಳೆ ಬೈಕ್ ಟ್ಯಾಕ್ಸಿ ಬಗ್ಗೆ ನಿಮ್ಮ ವಾದವನ್ನು ಮಂಡಿಸಿ. ಬಳಿಕ ಸೂಕ್ತ ಆದೇಶ ಹೊರಡಿಸಲಾಗುವುದು” ಎಂದು ಅಸಮಾಧಾನ ವ್ಯಕ್ತಪಡಿಸಿ ವಿಚಾರಣೆಯನ್ನು ಅಕ್ಟೋಬರ್‌ 15ಕ್ಕೆ ನಿಗದಿಪಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ವೇಳೆ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ, “ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನಿರ್ಬಂಧ ವಿಧಿಸಿದ್ದು, ಪ್ರಯಾಣಿಕರು ಬಳಸಲು ಅನುಮತಿ ನೀಡಿಲ್ಲ. ಕೇವಲ ಡೆಲಿವರಿಗಾಗಿ ಬಳಸಲು ಅವಕಾಶ ನೀಡಲಾಗಿದೆ. ಡೆಲಿವರಿಗಾಗಿ ಟ್ಯಾಕ್ಸಿ ಎಂದು ನೋಂದಣಿ ಮಾಡಿಸುವ ಅಗತ್ಯವಿಲ್ಲ. ಈ ಸಂಬಂಧ ನೀತಿ ರೂಪಿಸಿದ್ದೇವೆ. ಬೈಕ್‌ನಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಅವಕಾಶವಿಲ್ಲ. ಅನುಮತಿ ಇಲ್ಲದಿದ್ದರೂ ಬೈಕ್ ಟ್ಯಾಕ್ಸಿಗಳನ್ನು ಪ್ರಯಾಣಿಕರಿಗಾಗಿ ಬಳಸುತ್ತಿದ್ದಾರೆ. ಈ ರೀತಿಯಲ್ಲಿ ನಡೆದುಕೊಳ್ಳುತ್ತಿರುವ ಬೈಕ್ ಟ್ಯಾಕ್ಸಿ ಕಂಪನಿಗಳ ವಿರುದ್ಧ ಕ್ರಮಕ್ಕೆ ಅವಕಾಶ ನೀಡಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...