ನೀವು ಇತಿಹಾಸಕಾರರೇ, ಭಾಷಾತಜ್ಞರೇ: ಕಮಲ್ ಹಾಸನ್‌ಗೆ ಹೈಕೋರ್ಟ್ ತರಾಟೆ

Date:

“ಕನ್ನಡಿಗರ ಭಾವನೆಗಳಿಗೆ ಹಾನಿ ಮಾಡಿ, ಈಗ ಕ್ಷಮೆ ಕೇಳುವುದಿಲ್ಲ ಎಂದರೆ ಹೇಗೆ? ವಾಕ್‌ ಸ್ವಾತಂತ್ರ್ಯ ಎಂದರೆ ಬೇರೆಯವರ ಭಾವನೆಗಳಿಗೆ ಹಾನಿ ಮಾಡುವುದಲ್ಲ” ಎಂದು ಕರ್ನಾಟಕ ಹೈಕೋರ್ಟ್ ತಮಿಳು ನಟ ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ಹೇಳಿಕೆ ನೀಡಿದ ತಮಿಳು ನಟ ಕಮಲ್ ಹಾಸನ್ ಕ್ಷಮೆಯಾಚಿಸುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿದೆ. ಕ್ಷಮೆ ಕೇಳದಿದ್ದರೆ ಕಮಲ್ ಹಾಸನ್ ಸಿನಿಮಾವನ್ನು ಬಹಿಷ್ಕರಿಸಲಾಗುವುದು ಎಂದು ಚಿತ್ರರಂಗ ಹೇಳಿದೆ. ಈ ಎಲ್ಲಾ ಬೆಳವಣಿಗೆ ನಡುವೆ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಸಿನಿಮಾ ತಂಡವು ಕರ್ನಾಟಕ ಹೈಕೋರ್ಟ್ ಮೊರೆಹೋಗಿದೆ.

ಇದನ್ನು ಓದಿದ್ದೀರಾ? ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್ ಚಿತ್ರ ತಂಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಮಲ್‌ ಹಾಸನ್‌ ನಟಿಸಿರುವ ಥಗ್‌ ಲೈಫ್‌ ಸಿನಿಮಾ ಹಂಚಿಕೆ ಮತ್ತು ಬಿಡುಗಡೆಗೆ ಅಗತ್ಯ ಬಂದೋಬಸ್ತ್‌ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು, “ಸಾಕಷ್ಟು ಕೋಟಿ ಬಂಡವಾಳ ಹಾಕಿದ್ದೀರಿ ಎಂದು ಹೇಳಿದ್ದೀರಿ. ಪರವಾಗಿಲ್ಲ, ಕ್ಷಮೆ ಕೇಳಲು ಕಮಲ್‌ ಹಾಸನ್‌ಗೆ ಹೇಳಿ” ಎಂದು ಸೂಚಿಸಿದೆ.

ಕಮಲ್‌ ಹಾಸನ್‌ ಪರ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ವಾದಿಸಿದ್ದು, “ತಮಿಳಿನಿಂದ ಕನ್ನಡ ಉದಯಿಸಿದೆ ಎಂದು ಕಮಲ್‌ ಹಾಸನ್‌ ಹೇಳಿದ್ದರು. ಆ ಹೇಳಿಕೆ ಇಟ್ಟುಕೊಂಡು ಕಮಲ್‌ ಹಾಸನ್‌ ಅವರು ನಟಿಸಿರುವ ಥಗ್‌ ಲೈಫ್‌ ಸಿನಿಮಾಗೆ ನಿರ್ಬಂಧ ವಿಧಿಸಲಾಗಿದೆ. ನಮಗೆ ರಕ್ಷಣೆ ನೀಡಬೇಕು” ಎಂದು ಕೋರಿದರು.

“ತಮಿಳಿನಿಂದ ಕನ್ನಡ ಜನಿಸಿದೆ ಎಂದು ಹೇಳಲು ಕಮಲ್‌ ಹಾಸನ್‌ ಅವರು ಭಾಷಾತಜ್ಞರೇ? ಕ್ಷಮೆ ಕೇಳಿದ್ದರೆ ಎಲ್ಲವೂ ಮುಗಿಯುತ್ತಿತ್ತಲ್ಲವೇ? ಆ ಹೇಳಿಕೆ ನೀಡುವ ಅಗತ್ಯವೇನಿತ್ತು? ಇತಿಹಾಸ ಗೊತ್ತಿಲ್ಲದೇ ಆ ಹೇಳಿಕೆ ನೀಡಿದ್ದೇನೆ ಎಂದು ಕ್ಷಮೆ ಕೇಳಿದ್ದರೆ ಮುಗಿಯುತ್ತಿತ್ತಲ್ಲವೇ? ನೀವೇ ಸೃಷ್ಟಿ ಮಾಡಿರುವ ಸಮಸ್ಯೆಗೆ ಪೊಲೀಸರ ರಕ್ಷಣೆ ಕೋರುತ್ತಿದ್ದೀರಾ” ಎಂದು ಪೀಠ ಪ್ರಶ್ನಿಸಿದೆ.

ಇನ್ನು ವಿಡಿಯೋ ಪರಿಶೀಲಿಸಿದ ನ್ಯಾಯಮೂರ್ತಿಗಳು, “ಯಾರ ಭಾವನೆಯನ್ನೂ ತಮ್ಮ ಮನಸೋಇಚ್ಛೆ ನೋಯಿಸಲು ಬಿಡಲಾಗದು. ಹಲವು ಕೋಟಿ ನಷ್ಟವಾಗುತ್ತದೆ ಎನ್ನುವುದಾದರೆ, ನಿಮಗೆ ಕರ್ನಾಟಕ ಏತಕ್ಕೆ ಬೇಕು. ಅದನ್ನು ಬಿಡಿ. ನೀವು ಇತಿಹಾಸಕಾರರೇನಲ್ಲ ಎಂದ ಮೇಲೆ ಕ್ಷಮೆ ಕೋರಲು ಹೇಳಿ. ಆಡಿದ ಮಾತುಗಳು ಬರುವುದಿಲ್ಲ. ಕ್ಷಮೆ ಕೋರುವುದರ ಮೂಲಕ ಅವುಗಳಿಗೆ ಇತಿಶ್ರೀ ಹಾಡಬೇಕು” ಎಂದರು.

“ಅಶಾಂತಿ ಸೃಷ್ಟಿಯಾಗುವುದರ ಬಗ್ಗೆ ಸಮಾಜದಲ್ಲಿ ಖ್ಯಾತಿ ಹೊಂದಿರುವ ವ್ಯಕ್ತಿಯಾದ ಕಮಲ್‌ ಹಾಸನ್‌ ಅವರಿಗೆ ತಿಳಿದಿರಬೇಕು. ಇದನ್ನು ಸೃಷ್ಟಿಸುವುದು ಅವರೇ. ಅದಕ್ಕೆ ಮುಕ್ತಿ ಹಾಡಬೇಕಿರುವುದು ಅವರೇ. ಕ್ಷಮೆ ಕೋರಿದ್ದರೆ ಎಲ್ಲವೂ ಮುಗಿಯುತ್ತಿತ್ತು” ಎಂದು ಪೀಠ ಹೇಳಿದೆ. ಹಾಗೆಯೇ ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...