ಲೈಂಗಿಕ ಅಪರಾಧಗಳ ಅಪ್ರಾಪ್ತ ಸಂತ್ರಸ್ತರ ರಕ್ಷಣೆ ಮತ್ತು ಪುನರ್ವಸತಿಗಾಗಿ ‘SOP’ ರಚಿಸಿದ ಹೈಕೋರ್ಟ್‌

Date:

ಲೈಂಗಿಕ ಅಪರಾಧಗಳಿಗೆ ತುತ್ತಾಗುವ ಅಪ್ರಾಪ್ತ ಸಂತ್ರಸ್ತರ ರಕ್ಷಣೆ ಮತ್ತು ಪುನರ್ವಸತಿಗಾಗಿ ಕರ್ನಾಟಕ ಹೈಕೋರ್ಟ್, ‘ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ’ (SOP 2025)ಅನ್ನು ರಚಿಸಿದೆ. ಸಂಬಂಧಿತ ಎಲ್ಲ ಸಂಸ್ಥೆಗಳು ಈ ಎಸ್‌ಒಪಿಯನ್ನು ಅನುಸರಿಸಬೇಕು ಎಂದು ಹೇಳಿದೆ.

ಅಪ್ರಾಪ್ತ ಸಂತ್ರಸ್ತರ ರಕ್ಷಣೆ ಮತ್ತು ಪುನರ್ವಸತಿ ವಿಚಾರವಾಗಿ ಅಧಿಕಾರಿಗಳು ಅನುಸರಿಸುವ ಕಾರ್ಯವಿಧಾನದಲ್ಲಿ ಲೋಪಗಳು ಕಂಡುಬಂದಿವೆ ಎಂದು ಕೋರ್ಟ್‌ ಹೇಳಿದೆ. ಆದ್ದರಿಂದಲೇ, ಹೊಸದಾಗಿ ಎಸ್‌ಒಪಿ ಸಿದ್ದಪಡಿಸಲಾಗಿದೆ ಎಂದು ತಿಳಿಸಿದೆ.

ತನ್ನ ಚಿಕ್ಕಪ್ಪನ ಸ್ನೇಹಿತನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ 13 ವರ್ಷದ ಬಾಲಕಿಗೆ ‘ವೈದ್ಯಕೀಯ ಗರ್ಭಧಾರಣೆ ತಡೆ’ (MTP) ನಡೆಸಲು ಅನುಮತಿ ನೀಡುವ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ವಿಚಾರಣೆ ನಡೆಸಿದ್ದಾರೆ. “ನ್ಯಾಯಾಲಯದ ಮುಂದೆ ಹಲವಾರು ಎಂಟಿಪಿಗಾಗಿನ ಪ್ರಕರಣಗಳು ಬರುತ್ತಿವೆ. ಅಪ್ರಾಪ್ತ ಸಂತ್ರಸ್ತೆಯರ ಕುಟುಂಬಕ್ಕೆ ಸರಿಯಾದ ಸಮಯದಲ್ಲಿ MTP ಸಾಧ್ಯತೆಗಳ ಕುರಿತು ಅಧಿಕಾರಿಗಳು ತಿಳಿಸಿಲಾಗಿಲ್ಲ ಎಂಬುದು ನ್ಯಾಯಾಲಯದ ಗಮನಕ್ಕೆ ಬಂದಿಲ್ಲ. ಕುಟುಂಬಸ್ಥರಿಗೆ ಮಾಹಿತಿ ದೊರೆಯುವ ಹೊತ್ತಿಗೆ MTP ಕಾಯ್ದೆಯಡಿ ಅನುಮತಿಸಲಾದ ಅವಧಿ ಮೀರಿರುತ್ತದೆ. ಇದರಿಂದಾಗಿ ಬಲಿಪಶು ಈ ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ” ಎಂದು ಹೈಕೋರ್ಟ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರಿಗಳಿಗೆ ಹಲವಾರು ಸಂದರ್ಭಗಳಲ್ಲಿ ನಿರ್ದೇಶನಗಳನ್ನು ನೀಡಲಾಗಿದ್ದರೂ, ಅವುಗಳನ್ನು ಪಾಲಿಸಿಲ್ಲ. ಅಧಿಕಾರಿಗಳು ನಿರಂತರವಾಗಿ ನಿರ್ಲಕ್ಷಿಸುತ್ತಲೇ ಇದ್ದಾರೆ” ಎಂದು ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

“ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು ಪೋಕ್ಸೋ ಪ್ರಕರಣಗಳಲ್ಲಿ ಸಂತ್ರಸ್ತೆಯರಿಗೆ ನೆರವು ನೀಡಬೇಕಾದ ಎಲ್ಲ ಇಲಾಖೆಗಳು/ಅಧಿಕಾರಿಗಳಿಗೂ ಸೂಕ್ತವಾದ SOPಅನ್ನು ರೂಪಿಸಿದರೆ ಇವೆಲ್ಲವನ್ನೂ ಪರಿಹರಿಸಬಹುದು. ಅಂತಹ SOPಅನ್ನು ರೂಪಿಸುವವರೆಗೂ ಇಂತಹ ಪ್ರಕರಣಗಳು ಮುಂದುವರೆಯುತ್ತವೆ. ಹೀಗಾಗಿ, ನ್ಯಾಯಾಲಯವೇ ತಾತ್ಕಾಲಿಕ ಎಸ್‌ಒಪಿ ರಚಿಸಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ನ್ಯಾಯಾಲಯ ರೂಪಿಸಿರುವ ಈ SOP ಕೇವಲ ಸೂಚಕವಾಗಿದೆ. ತಜ್ಞರಿಂದ ಸಲಹೆ ಪಡೆದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಪೊಲೀಸ್‌ ಮಹಾನಿರ್ದೇಶಕರು ಸಮಗ್ರ SOP ಅನ್ನು ರೂಪಿಸಬೇಕು. ಇದು ಸಾಧ್ಯವಾದಷ್ಟು ಬೇಗ ಕಾರ್ಯಗತಗೊಳ್ಳಬೇಕು” ಎಂದು ಕೋರ್ಟ್‌ ಹೇಳಿದೆ.

SOPಯ ಪ್ರಾಥಮಿಕ ಉದ್ದೇಶಗಳು:

  • ಪ್ರತಿಯೊಬ್ಬ ಅಪ್ತಾಪ್ತ ಸಂತ್ರಸ್ತೆಗೆ ತಕ್ಷಣದ ಸುರಕ್ಷತೆ, ವೈದ್ಯಕೀಯ ಆರೈಕೆ ಹಾಗೂ ಮಾನಸಿಕ ಸ್ಥೈರ್ಯ ತುಂಬುವ ನೆರವನ್ನು ಖಾತ್ರಿಪಡಿಸುವುದು.
  • ಪ್ರತಿ ಹಂತದಲ್ಲೂ ಮಕ್ಕಳ ಸ್ನೇಹಿ ಕಾರ್ಯವಿಧಾನಗಳನ್ನು ಜಾರಿಗೆ ತರುವ ಮೂಲಕ ತ್ವರಿತ, ಸೂಕ್ಷ್ಮ ಹಾಗೂ ಆಘಾತ-ಮುಕ್ತ ತನಿಖೆಯನ್ನು ಖಚಿತಪಡಿಸುವುದು.
  • ಎಲ್ಲ ಪ್ರಕ್ರಿಯೆಗಳು ಮತ್ತು ದಾಖಲೆಗಳಲ್ಲಿ ಸಂತ್ರಸ್ತೆಯ ಗುರುತಿನ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು.
  • ಸಂತ್ರಸ್ತೆಯು ತನ್ನ ಮೇಲಾದ ದೌರ್ಜನ್ಯದ ಆಘಾತದಿಂದ ಹೊರಬಂದು ಆರೋಗ್ಯಕರವಾಗಿ ಸಮಾಜದಲ್ಲಿ ಯಶಸ್ವಿಯಾಗಿ ಬದುಕನ್ನು ರೂಪಿಸಿಕೊಳ್ಳುವವರೆಗೆ ಶಿಕ್ಷಣ, ಸಮಾಲೋಚನೆ ಹಾಗೂ ಜೀವನೋಪಾಯ ಬೆಂಬಲ ಒಳಗೊಂಡ ಸಮಗ್ರ ಪುನರ್ವಸತಿಯನ್ನು ಒದಗಿಸುವುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...