ಡಾ.ಬಿಳಿಮಲೆ ಹೇಳಿಕೆ ಅಪರಾಧ ಹೇಗಾಗುತ್ತದೆ? ಕೇಸು ಯಾಕಾಗಿ!

Date:

ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ ಅವರ ವಿರುದ್ದ ಯಕ್ಷಗಾನ ಕಲಾವಿದರೊಬ್ಬರು ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಹಿರಿಯ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು ಅವರು, “ಸಲಿಂಗ ಕಾಮ ಭಾರತದಲ್ಲಿ ಅಪರಾಧವಲ್ಲದ ಕಾರಣ, ಬಿಳಿಮಲೆಯವರ ಹೇಳಿಕೆ ಅಪರಾಧ ಆಗಲ್ಲ” ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ಅವರ ವಿವರಣೆ ಕೆಳಗಿನಂತಿದೆ.

ಒಬ್ಬ ವ್ಯಕ್ತಿಯನ್ನು ಕಳ್ಳ, ಸುಳ್ಳ, ವಂಚಕ, ಭ್ರಷ್ಟ, ರೇಪಿಸ್ಟ್ ಎಂದೆಲ್ಲ ಕರೆಯುವುದು ಅಪರಾಧ. ಯಾಕೆಂದರೆ ಈ ಕೃತ್ಯಗಳೆಲ್ಲ ಭಾರತೀಯ ದಂಡ ಸಂಹಿತೆಯಡಿ ಅಪರಾಧಗಳು. ಆದರೆ ಭಾರತದಲ್ಲಿ ಸಲಿಂಗ ಕಾಮ ಅಪರಾಧ ಅಲ್ಲ. 2018ರ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋ‍ರ್ಟ್ ನ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ನವತೇಜ್ ಸಿಂಗ್ ಜೋಹಾರ್ vs ಯೂನಿಯನ್ ಆಫ್ ಇಂಡಿಯಾ ಪ್ರಕರರಣದಲ್ಲಿ ಸಲಿಂಗ ಕಾಮ ಅಪರಾಧ ಎಲ್ಲ ಎನ್ನುವ ಐತಿಹಾಸಿಕ ತೀರ್ಪು ನೀಡಿದೆ.

ಅದೇ ತೀರ್ಪಿನಲ್ಲಿ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 377ರಲ್ಲಿ ಸಲಿಂಗ ಲೈಂಗಿಕ ಕ್ರಿಯೆಗಳನ್ನು ಅಪರಾಧವೆಂದು ಪರಿಗಣಿಸುತ್ತಿದ್ದ ಭಾಗ ಅಸಾಂವಿಧಾನಿಕ ಎಂದು ಘೋಷಿಸಿದೆ. ಪ್ರಸ್ತುತ ಭಾರತದಲ್ಲಿ ಪರಸ್ಪರ ಒಪ್ಪಿತ) ಸಲಿಂಗ ಲೈಂಗಿಕ ಸಂಬಂಧಗಳು ಸಂಪೂರ್ಣ ಕಾನೂನುಬದ್ಧ, ಮತ್ತು ಅಪರಾಧ ಅಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದಲ್ಲಿ ಸಲಿಂಗ ಕಾಮ ಅಪರಾಧ ಅಲ್ಲದ ಕಾರಣ ಇಲ್ಲಿನ ಸಲಿಂಗ ಜೋಡಿಗಳಿಗೆ ಮದುವೆಯಾಗುವ ಹಕ್ಕು ಕೂಡಾ ಇದೆ ಎಂದು 2023ರಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಸದ್ಯಕ್ಕೆ ಭಾರತದಲ್ಲಿ ಸಲಿಂಗ ಮದುವೆಗಳಿಗೆ ಕಾನೂನಿನ ಮಾನ್ಯತೆ ಇಲ್ಲ. ಈ ಬಗ್ಗೆ ಕಾನೂನನ್ನು ರೂಪಿಸುವ ಜವಾಬ್ದಾರಿಯನ್ನು ಸುಪ್ರೀಂ ಕೋರ್ಟ್ ಸಂಸತ್‌ಗೆ ನೀಡಿದೆ.

ಹೀಗಿರುವಾಗ ಅಪರಾಧ ಅಲ್ಲದ ಕೃತ್ಯವಾದ ಸಲಿಂಗ ಕಾಮ ಎಲ್ಲೋ ನಡೆಯುತ್ತಿದೆ ಎಂದು ಹೇಳುವುದು ಕಾನೂನಿನ ಪ್ರಕಾರ ಹೇಗೆ ಅಪರಾಧವಾಗುತ್ತದೆ? ಒಂದೊಮ್ಮೆ ಯಾವನಾದರೂ ವ್ಯಕ್ತಿ ಬಲತ್ಕಾರದಿಂದ ಇಲ್ಲವೇ ಪ್ರಾಣಿಗಳೊಡನೆ ಲೈಂಗಿಕ ಕ್ರಿಯೆ ನಡೆಸಿದರೆ ಮಾತ್ರ ಐಪಿಸಿ 377ರ ಅಡಿಯಲ್ಲಿ ಅಪರಾಧ ಆಗುತ್ತದೆ.

ಪುರುಷೋತ್ತಮ ಬಿಳಿಮಲೆಯವರು ಯಾವುದಾದರೂ ಒಬ್ಬ ಯಕ್ಷಗಾನ ಕಲಾವಿದನ ಹೆಸರೆತ್ತಿ ಆ ವ್ಯಕ್ತಿ ಬಲಾತ್ಕಾರವಾಗಿ ಸಲಿಂಗ ಕಾಮ ನಡೆಸಿದ್ದಾನೆ ಇಲ್ಲವೇ ಯಾವುದಾದರೂ ಪ್ರಾಣಿಗಳೊಡನೆ ಸಲಿಂಗ ಕಾಮಕ್ರೀಡೆಯಲ್ಲಿ ತೊಡಗಿದ್ದಾನೆ ಎಂದು ಆರೋಪಿಸಿದ್ದರೆ ಅದು ಅಪರಾಧವಾಗುತ್ತಿತ್ತು. ಯಕ್ಷಗಾನ ಕಲಾವಿದರಲ್ಲಿ ಸಲಿಂಗ ಕಾಮಿಗಳು ಇದ್ದಾರೆ ಎಂದು ಹೇಳುವುದು ಕಾನೂನಿನ ಪ್ರಕಾರ ಹೇಗೆ ಅಪರಾಧವಾಗುತ್ತದೆ? ಯಾರಾದರೂ ಕಾನೂನು ತಜ್ಞರು ಹೇಳಬೇಕು.

ವಾಸ್ತವ ಸಂಗತಿ ಏನೆಂದರೆ ಕಲೆ, ಸಾಹಿತ್ಯ, ಮಾಧ್ಯಮ, ಕ್ರೀಡೆ ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಗಳು ಸೇರಿದಂತೆ ಯಕ್ಷಗಾನ ರಂಗದಲ್ಲಿಯೂ ಸಲಿಂಗ ಕಾಮಿಗಳಿದ್ದಾರೆ. ಇಷ್ಟು ಮಾತ್ರವಲ್ಲ ಯಕ್ಷಗಾನ ಕ‍್ಷೇತ್ರದಲ್ಲಿ ಉಳಿದೆಲ್ಲ ಕ್ಷೇತ್ರಗಳಂತಯೇ ಜಾತೀಯತೆ, ಲಿಂಗತಾರತಮ್ಯ ಎಲ್ಲವೂ ಇದೆ. ಯಾರು ಒಪ್ಪಿದರೂ ಒಪ್ಪದೆ ಇದ್ದರೂ ಸತ್ಯವನ್ನು ಅಳಿಸಿಹಾಕಲಾಗುವುದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...