ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ

Date:

ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾವಣಗೆರೆ ಸೇರಿದಂತೆ ಕೆಲವೆಡೆ ಕಾರ್ಯಾಚರಣೆ ನಡೆಸಿದ ಸಿಸಿಬಿ, ಪತ್ರ ಬರೆದಿರುವ ಶಂಕೆಯ ಮೇರೆಗೆ 8 ಮಂದಿಯನ್ನು ವಶಕ್ಕೆ ಪಡೆದಿತ್ತು. ಈ ಪೈಕಿ ಶಿವಾಜಿ ರಾವ್‌ ಜಾಧವ್ ಮೇಲೆ ಸಿಸಿಬಿಗೆ ಪ್ರಬಲ ಗುಮಾನಿ ವ್ಯಕ್ತವಾಗಿತ್ತು.

ಖ್ಯಾತ ಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಂಜಗೆರೆ ಜಯಪ್ರಕಾಶ್, ಬಿ.ಎಲ್.ವೇಣು, ಬಿ.ಟಿ.ಲಲಿತಾ ನಾಯಕ್‌, ವಸುಂಧರ ಭೂಪತಿ ಸೇರಿದಂತೆ ಕೆಲವು ಸ್ವಾಮೀಜಿಗಳಿಗೆ ಅನಾಮಧೇಯ ಹೆಸರಿನಲ್ಲಿ ಜೀವ ಬೆದರಿಕೆ ಪತ್ರಗಳು ಬಂದಿದ್ದವು. ಈ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು, ಇದರ ಹಿಂದಿರುವವರನ್ನು ಪತ್ತೆ ಹಚ್ಚಲು ಸಿಸಿಬಿಗೆ ತನಿಖೆಗೆ ವಹಿಸಿತ್ತು.

ಪತ್ರಗಳು ನಿರಂತರವಾಗಿ ಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಬರವಣಿಗೆ ಹೋಲಿಕೆ?
ಈ ಸಾಹಿತಿಗಳಿಗೆ ಓರ್ವ ವ್ಯಕ್ತಿಯಿಂದಲೇ ಪತ್ರ ಬಂದಿರುವ ಬಗ್ಗೆ ಸಿಸಿಬಿ ಅನುಮಾನ ವ್ಯಕ್ತಪಡಿಸಿ, ಈ ಆಧಾರದ ಮೇರೆಗೆ ಪತ್ರ ಬರೆದ ಶಿವಾಜಿ ರಾವ್‌ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...