ಪಿಎಸ್‌ಐ ಅಕ್ರಮ | ಆರ್‌ ಡಿ ಪಾಟೀಲ್ ವಿರುದ್ಧದ ತನಿಖೆಗೆ ನೀಡಿದ್ದ ಹೈಕೋರ್ಟ್‌ ತಡೆಯಾಜ್ಞೆ ತೆರವು

Date:

ಪಿಎಸ್‌ಐ ನೇಮಕಾತಿ ಅಕ್ರಮದ ಕಿಂಗ್‌ ಪಿನ್ ಆರ್ ಡಿ ಪಾಟೀಲ್ ವಿರು‌ದ್ಧದ ಎಫ್‍ಐಆರ್ ಗಳಿಗೆ ತಡೆಯಾಜ್ಞೆ ವಿಧಿಸಿ ಹೈಕೋರ್ಟ್ 2023ರ ಎ.17ರಂದು ಮಾಡಿದ್ದ ಮಧ್ಯಂತರ ಆದೇಶವು ತೆರವಾಗಿದೆ.

ಈ ಮೂಲಕ ಆರ್ ಡಿ ಪಾಟೀಲ್​ಗೆ ಮತ್ತೊಂದು ಸಂಕಷ್ಟ ಶುರು‌ವಾಗಿದೆ. ಕಲಬುರಗಿ ಹೈಕೋರ್ಟ್ ಪೀಠ ಕಿಂಗ್‌ಪಿನ್ ಆರ್‌ ಡಿ ಪಾಟೀಲ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ.

ರಾಜ್ಯದ ಹಲವೆಡೆ ತನ್ನ ವಿರುದ್ಧ ದಾಖಲಾದ ಪ್ರಕರಣಗಳನ್ನ ವಿಲೀನಗೊಳಿಸಿ ಒಂದೇ ಕಡೆ ವಿಚಾರಣೆ ನಡೆಸಲು ಆರ್‌ ಡಿ ಪಾಟೀಲ್ ಮನವಿ ಮಾಡಿದ್ದರು. ಅಲ್ಲಿಯವರೆಗೆ ತನ್ನ ವಿರುದ್ಧ ದಾಖಲಾದ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿ, ಬೆಂಗಳೂರು, ಧಾರವಾಡ ಮತ್ತು ತುಮಕೂರಿನ ವಿವಿಧ ಠಾಣೆಗಳಲ್ಲಿ ವಿವಿಧ ಆರೋಪಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ದಾಖಲಾಗಿರುವ 11 ಎಫ್‍ಐಆರ್ ಹಾಗೂ ಆರೋಪ ಪಟ್ಟಿ ಒಟ್ಟಾಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಆದೇಶ ಪ್ರಕಟಿಸಿದೆ.

ಇತ್ತೀಚೆಗೆ ಕೆಇಎ ಅಕ್ರಮದಲ್ಲೂ ಈ ವ್ಯಕ್ತಿಯೇ ಕಿಂಗ್‌ ಪಿನ್‌ ಆಗಿದ್ದು, ಸಿಐಡಿ ಪೊಲೀಸರು ಈತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಎಲ್ಲ ಎಫ್‌ಐಆರ್‌ಗಳಿಗೆ ದಾಖಲಾದ ಪ್ರಕರಣಗಳನ್ನ ಒಂದೇ ಕಡೆ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಆರ್‌ ಡಿ ಪಾಟೀಲ್ ಮೇಲ್ಮನವಿಗೆ ಹೈಕೋರ್ಟ್ ಪೀಠ ಪ್ರತಿಕ್ರಿಯಿಸಿದೆ.

ಕಲಬುರಗಿ ನಗರದ ಅಶೋಕ್ ನಗರ ಠಾಣೆಯಲ್ಲಿ ಐದು, ಸ್ಟೇಷನ್ ಬಜಾರ್ ಠಾಣೆಯಲ್ಲಿ ಎರಡು, ಚೌಕ್ ಠಾಣೆಯಲ್ಲಿ ಒಂದು ಹಾಗೂ ಧಾರವಾಡದ ಸಬ್ ಅರ್ಬನ್, ತುಮಕೂರಿನ ಕ್ಯಾತಸಂದ್ರ ಹಾಗೂ ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಗಳಲ್ಲಿ ದಾಖಲಾಗಿರುವ ತಲಾ ಒಂದೊಂದು ಎಫ್‍ಐಆರ್ ಮತ್ತು ಆರೋಪ ಪಟ್ಟಿಯನ್ನು ಒಟ್ಟಾಗಿಸಬೇಕು ಎಂದು ಆರ್.ಡಿ ಪಾಟೀಲ್ ಮನವಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...