ತಲ್ವಾರ್‌ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂ ಸಮಾಜಕ್ಕೂ ಬರುತ್ತೆ: ಕೆ ಎಸ್‌ ಈಶ್ವರಪ್ಪ

Date:

  • ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಗುಲಾಮರಂತೆ ವರ್ತಿಸುತ್ತಿದೆ
  • ‘ಖಡ್ಗದ ಮೂಲಕ ಹಿಂದೂ ಸಮಾಜಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ’

ಶಿವಮೊಗ್ಗದಲ್ಲಿ ಗಲಾಟೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ತಲ್ವಾರ್‌ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂ ಸಮಾಜಕ್ಕೂ ಬರುತ್ತದೆ. ಕಾಂಗ್ರೆಸ್‌ ಸರ್ಕಾರ ಇದನ್ನು ಅರಿತುಕೊಳ್ಳಲಿ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದರು.

ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಗುಲಾಮರಂತೆ ವರ್ತಿಸುತ್ತಿದೆ. ಮೆರವಣಿಗೆಗೆ ಹೋಗುವ ಸಂದರ್ಭದಲ್ಲಿ ಕೈಯಲ್ಲಿ ತಲ್ವಾರ್ ಹಿಡಿದುಕೊಂಡು ಹೋಗುತ್ತಾರೆ. ಯಾರಿಗೆ ಎಚ್ಚರ ಅದು, ಹಿಂದೂ ಸಮಾಜಕ್ಕಾ?” ಎಂದು ಪ್ರಶ್ನಿಸಿದರು.

“ಶಿವಮೊಗ್ಗ ನಗರದಲ್ಲಿ ದೊಡ್ಡ ದೊಡ್ಡ ತಲ್ವಾರ್ ನೇತು ಹಾಕಿದ್ದಾರೆ. ಕೋಲಾರದಲ್ಲೂ ಹಾಕಿದ್ದರು. ಆದರೆ ಅಲ್ಲಿನ ಸಂಸದರ ಎಚ್ಚರಿಕೆ ಬಳಿಕ ತೆಗೆದರು. ಅದು ಗೊತ್ತಿದ್ದರೂ ಇಲ್ಲಿ ದೊಡ್ಡ ಖಡ್ಗ ಹಾಕಲು ಯಾಕೆ ಬಿಟ್ಟರು? ಪೊಲೀಸಿನವರು ಸರ್ಕಾರಕ್ಕೆ ಹೆದರಿ ಹೋಗಿದ್ದಾರೆ. ತಲ್ವಾರ್‌ಗೆ ತಲ್ವಾರ್ ಹಿಡಿದು, ಉತ್ತರ ಕೊಡಲು ಹಿಂದೂ ಸಮಾಜಕ್ಕೆ ಬರುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖಡ್ಗ ಹಾಕಿ ಯಾರಿಗೆ ಸ್ಫೂರ್ತಿ ಕೊಡುತ್ತಾರೆ. ಅವರೆಲ್ಲ ದೇಶ ದ್ರೋಹಿಗಳು. ಮುಸ್ಲಿಂ ಸಮಾಜ ಹಬ್ಬವನ್ನು ಮಾಡಿಲ್ಲ, ಅವರು ಹಿಂದೂ ಸಮಾಜಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಇದೆಲ್ಲ ಸರ್ಕಾರಕ್ಕೆ ಗೊತ್ತಿಲ್ಲವೇ? ರಾಗಿಗುಡ್ಡಕ್ಕೆ ನಮ್ಮ ಶಾಸಕರು ಹೋಗಿ ಬಂದಿದ್ದಾರೆ. ಮನೆಗಳಿಗೆ ನುಗ್ಗಿ ನುಗ್ಗಿ ಹೊಡೆದಿದ್ದಾರೆ. ಕಲ್ಲು ತೂರಾಟ ಮಾಡಿದ್ದಾರೆ. ಹಿಂದೂ ಮನೆಗಳಿಗೆ ಮಾತ್ರ ಕಲ್ಲು ಹೊಡೆದು, ಒಳ ನುಗ್ಗಿದ್ದಾರೆ” ಎಂದು ಹೇಳಿದರು.

“ಮುಸ್ಲಿಂ ಮನೆಗಳಿಗೆ ಯಾವುದೇ ಕಲ್ಲು ಬಿದ್ದಿಲ್ಲ. ಕರ್ತವ್ಯದಲ್ಲಿದ್ದ ಹಲವು ಪೊಲೀಸರಿಗೂ ಕಲ್ಲು ಬಿದ್ದಿದೆ. ಪೊಲೀಸರು ಮೆರವಣಿಗೆಗೆ ಅನುಮತಿ ಕೊಟ್ಟ ರೂಟ್ ಬೇರೆ ಆದರೆ ಅವರು ಹೋಗಿದ್ದೇ ಬೇರೆ. ಸಂಜೆ 6 ಗಂಟೆಗೆ ಮೆರವಣಿಗೆ ಮುಗಿಸಲು ಹೇಳಿದರೂ 7.30 ವರೆಗೂ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆ ಬದುಕಿದೆಯಾ” ಎಂದು ವಾಗ್ದಾಳಿ ನಡೆಸಿದರು.

“ಗೃಹಮಂತ್ರಿಗಳು ಬರಲಿ, ಆ ಏರಿಯಾದ ಮನೆಗಳಿಗೆ ಹೋಗಿ ನೋಡಲಿ. ಸಣ್ಣಪುಟ್ಟ ಗಲಾಟೆ, ತಲ್ವಾರ್ ಹಿಡಿದಿಲ್ಲ ಎನ್ನುವ ಸಚಿವರು ಗೃಹಮಂತ್ರಿ ಅಗಲು ಅನ್ ಫಿಟ್, ರಾಜೀನಾಮೆ ಕೊಡಲಿ. ಶಿವಮೊಗ್ಗದಲ್ಲಿ ಹಿಂದೂ ಸಮಾಜ ಎದ್ದು ನಿಂತರೇ, ಮುಸಲ್ಮಾನ ಸಮಾಜ ಉಳಿಯುತ್ತಾ?” ಎಂದು ಹೇಳಿದರು.

ಮುಸಲ್ಮಾನರ ರಕ್ಷಣೆಗೆ ಮಾತ್ರ ಕಾಂಗ್ರೆಸ್ ಸರ್ಕಾರ, ಪೊಲೀಸ್ ಇಲಾಖೆ ಇರುವುದಾ? ಹಿಂದೂಗಳ ರಕ್ಷಣೆ ಮಾಡಲ್ವಾ? ಹಿಂದೂ ಸಮಾಜದ ಯಾರು ಕೂಡ ಕಲ್ಲು ಹೊಡೆದಿಲ್ಲ. ಸಂಘಟನೆಗಳಲ್ಲಿ ಸಕ್ರಿಯರಾದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...